Home / ಕವನ / ಕವಿತೆ / ಹೊಸ ಬಾಳ ಬೆಳಕು

ಹೊಸ ಬಾಳ ಬೆಳಕು

(೧೫-೮-೪೭)

ಆ ಮಹಾತ್ಮರ ತಪವೊ ಭಕ್ತಿಭಾವದ ಗುಣವೊ
ಭಾರತಿಯ ಕಣ್ಣೀರೊ ಉಳಿದವರ ಹಸಿವೊ
ಜವಾಹರ ವಲ್ಲಭರ ರಾಜೇಂದ್ರ ಮೌಲನರ
ನಿರುತ ಪೌರುಷವೆನಲು ಬಂದುದೀ ಬೆಳಕು.

ನಿರುತ ತಾರುಣ್ಯದಲಿ ರಂಜಿಸುವ ಭಾರತಿಯು
ಪರತಂತ್ರ ಬಂಧನದಿ ಮುದುಕಿಯಂತಾಗಿ
ಇನ್ನೊಮ್ಮೆ ಸೆರೆಮನೆಯನೊಡೆದು ಹೊರ ತಾ ಬಂದು
ನೋಡುವಳು ಎಮ್ಮನ್ನು ಬಾಷ್ಪವನೆ ತುಂಬಿ.

ಕುಂಕುಮವ ತಳೆದಿಂದೆ ಮುತ್ತೈದೆತನದಿಂದ
ಆ ಮೊದಲ ತಾರುಣ್ಯ-ಲಾವಣ್ಯವೆಸೆಯೆ
ತಾಯಿ ನೋಡುವಳಿತ್ತ ನಗುಮೊಗದಿ ಕೃಪೆ ಬೀರಿ
ಎದೆಯರಳಿ ಕರೆಯುವಳು-ಅಡಿಗರಗಿ ನಮಿಸಿ-

ಪರದಾಸ್ಯ ಶೃಂಖಲೆಯ ಮುರಿದು ಬಂದಿಹಳೀಚೆ
ಎಲ್ಲ ಭಯಗಳ ತಳ್ಳಿ ಫಡ ನೂಕುತಾಚೆ
ಸ್ವಾತಂತ್ರ್ಯ ಬಾವುಟವ ಮೇಲೇರಿಸುವಳದಕೊ
ನಿರ್ಮಲಿನ ತೇಜದಲಿ ಬಹ ಭಂಗಿಯದಕೊ.

ಸೇತುವೆಯಲಾ ಸಾದ ವಿಂಧ್ಯವೇ ತಾಯ್ನಡುವು
ತುಹಿನಗಿರಿ ಮಣಿಮುಕುಟ ನಮ್ಮ ತಾಯ್ಗೆ
ಎಡ ಬಲಕೆ ಕೈ ನೀಡಿ ಮಕ್ಕಳನು ಹರಸುವಳು
ಆ ನಿಲುವ ನೂಡುತೀ ದರ್ಶನವ ಮಾಡಿ.

ಹೆತ್ತ ಭೂಮಿಯ ಪುಣ್ಯ ಬೆಳೆದ ಮಣ್ಣಿನ ಧರ್ಮ
ಸೂರ್ಯ-ಚಂದ್ರರ ಸತ್ಯ ಭಾರತಿಯ ತಪವು.
ನಮಗೆ ಬೆಳಕಾಯ್ತಿಂದು ನಮ್ಮ ನೆನಪಾಯ್ತೆಮಗೆ
ಎಲ್ಲಿ ನೋಡಿದರಲ್ಲಿ ತಾಯ ಪ್ರತಿಬಿಂಬ.

ಹಲವು ಕಾಲದ ತಪದಿ ಬೆಂದು ನೊಂದಿಹ ಕರುಳು
ತನ್ನ ಮಕ್ಕಳು ಕಳೆದ ನಲೆಯ ನೆನೆಯುವಳು
ವೀರ ಧರ್ಮಾಸನದಿ ಪರರೇರಿ ನಲಿಯುತಿರೆ
ಕೈದುಗಳ ಕೆಳಗಿರಿಸಿ ಕಂದಿದಳು ಚದುರೆ.

ಹಾರುತಿದೆ ತಾಯ್ಸೆರಗು ಮೇಲೇರಿ ಧ್ವಜವಾಗಿ
ಅದೊ ಕಂಪು-ಬಿಳಿ-ಹಸುರು – ಮಧ್ಯೆ ವರ ಚಕ್ರ
ಆಗಸದಿ ಮೊಗದೋರಿ ಇನ್ನೊಮ್ಮೆ ಕೆಳಗಿಳಿಯೆ
ನೆಂದೊರೆವ ತೆರದಿಂದ ಅಭಯ ತೋರುತಿದೆ.

ಮೈತ್ರಿಯಲಿಬೀಳ್ಕೊಟ್ಟು ಆಂಗ್ಲರಂ ಕಳುಹುವಳು
ತೊಡೆಯ ಸಿಂಹಾಸನದಿ ಮಕ್ಕಳನು ನಿಲಿಸಿ-
ತಾಯಿಯನಲಂಕರಿಸಿ ಶಾಂತಿಯಂ ಪೊಂದುತಲಿ
ಜೈವುಘೇಯೆನುತವರು ನಡಯುತಿಹರದಕೊ-

ಸ್ವಾತಂತ್ರಗೀತವನು ಹಾಡುತಲಿ ಭೂಮಾತೆ
ಭಾರತಿಯ ಹರಸುವಳು ನಗುಮೊಗದಿ ಬಂದು.
ಹತ್ತು ದಿಕ್ಕಿನ ಗಾಳಿ ಹಾಡುತಿದೆ ಕೀರ್ತಿಯನು
ಭರತ ಮಾತೆಯ ಪಾದರಜವಿರಿಸಿ ಪಣೆಗೆ-
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...