Home / ಕವನ / ಕವಿತೆ / ಉನ್ಮಾದಿನಿ

ಉನ್ಮಾದಿನಿ

ವಸಂತ


ಬಂದೆ ಬರುವನಂತೆ ಆತ
ಬಂದೆ ಬರುವನಂತೆ !
ಚೆಂದದೊಸಗೆಯನ್ನು ಕೇಳಿ
ನವಿರ ಹೊರೆಯನಾಂತೆ !

ನಿಂದೆ ಮರುಳೆಯಂತೆ….
ನಿಂದೆ ಮರುಳೆಯಂತೆ, ನೆರೆಯೆ
ಮೈಮರೆವಿನ ಸಂತೆ.


ಇನಿಯ ಬರುವ ಮೊದಲೆ ನನ್ನ
ಮನೆಯನೆಂತು ಮಿನುಗಿಸುವೆ?
ಮನಸು ಮೆಚ್ಚಿ ತಕ್ಕಿಪಂತೆ
ತನುವನೆಂತು ತೊಳಗಿಸುವೆ?

ಬರಲು ನಿಲುವೆನೆಂತು….?
ಬರಲು ನಿಲುವೆನೆಂತು? ಅವನ
ಕರೆದು ನುಡಿವೆನೆಂತು?


ಆತನನೆಂತಾದರಿಸಲಿ?
ಆಸನವಾವುದನಿರಿಸಲಿ?
ಪ್ರೀತಿ ಯಾವ ರಸದೊಳೇನೊ!
ಪಾಕವನಾವುದ ತರಿಸಲಿ?

ತಿಳಿಯಲೊಲ್ಲದೊಂದು….!
ತಿಳಿಯಲೊಲ್ಲದೊಂದು, ಅವನ
ತಣಿಸುವ ತೆರನಿಂದು!


ತಣಿಸುವ ತೆರನೊಂದರಿಯದೆ,
ತಿಳಿದ ಜನರೊಳಾರಯ್ಯದೆ,
ಇನಿಯನ ನೋಡಲಿಕ್ಕೆ ಬರಿದೆ
ಹಲುಬಿದೆ; ಬಲು ಹುಚ್ಚಿಯಾದೆ;

ನೋಡುವೆನವನನ್ನು ….!
ನೋಡುವೆನವನನ್ನು, ಆಗ
ಮಾಡಲಿ ನಾನೇನು?


ಮಾಡದಲಾವಾವುದನೂ
ಮೋಡಿವಡೆದ ತೆರದಿ ನಾನು
ನೋಡುತಲಾತನನೆ ನಿಂತು,
ಬೇಡಿಕೊಳುವೆ ನಯದೊಳಿಂತು:

“ನೋಡು ಒರೆಗೆ ಹಚ್ಚಿ….!
“ನೋಡು ಒರೆಗೆ ಹಚ್ಚಿ, ದೊರೆಯೆ
ನಾನಿರುವೆನು ಹುಚ್ಚಿ!”


“ನಿನ್ನ ಕಾಂಬ ಉನ್ಮಾದದಿ
ಇನ್ನಾವುದನರಿಯದವಳು,
“ನಾಣು ಜಾಣು ರೀತಿ ನೀತಿ
ಮಾನಾದರ ಕಾಣದವಳು,

“ನೀನೆ ಹೇಳು ನಲ್ಲಾ….!
“ನೀನೆ ಹೇಳು ನಲ್ಲ, ಮಾಡ-
ಲೇನು ನಾನದೆಲ್ಲಾ!”


ಬಿನ್ನವಿಸಲು ನನ್ನಿ ಕತೆ
ಉನ್ಮಾದಿನಿಯಿವಳೆನ್ನುತೆ
ಚೆನ್ನ ಮರಳಿ ತೆರಳುವನೇ-
ನನ್ನೊಳು ಕೀಳ್‌ಗಣ್ಣಿರಿಸುತೆ ?
ಅಹುದೆ ತೆರಳಬಹುದೇ…?
ಅಹುದೆ ತೆರಳಬಹುದೆ ? ಅವಗೆ
ನನ್ನಿರವಿದು ಅರಿದೇ ?


ನನ್ನಿರವಿದು ತಿಳಿಯದೇನು ?
ಮನ್ನೆಯನವ ಮರುಳನೇನು ?
ನನ್ನಿ ಯು ತನಗಾಗಿ ಈಕೆ
ಉನ್ಮಾದಿನಿಯಾದಳೆನುತೆ

ಕರೆವ ಕರುಣೆಯಿಂದೆ….
ಕರೆವ ಕರುಣೆಯಿಂದೆ, ನನ್ನ –
ನಿರಿಸಿಕೊಳುವ ಮುಂದೆ.
ಇರಿಸಿಕೊಳುವ ಮುಂದೆ, ಒಡನೆ
ಬೆರೆವ ನಲುಮೆಯಿಂದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...