ಕೊರಗುತಿರುವೆದೆಗೆ ಬರೆ

ಸಾವೇರಿ


ನೀಕೊಡುವುದೆಂದು ಮನೆ-
ಯಾಕೆಯಧಿಕಾರವನು?
ಸಾಕಿದೇಕಾಕಿನಿಯ ಕಾಕುಬಾಳು!
ಹಾಕುತಿದೆ ಬರೆಯ ಮೊದ-
ಲೇ ಕೊರಗುತಿರುವೆದೆಗೆ
ಲೋಕದಾ ಜನರ ಬಡತನದ ಗೋಳು.


ನಿರುಕಿಸಿದರೆತ್ತಲೂ
ತಿರಿವವರ ತಂಡಗಳು
ಕುರುಡ-ಕುಂಟರು, ಕರುಣಗೀತದವರು!
ಕೊರೆವ ಚಳಿ ಬಿರುಬಿಸಿಲಿ-
ನರಿವಿಲ್ಲದಲೆ-ಕೂಳು-
ದೊರೆಯದಿದ್ದರು ದುಡಿವ ಜೀತದವರು!


ಹಸಿವು ಹಸಿವೆಂಬುಲುಹು
ದೆಸೆಯ ಮುತ್ತಿದೆ, ಜನದ
ಬಸಿರ ಬೇಗೆಗೆ ಹಸಿರೆ ಬಾಡುತಿಹವು;
ಹಸುಳೆಗಳು ಹಡೆದವರ
ಗಸಣಿಗಳೆಯಲಿಕೆಂದು
ಮಸಣದಲಿಯೇ ವಸತಿ ಮಾಡುತಿಹವು!


ನೋಡುತಿಹೆನೆಲ್ಲವನು
ನೀಡು-ನೋಟಗಳಿಂದೆ,
ಮಾಡುವೆನದೇನು..! ಬಿಸುಸುಯ್ಯುದೊಂದೆ;
ನಿನ್ನೆಲ್ಲ ಹೊನ್ನು ಹಣ
ನನ್ನದಾಗಿದ್ದರೂ
ಚೆನ್ನ! ಬರಿಗೈ-ಬಡವಿಯಿರುವೆನಿಂದೆ.


ಒಡೆಯ ನೀನೊಲಿದು ನಿ-
ನ್ನೊಡವೆಯೆಲ್ಲವ ನನ್ನ
ಒಡೆಯತನಕೊಪ್ಪಿಸಿ ಅದೆಂದು ಕೊಡುವೆ?
ಕೊಡಲು ತಿರೆಯನೆ ತಿನುವ
ಬಡತನದ ಭೂತವನು
ಹೊಡೆದು ಹಸಿವಿನ ಪಿಡುಗ ತೊಡದೆ ಬಿಡುವೆ!

ದೈನ್ಯದಾ ದನಿಯ ಕರುಣದ ಮೊರೆಯ ಕೂಗ
ಇನ್ನೊಮ್ಮೆ ಕೇಳದಂತಾಗಿಸುವೆನಾಗ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರು ನಿನಗೆ ಸಮಯದಿ
Next post ಮುಕ್ತಿ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…