Home / ಕವನ / ಕವಿತೆ / ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು
ಇರುಳಿನಲಿ ಭಯವೆರಸಿ ದಾರಿ ಮರೆದಿಹುದು
ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು
ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು.

ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ
ಕಳೆದೊಗೆದ ಸಿಪ್ಪೆಯೊಲು ಬಾಳಲರಿವಿಲ್ಲ
ಏನಪಾಯವು ಬಹುದೊ ಸೆರೆಯಲ್ಲದಿನ್ನಿಲ್ಲ
ಕಾಣದಿಹ ದಿಕ್ಕುಗಳ ನೋಡುತಿಹುದಲ್ಲ.

ಎಲ್ಲಿಂದ ಬಂದೆನೋ ಇಲ್ಲೆನಿತು ಸಮಯವೋ
ಎಲ್ಲಿಗೆಯ್ವುದೊ ಮುಂದೆ – ಮುಂದಾವ ನೋವೊ?
ಬಲ್ಲವರ ಸುಳಿವಿಲ್ಲ ಬಲ್ಲಿದರ ನೆರೆಯಿಲ್ಲ
ಇಲ್ಲಿ ಪರಮಡಿಲಿನಲಿ ತನಗಿನ್ನು ಸಾವೊ?

ದೀನ ದಿಟ್ಟಿಯು ಮೂಡಿ ಎದ್ದರೇನೋ ಎಂದು
ಮಾನಕೇ ಚ್ಯುತಿಯಾಯ್ತು ಇಲ್ಲಿ ತಾಂ ಬಂದು
ಹೀನತನದಿಂ ತನ್ನ ತಿನ್ನುವರು ಇವರೆಂದು
ಮ್ಲಾನಮುಖದಿಂ ಸೊರಗಿ ಕರಗುತಿದೆ ನೊಂದು.

ಹಳೆಯುಗದ ನೆನಪಿಲ್ಲ ಹೊಸ ಜಗದ ಅರಿವಿಲ್ಲ
ಕಳೆದುಳಿದ ದಿನಮಾನದಳತೆ ಗೊತ್ತಿಲ್ಲ
ಎಲ್ಲರೂ ತನ್ನಂತೆ ಕೊಳೆವ ಜೀವಿಗಳೆಲ್ಲ
ಹೊಲ್ಲದೀ ಬಾಳಿನ್ನು ಮೋಕ್ಷಕ್ಕೆ ಸಲ್ಲ.

ಇರವರಿಯದಿರುತಿಹರು ಅದಕ್ಕಾಗಿ ದುಃಖಿಸರು
ಹೊರಹೊಮ್ಮಿ ಸಾಗುತಿದೆ- ಅದ ಕಾಣರಿವರು
ಸರುವ ಸುಖವಿದು ಎಂಬ ಭ್ರಾಂತಿಯಿಂ ತುಂಬಿಹರು
ಜರೆ ಬಾಯ ತೆರೆದಿಹುದು ಅದ ನೋಡದಿಹರು.

ರೆಕ್ಕೆ ಮುರಿದಿಕ್ಕಿದರು ಕಾಲಲಡಿ ತುಳಿಯುವರು
ಹಕ್ಕನೊರೆಯುವವರಿಂಗೆ ಬುದ್ಧಿ ಹೇಳುವರು
ಅಕ್ಕರೆನರಿಯದರು ಸತ್ಯವನೆ ಕಾಣದರು
ಫಕ್ಕನೇ ಮುನಿಸಾಳ್ದು ಸೊಕ್ಕ ಬೀರುವ.

ಇದ ಕಂಡು ಭಯಗೊಂಡು ಕನಿಕರಿಸಿ ಉದ್ಧರಿಸಿ
ಬದುಕಿಸುವೆನಿವರನ್ನು ಎಂದು ನಿಜವರಸಿ
ಹದುಳ ನುಡಿಯಾಡಿದರೆ ಜಗ್ಗಿದರು ಸಿಂಡರಿಸಿ
ಹದನರಿತು ಬೇಡಿದುದು ಮಂಗಳವ ಹರಸಿ.

ಲೋಕ ಬದುಕಿದೊಡಾನು ಮುಕ್ತನಪ್ಪೆನು ಎಂದು
ಸಾಕಲ್ಯದಿಂ ಬೇಡುತಿರೆ ಬೆಳಕ ಕಂಡು
ಆ ಕಡೆಗೆ ಹಾರಿದುದು ನವಚೇತನವ ತಂದು
ನೂಕಿ ತಮ ಬೆಳಕಿತ್ತು ಸಂತಸದೊಳಂದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...