ಕೊರಗುತಿರುವೆದೆಗೆ ಬರೆ

ಸಾವೇರಿ


ನೀಕೊಡುವುದೆಂದು ಮನೆ-
ಯಾಕೆಯಧಿಕಾರವನು?
ಸಾಕಿದೇಕಾಕಿನಿಯ ಕಾಕುಬಾಳು!
ಹಾಕುತಿದೆ ಬರೆಯ ಮೊದ-
ಲೇ ಕೊರಗುತಿರುವೆದೆಗೆ
ಲೋಕದಾ ಜನರ ಬಡತನದ ಗೋಳು.


ನಿರುಕಿಸಿದರೆತ್ತಲೂ
ತಿರಿವವರ ತಂಡಗಳು
ಕುರುಡ-ಕುಂಟರು, ಕರುಣಗೀತದವರು!
ಕೊರೆವ ಚಳಿ ಬಿರುಬಿಸಿಲಿ-
ನರಿವಿಲ್ಲದಲೆ-ಕೂಳು-
ದೊರೆಯದಿದ್ದರು ದುಡಿವ ಜೀತದವರು!


ಹಸಿವು ಹಸಿವೆಂಬುಲುಹು
ದೆಸೆಯ ಮುತ್ತಿದೆ, ಜನದ
ಬಸಿರ ಬೇಗೆಗೆ ಹಸಿರೆ ಬಾಡುತಿಹವು;
ಹಸುಳೆಗಳು ಹಡೆದವರ
ಗಸಣಿಗಳೆಯಲಿಕೆಂದು
ಮಸಣದಲಿಯೇ ವಸತಿ ಮಾಡುತಿಹವು!


ನೋಡುತಿಹೆನೆಲ್ಲವನು
ನೀಡು-ನೋಟಗಳಿಂದೆ,
ಮಾಡುವೆನದೇನು..! ಬಿಸುಸುಯ್ಯುದೊಂದೆ;
ನಿನ್ನೆಲ್ಲ ಹೊನ್ನು ಹಣ
ನನ್ನದಾಗಿದ್ದರೂ
ಚೆನ್ನ! ಬರಿಗೈ-ಬಡವಿಯಿರುವೆನಿಂದೆ.


ಒಡೆಯ ನೀನೊಲಿದು ನಿ-
ನ್ನೊಡವೆಯೆಲ್ಲವ ನನ್ನ
ಒಡೆಯತನಕೊಪ್ಪಿಸಿ ಅದೆಂದು ಕೊಡುವೆ?
ಕೊಡಲು ತಿರೆಯನೆ ತಿನುವ
ಬಡತನದ ಭೂತವನು
ಹೊಡೆದು ಹಸಿವಿನ ಪಿಡುಗ ತೊಡದೆ ಬಿಡುವೆ!

ದೈನ್ಯದಾ ದನಿಯ ಕರುಣದ ಮೊರೆಯ ಕೂಗ
ಇನ್ನೊಮ್ಮೆ ಕೇಳದಂತಾಗಿಸುವೆನಾಗ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರು ನಿನಗೆ ಸಮಯದಿ
Next post ಮುಕ್ತಿ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…