ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು
ಇರುಳಿನಲಿ ಭಯವೆರಸಿ ದಾರಿ ಮರೆದಿಹುದು
ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು
ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು.

ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ
ಕಳೆದೊಗೆದ ಸಿಪ್ಪೆಯೊಲು ಬಾಳಲರಿವಿಲ್ಲ
ಏನಪಾಯವು ಬಹುದೊ ಸೆರೆಯಲ್ಲದಿನ್ನಿಲ್ಲ
ಕಾಣದಿಹ ದಿಕ್ಕುಗಳ ನೋಡುತಿಹುದಲ್ಲ.

ಎಲ್ಲಿಂದ ಬಂದೆನೋ ಇಲ್ಲೆನಿತು ಸಮಯವೋ
ಎಲ್ಲಿಗೆಯ್ವುದೊ ಮುಂದೆ – ಮುಂದಾವ ನೋವೊ?
ಬಲ್ಲವರ ಸುಳಿವಿಲ್ಲ ಬಲ್ಲಿದರ ನೆರೆಯಿಲ್ಲ
ಇಲ್ಲಿ ಪರಮಡಿಲಿನಲಿ ತನಗಿನ್ನು ಸಾವೊ?

ದೀನ ದಿಟ್ಟಿಯು ಮೂಡಿ ಎದ್ದರೇನೋ ಎಂದು
ಮಾನಕೇ ಚ್ಯುತಿಯಾಯ್ತು ಇಲ್ಲಿ ತಾಂ ಬಂದು
ಹೀನತನದಿಂ ತನ್ನ ತಿನ್ನುವರು ಇವರೆಂದು
ಮ್ಲಾನಮುಖದಿಂ ಸೊರಗಿ ಕರಗುತಿದೆ ನೊಂದು.

ಹಳೆಯುಗದ ನೆನಪಿಲ್ಲ ಹೊಸ ಜಗದ ಅರಿವಿಲ್ಲ
ಕಳೆದುಳಿದ ದಿನಮಾನದಳತೆ ಗೊತ್ತಿಲ್ಲ
ಎಲ್ಲರೂ ತನ್ನಂತೆ ಕೊಳೆವ ಜೀವಿಗಳೆಲ್ಲ
ಹೊಲ್ಲದೀ ಬಾಳಿನ್ನು ಮೋಕ್ಷಕ್ಕೆ ಸಲ್ಲ.

ಇರವರಿಯದಿರುತಿಹರು ಅದಕ್ಕಾಗಿ ದುಃಖಿಸರು
ಹೊರಹೊಮ್ಮಿ ಸಾಗುತಿದೆ- ಅದ ಕಾಣರಿವರು
ಸರುವ ಸುಖವಿದು ಎಂಬ ಭ್ರಾಂತಿಯಿಂ ತುಂಬಿಹರು
ಜರೆ ಬಾಯ ತೆರೆದಿಹುದು ಅದ ನೋಡದಿಹರು.

ರೆಕ್ಕೆ ಮುರಿದಿಕ್ಕಿದರು ಕಾಲಲಡಿ ತುಳಿಯುವರು
ಹಕ್ಕನೊರೆಯುವವರಿಂಗೆ ಬುದ್ಧಿ ಹೇಳುವರು
ಅಕ್ಕರೆನರಿಯದರು ಸತ್ಯವನೆ ಕಾಣದರು
ಫಕ್ಕನೇ ಮುನಿಸಾಳ್ದು ಸೊಕ್ಕ ಬೀರುವ.

ಇದ ಕಂಡು ಭಯಗೊಂಡು ಕನಿಕರಿಸಿ ಉದ್ಧರಿಸಿ
ಬದುಕಿಸುವೆನಿವರನ್ನು ಎಂದು ನಿಜವರಸಿ
ಹದುಳ ನುಡಿಯಾಡಿದರೆ ಜಗ್ಗಿದರು ಸಿಂಡರಿಸಿ
ಹದನರಿತು ಬೇಡಿದುದು ಮಂಗಳವ ಹರಸಿ.

ಲೋಕ ಬದುಕಿದೊಡಾನು ಮುಕ್ತನಪ್ಪೆನು ಎಂದು
ಸಾಕಲ್ಯದಿಂ ಬೇಡುತಿರೆ ಬೆಳಕ ಕಂಡು
ಆ ಕಡೆಗೆ ಹಾರಿದುದು ನವಚೇತನವ ತಂದು
ನೂಕಿ ತಮ ಬೆಳಕಿತ್ತು ಸಂತಸದೊಳಂದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂಧಿಗಳು
Next post ಮರದ ಮಹತ್ವ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys