ಕೊರಗುತಿರುವೆದೆಗೆ ಬರೆ

ಸಾವೇರಿ


ನೀಕೊಡುವುದೆಂದು ಮನೆ-
ಯಾಕೆಯಧಿಕಾರವನು?
ಸಾಕಿದೇಕಾಕಿನಿಯ ಕಾಕುಬಾಳು!
ಹಾಕುತಿದೆ ಬರೆಯ ಮೊದ-
ಲೇ ಕೊರಗುತಿರುವೆದೆಗೆ
ಲೋಕದಾ ಜನರ ಬಡತನದ ಗೋಳು.


ನಿರುಕಿಸಿದರೆತ್ತಲೂ
ತಿರಿವವರ ತಂಡಗಳು
ಕುರುಡ-ಕುಂಟರು, ಕರುಣಗೀತದವರು!
ಕೊರೆವ ಚಳಿ ಬಿರುಬಿಸಿಲಿ-
ನರಿವಿಲ್ಲದಲೆ-ಕೂಳು-
ದೊರೆಯದಿದ್ದರು ದುಡಿವ ಜೀತದವರು!


ಹಸಿವು ಹಸಿವೆಂಬುಲುಹು
ದೆಸೆಯ ಮುತ್ತಿದೆ, ಜನದ
ಬಸಿರ ಬೇಗೆಗೆ ಹಸಿರೆ ಬಾಡುತಿಹವು;
ಹಸುಳೆಗಳು ಹಡೆದವರ
ಗಸಣಿಗಳೆಯಲಿಕೆಂದು
ಮಸಣದಲಿಯೇ ವಸತಿ ಮಾಡುತಿಹವು!


ನೋಡುತಿಹೆನೆಲ್ಲವನು
ನೀಡು-ನೋಟಗಳಿಂದೆ,
ಮಾಡುವೆನದೇನು..! ಬಿಸುಸುಯ್ಯುದೊಂದೆ;
ನಿನ್ನೆಲ್ಲ ಹೊನ್ನು ಹಣ
ನನ್ನದಾಗಿದ್ದರೂ
ಚೆನ್ನ! ಬರಿಗೈ-ಬಡವಿಯಿರುವೆನಿಂದೆ.


ಒಡೆಯ ನೀನೊಲಿದು ನಿ-
ನ್ನೊಡವೆಯೆಲ್ಲವ ನನ್ನ
ಒಡೆಯತನಕೊಪ್ಪಿಸಿ ಅದೆಂದು ಕೊಡುವೆ?
ಕೊಡಲು ತಿರೆಯನೆ ತಿನುವ
ಬಡತನದ ಭೂತವನು
ಹೊಡೆದು ಹಸಿವಿನ ಪಿಡುಗ ತೊಡದೆ ಬಿಡುವೆ!

ದೈನ್ಯದಾ ದನಿಯ ಕರುಣದ ಮೊರೆಯ ಕೂಗ
ಇನ್ನೊಮ್ಮೆ ಕೇಳದಂತಾಗಿಸುವೆನಾಗ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರು ನಿನಗೆ ಸಮಯದಿ
Next post ಮುಕ್ತಿ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…