Home / ಕವನ / ಕವಿತೆ / ಹೊಸ ಬಾಳ ಬೆಳಕು

ಹೊಸ ಬಾಳ ಬೆಳಕು

(೧೫-೮-೪೭)

ಆ ಮಹಾತ್ಮರ ತಪವೊ ಭಕ್ತಿಭಾವದ ಗುಣವೊ
ಭಾರತಿಯ ಕಣ್ಣೀರೊ ಉಳಿದವರ ಹಸಿವೊ
ಜವಾಹರ ವಲ್ಲಭರ ರಾಜೇಂದ್ರ ಮೌಲನರ
ನಿರುತ ಪೌರುಷವೆನಲು ಬಂದುದೀ ಬೆಳಕು.

ನಿರುತ ತಾರುಣ್ಯದಲಿ ರಂಜಿಸುವ ಭಾರತಿಯು
ಪರತಂತ್ರ ಬಂಧನದಿ ಮುದುಕಿಯಂತಾಗಿ
ಇನ್ನೊಮ್ಮೆ ಸೆರೆಮನೆಯನೊಡೆದು ಹೊರ ತಾ ಬಂದು
ನೋಡುವಳು ಎಮ್ಮನ್ನು ಬಾಷ್ಪವನೆ ತುಂಬಿ.

ಕುಂಕುಮವ ತಳೆದಿಂದೆ ಮುತ್ತೈದೆತನದಿಂದ
ಆ ಮೊದಲ ತಾರುಣ್ಯ-ಲಾವಣ್ಯವೆಸೆಯೆ
ತಾಯಿ ನೋಡುವಳಿತ್ತ ನಗುಮೊಗದಿ ಕೃಪೆ ಬೀರಿ
ಎದೆಯರಳಿ ಕರೆಯುವಳು-ಅಡಿಗರಗಿ ನಮಿಸಿ-

ಪರದಾಸ್ಯ ಶೃಂಖಲೆಯ ಮುರಿದು ಬಂದಿಹಳೀಚೆ
ಎಲ್ಲ ಭಯಗಳ ತಳ್ಳಿ ಫಡ ನೂಕುತಾಚೆ
ಸ್ವಾತಂತ್ರ್ಯ ಬಾವುಟವ ಮೇಲೇರಿಸುವಳದಕೊ
ನಿರ್ಮಲಿನ ತೇಜದಲಿ ಬಹ ಭಂಗಿಯದಕೊ.

ಸೇತುವೆಯಲಾ ಸಾದ ವಿಂಧ್ಯವೇ ತಾಯ್ನಡುವು
ತುಹಿನಗಿರಿ ಮಣಿಮುಕುಟ ನಮ್ಮ ತಾಯ್ಗೆ
ಎಡ ಬಲಕೆ ಕೈ ನೀಡಿ ಮಕ್ಕಳನು ಹರಸುವಳು
ಆ ನಿಲುವ ನೂಡುತೀ ದರ್ಶನವ ಮಾಡಿ.

ಹೆತ್ತ ಭೂಮಿಯ ಪುಣ್ಯ ಬೆಳೆದ ಮಣ್ಣಿನ ಧರ್ಮ
ಸೂರ್ಯ-ಚಂದ್ರರ ಸತ್ಯ ಭಾರತಿಯ ತಪವು.
ನಮಗೆ ಬೆಳಕಾಯ್ತಿಂದು ನಮ್ಮ ನೆನಪಾಯ್ತೆಮಗೆ
ಎಲ್ಲಿ ನೋಡಿದರಲ್ಲಿ ತಾಯ ಪ್ರತಿಬಿಂಬ.

ಹಲವು ಕಾಲದ ತಪದಿ ಬೆಂದು ನೊಂದಿಹ ಕರುಳು
ತನ್ನ ಮಕ್ಕಳು ಕಳೆದ ನಲೆಯ ನೆನೆಯುವಳು
ವೀರ ಧರ್ಮಾಸನದಿ ಪರರೇರಿ ನಲಿಯುತಿರೆ
ಕೈದುಗಳ ಕೆಳಗಿರಿಸಿ ಕಂದಿದಳು ಚದುರೆ.

ಹಾರುತಿದೆ ತಾಯ್ಸೆರಗು ಮೇಲೇರಿ ಧ್ವಜವಾಗಿ
ಅದೊ ಕಂಪು-ಬಿಳಿ-ಹಸುರು – ಮಧ್ಯೆ ವರ ಚಕ್ರ
ಆಗಸದಿ ಮೊಗದೋರಿ ಇನ್ನೊಮ್ಮೆ ಕೆಳಗಿಳಿಯೆ
ನೆಂದೊರೆವ ತೆರದಿಂದ ಅಭಯ ತೋರುತಿದೆ.

ಮೈತ್ರಿಯಲಿಬೀಳ್ಕೊಟ್ಟು ಆಂಗ್ಲರಂ ಕಳುಹುವಳು
ತೊಡೆಯ ಸಿಂಹಾಸನದಿ ಮಕ್ಕಳನು ನಿಲಿಸಿ-
ತಾಯಿಯನಲಂಕರಿಸಿ ಶಾಂತಿಯಂ ಪೊಂದುತಲಿ
ಜೈವುಘೇಯೆನುತವರು ನಡಯುತಿಹರದಕೊ-

ಸ್ವಾತಂತ್ರಗೀತವನು ಹಾಡುತಲಿ ಭೂಮಾತೆ
ಭಾರತಿಯ ಹರಸುವಳು ನಗುಮೊಗದಿ ಬಂದು.
ಹತ್ತು ದಿಕ್ಕಿನ ಗಾಳಿ ಹಾಡುತಿದೆ ಕೀರ್ತಿಯನು
ಭರತ ಮಾತೆಯ ಪಾದರಜವಿರಿಸಿ ಪಣೆಗೆ-
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...