ಕೃಷ್ಣಗಿರಿ ಕೃಷ್ಣರಾಯರಿಗೆ

ಕುಮಾರವ್ಯಾಸನ ವಾಣಿಯ ನುಡಿಯುವ
ವೀಣೆಯು- ಗಮಕದ ಶಾಸ್ತ್ರಜ್ಞಾನ
ಆ ಕವಿಕಾವ್ಯದ ದಿವ್ಯ ಧ್ವನಿಯಿಾ
ಕೃಷ್ಣನ ಹೃದಯದ ಗಾನದ ತಾನ-

ಕುವರವ್ಯಾಸನ ದೇಗುಲ ಕೃಷ್ಣನ
ಹಾಡುವ ಸೊಬಗಿನ ಹೃದಯ ನವೀನ
ಆ ಕವಿಯಗ್ಗಳಿಕೆಗಳಂ ಸಾಧಿಸಿ
ಶೋಧಿಸುತುಣಿಸುವ ಮಧುರಸ ಪಾನ.

ಎಲ್ಲಿದೆ ಜೀವ ಎಲ್ಲಿದೆ ಭಾವ
ಮೌನದ ಮಾತನು ಕುಣಿಸುವನಾವ-
ಸಂಗೀತದ ದನಿಯಿಂದಲಿ ಕೂಡಿಸಿ
ರಸಕಳ ತುಂಬುವ ಶಬ್ದದ ಜೀವ.

ಆ ಕವಿಯಿತ್ತನು ಮಾತಿನ ಮುತ್ತು
ಕೃಷ್ಣನ ಕೊರಳಿನ ಗಾನದ ಬಿತ್ತು
ಕೇಳುವ ಹೃದಯವ ಮಿಡಿಯುವ ಗತ್ತು
ಪಾತ್ರವನಾಡಿಪ ಪರಿಣತಿಯಿತ್ತು.

ಎಲ್ಲರನೊಂದೇ ಹೃದಯದಿ ತೋರುವ
ಸರ್ವರ ದೃಷ್ಟಿಗೆ ನೈಜವ ತರುವ
ಕೃಷ್ಣನ ಲೀಲೆಗಳೆಲ್ಲವ ತುಂಬುವ
ಭಾರತ ಚರಿತೆಯ ಹಾಡುವನಾವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನಸು ವಾಸ್ತವ
Next post ಕಿಟ್ಟು-ಪುಟ್ಟು

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys