Home / ಕವನ / ಕವಿತೆ / ಮಣ್ಣಿನ ಒಲವು

ಮಣ್ಣಿನ ಒಲವು

ಮಣ್ಣು ಹೊನ್ನಿನ ಗೂಡು
ಮಣ್ಣು ಜೀವದ ಸೂಡು
ಮಣ್ಣು ಹೆಣ್ಣಿನ ಬೀಡು
ಮಣ್ಣು ಗಂಡಿನ ನಾಡು.

ಮಣ್ಣು ಪಾವನಮೆದು
ತುಳಸಿ ಮೈತ್ರಿಕೆಯಾಯ್ತು
ಬಣ್ಣ ಬಣ್ಣದ ಮಣ್ಣು
ಮೈಗೆ ಪೂಸುವ ಗಂಧ.

ಉಪ್ಪು ಸಿಹಿಕಾರಗಳ
ಷಡ್ರಸಾಹಾರಗಳ
ಜೀವಕೇ ತವರಿದುವು
ಮಣ್ಣು ಸಂಜೀವನವು.

ಮಣ್ಣಿಂದ ಸಾಗರವು
ಸಾಗರದಿ ಮುತ್ತುಗಳು
ಹೊನ್ನು ರನ್ನಗಳೆಲ್ಲ
ಮಣ್ಣಿಂದಮೈಶ್ವರ್ಯ.

ಈ ರಾಜ್ಯ ಸಂಪದವು
ಈ ಸೌಧವರಮನೆಯು
ಸಾಮ್ರಾಜ್ಯ ಸಿಂಹಾಸ
ನಗಳು ಮಾಯದ ಮಣ್ಣು.

ನೀರೊಳಗೆ ಮುಳುಗಿಪುದು
ಆಗಸದಿ ಹಾರಿಪುದು
ನೆಲದಲ್ಲಿ ನಡೆಸುವುದು
ಶಕ್ತಿಗೇ ಗಣಿಯಿದುವು.

ದೇವ ಸೃಷ್ಟಿಯ ಮಣ್ಣು
ಬ್ರಹ್ಮಾಂಡಮಾಯ್ತಿಂದು
ಚಣ ಚಣಕೆ ಹೊಸ ಯುಗವ
ಕರೆಯುತಿದೆ ತೋರುತಿದೆ.

ಸಕಲ ಬಗೆಗಳ ಜೀವ
ಖನಿಜ ಸಂಪದ ಭಾವ
ದೈವಶಕ್ತಿಯು ತೀವಿ
ತುಂಬಿರುವ ವರ ಕಣಜ

ಈ ನಾಡು ಈ ಕಾಡು
ಎಂಬ ಭಾವದ ಮಾಯೆ
ಆಸೆ ಕಲಹದಸೂಯೆ
ಮಣ್ಗುಂಟಿ ಪರಿಕಿಸಲು.

ಮಣ್ಣಿಲ್ಲದಿನ್ನಿಲ್ಲ
ನಿತ್ಯವಸ್ತುವೆ ಮಣ್ಣು
ಮನವರಿಯದಿರ್ದೊಡೀ
ಕಣ್ಣರಿಯದೇ ನಿಜವ.

ದೇವರ್ಗೆ ಮಣ್ಣೆಂದ
ರೇನು ಪ್ರೇಮವೊ ಕಾಣೆ
ಅಮೃತವನೆ ಬಿತ್ತಿಹನು
ಜೀವಕಳೆ ತುಂಬುವನು.

ಮಣ್ಣಿಗಿಹ ಸುತ್ಯಾಗ
ಶುಚಿ ಪ್ರೀತಿ ವಾತ್ಸಲ್ಯ
ವೈರಾಗ್ಯಮುಪಕಾರ
ಗುಣವೊಲಿಯಲೆಮಗಿಂದು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...