Home / ಕವನ / ಕವಿತೆ / ಬೇಡವೆನಗಿನ್ನೇನು!

ಬೇಡವೆನಗಿನ್ನೇನು!

ಮಾಲಕಂಸ

ಒಡೆಯ ನಿನ್ನಾಶೆಯೊಳೆ ತೊಡಕಿ ನಾ ಮಿಡುಕುತಿರೆ
ಹಡೆದಮ್ಮ ಕೂಗಿದಳು: “ಹುಡುಗಿ ಇಲ್ಲಿಗೆ ಬಾರೆ!”
ಜಡಭಾವದಿಂದ ಎಳೆದಿಡುತಲಡಿಗಳನು
ನಡೆದು ಅವಳೆಡೆಗೆ ಕೇಳಿದೆ: “ಕರೆದುದೇನು?”
ಕಿರುನಗೆಯ ನಗುತಮ್ಮ ಹೊರಮನೆಗೆ ಕರೆತಂದು
“ನಿರುಕಿಸೆಲ್ಲವ ನಿನ್ನದಿರುವುದಿದು” ಎಂದೊರೆದು
ಹರಡಿರುವ ಒಡವೆಗಳನೆಲ್ಲ ತೋರಿದಳು,
ಬೆರತು ನಾ ನಿಂತೆ ಬೆರಳಿರಿಸಿ ಬಾಯಿಯೊಳು.
ಬಣ್ಣ ಬಣ್ಣದ ಸೀರೆ ಹೊನ್ನ ಹೂ-ರವಿಕೆಗಳು!
ರನ್ನದೋಲೆಯು ಮುತ್ತು ಚಿನ್ನ ದಾಭರಣಗಳು!
ಕುಸುರು ಕುಸುರಿನ ಹವಳ ಬೆಸೆದ ಕಂಕಣವು!
ಹಸನು ಹೊಗರುಗುವ ಕಾಲ್‌ಕಡಗ ಪೈಜಣವು!
ಬಗೆಬಗೆಯ ಕೆಮ್ಮೆಣ್ಣೆ ಸೊಗಸೆನಿಪ ಪನ್ನೀರು!
ಮೃಗಸಾರ ಕರ್ಪೂರ ಅಗುರು-ಗಂಧದ ತಿಗುರು!
ಹಣ್ಣು ಹಂಪಲವು ಸವಿಯನ್ನ ದಿನಿಸುಗಳು!
ಕಣ್ಣ ಸೆಳೆಯುವ ಹಲವು ಬಣ್ಣದರಳುಗಳು!
ನೋಡಿದೆನದೆಲ್ಲವನು, ನೋಡಿಯೇ ನೋಡಿದೆನು,
ಕೂಡಿಸಿದೆನದರಲಿಯೆ ನೀಡಿರುವ ನೋಟವನು.
‘ಎಲ್ಲವೂ ನನ್ನದಿದು’ ಎಂಬುದನ್ನು ನೆನೆದು
ಉಲ್ಲಸವು ಆಟವಾಡಿತು ಮನದಿ ಕುಣಿದು.
ಹಿಂಡುಹಿಂಡಾಗಿ ಹೆಣ್ಣುಗಳಲ್ಲಿಗೈತಂದು
ಕೊಂಡಾಡತೊಡಗಿದರು ನನ್ನ ದೈವವನಂದು.
ಕೊರೆಯುವೆದೆನೋವೆಲ್ಲ ಹೇಗೋ ಮರೆಯಾಯ್ತು
ಗರುವಿಕೆಗೆ ಮೈ-ಮನವದಾಗ ಸೆರೆಯಾಯ್ತು.
ಉಡುಗೆಯುಡಬಯಸಿದೆನು, ತೊಡಿಗೆಯಿಡಬಯಸಿದೆನು,
ಮುಡಿಬಿಗಿದು ಬೆಡಗಿನೊಳು ಮುಡಿವೆನೆಂದೆನು ಅರಳು,
ತಂಪು ಬಾವನ್ನದಣ್ಪನು ಮೈಗೆ ತೀಡಿ
ಸೊಂಪಾಗಿರುವೆನೆಂದೆ ಸವಿಯುಣಿಸನೂಡಿ.
‘ಮುಂದೇನು? ಮುಂದೇನು?’ ಎಂದು ಯಾರೋ ಕೇಳಿ-
ದಂದ ಕಿವಿದೆರೆಗೈದಲೆದೆಯು ಜುಽಮ್ಮನು ತಾಳಿ
ತನುವೊಮ್ಮಿದೊಮ್ಮೆಯೇ ನವಿರಿಗೊಳಗಾಯ್ತು,
ಇನಿಯ ನಿನ್ನಯ ನೆನಹೆ ಮನತುಂಬಿ ಹೋಯ್ತು.
ಬಿಡುಬಿಡರಿತೆನು ನಿನ್ನ ಹುಡುಗಾಟವೆಲ್ಲವನು
ಹಡೆದಮ್ಮ ಹೇಳಿದಳು: ಒಡವೆಯಿವನೆಲ್ಲವನು
ನೀನೆ ನನಗಾಗಿಯೇ ಕಳುಹಿರುವೆಯಂತೆ!
ಏನು ಈ ಮೊಡಿಯಾಟವನೆಲ್ಲಿ ಕಲಿತೆ?
ತೊಡೆಯಲಿಕೆ ನೆನಹನೀನೊಡವೆಗಳ ಕಳುಹಿಸಿದೆ,
ಜಡಮತಿಯು ನಾನರಿವುಗೆಡುತನಕೆ ಬೆರಗಾದೆ.
ನಿನ್ನ ಮರಸುವ ಚಿನ್ನ ರನ್ನದೊಡಿಗೆಗಳು
ಮಣ್ಣುಗೂಡಲಿ ಹಾಳು ಬಣ್ಣದುಡುಗೆಗಳು!
ಬೇಡವೆನಗಿನ್ನೇನು! ಬೇಡವೆನಗಿನ್ನೇನು!
ಓಡಿ ಬಾ ದೊರೆಯೆ, ನೀನೇ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...