Home / ಕವನ / ಕವಿತೆ / ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು
ಇರುಳಿನಲಿ ಭಯವೆರಸಿ ದಾರಿ ಮರೆದಿಹುದು
ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು
ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು.

ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ
ಕಳೆದೊಗೆದ ಸಿಪ್ಪೆಯೊಲು ಬಾಳಲರಿವಿಲ್ಲ
ಏನಪಾಯವು ಬಹುದೊ ಸೆರೆಯಲ್ಲದಿನ್ನಿಲ್ಲ
ಕಾಣದಿಹ ದಿಕ್ಕುಗಳ ನೋಡುತಿಹುದಲ್ಲ.

ಎಲ್ಲಿಂದ ಬಂದೆನೋ ಇಲ್ಲೆನಿತು ಸಮಯವೋ
ಎಲ್ಲಿಗೆಯ್ವುದೊ ಮುಂದೆ – ಮುಂದಾವ ನೋವೊ?
ಬಲ್ಲವರ ಸುಳಿವಿಲ್ಲ ಬಲ್ಲಿದರ ನೆರೆಯಿಲ್ಲ
ಇಲ್ಲಿ ಪರಮಡಿಲಿನಲಿ ತನಗಿನ್ನು ಸಾವೊ?

ದೀನ ದಿಟ್ಟಿಯು ಮೂಡಿ ಎದ್ದರೇನೋ ಎಂದು
ಮಾನಕೇ ಚ್ಯುತಿಯಾಯ್ತು ಇಲ್ಲಿ ತಾಂ ಬಂದು
ಹೀನತನದಿಂ ತನ್ನ ತಿನ್ನುವರು ಇವರೆಂದು
ಮ್ಲಾನಮುಖದಿಂ ಸೊರಗಿ ಕರಗುತಿದೆ ನೊಂದು.

ಹಳೆಯುಗದ ನೆನಪಿಲ್ಲ ಹೊಸ ಜಗದ ಅರಿವಿಲ್ಲ
ಕಳೆದುಳಿದ ದಿನಮಾನದಳತೆ ಗೊತ್ತಿಲ್ಲ
ಎಲ್ಲರೂ ತನ್ನಂತೆ ಕೊಳೆವ ಜೀವಿಗಳೆಲ್ಲ
ಹೊಲ್ಲದೀ ಬಾಳಿನ್ನು ಮೋಕ್ಷಕ್ಕೆ ಸಲ್ಲ.

ಇರವರಿಯದಿರುತಿಹರು ಅದಕ್ಕಾಗಿ ದುಃಖಿಸರು
ಹೊರಹೊಮ್ಮಿ ಸಾಗುತಿದೆ- ಅದ ಕಾಣರಿವರು
ಸರುವ ಸುಖವಿದು ಎಂಬ ಭ್ರಾಂತಿಯಿಂ ತುಂಬಿಹರು
ಜರೆ ಬಾಯ ತೆರೆದಿಹುದು ಅದ ನೋಡದಿಹರು.

ರೆಕ್ಕೆ ಮುರಿದಿಕ್ಕಿದರು ಕಾಲಲಡಿ ತುಳಿಯುವರು
ಹಕ್ಕನೊರೆಯುವವರಿಂಗೆ ಬುದ್ಧಿ ಹೇಳುವರು
ಅಕ್ಕರೆನರಿಯದರು ಸತ್ಯವನೆ ಕಾಣದರು
ಫಕ್ಕನೇ ಮುನಿಸಾಳ್ದು ಸೊಕ್ಕ ಬೀರುವ.

ಇದ ಕಂಡು ಭಯಗೊಂಡು ಕನಿಕರಿಸಿ ಉದ್ಧರಿಸಿ
ಬದುಕಿಸುವೆನಿವರನ್ನು ಎಂದು ನಿಜವರಸಿ
ಹದುಳ ನುಡಿಯಾಡಿದರೆ ಜಗ್ಗಿದರು ಸಿಂಡರಿಸಿ
ಹದನರಿತು ಬೇಡಿದುದು ಮಂಗಳವ ಹರಸಿ.

ಲೋಕ ಬದುಕಿದೊಡಾನು ಮುಕ್ತನಪ್ಪೆನು ಎಂದು
ಸಾಕಲ್ಯದಿಂ ಬೇಡುತಿರೆ ಬೆಳಕ ಕಂಡು
ಆ ಕಡೆಗೆ ಹಾರಿದುದು ನವಚೇತನವ ತಂದು
ನೂಕಿ ತಮ ಬೆಳಕಿತ್ತು ಸಂತಸದೊಳಂದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...