Home / ಕವನ / ಕವಿತೆ / ಆಗಸದ ಕಾಣಿಕೆ

ಆಗಸದ ಕಾಣಿಕೆ

ಆಗಸದ ಕಡಲೊಡೆದು ಉಕ್ಕಿ ಹರಿಯುತಲಿಹುದು
ಲೋಕದೀ ಬೊಕ್ಕಸವ ತುಂಬುತಿಹುದು.
ಬೆಟ್ಟ ಗಿರಿ ತೂರೆ ತೋಡು ಕೆರೆ ಕುಂಟೆ ನದಿ ನದವು
ಬರುವ ಗಂಗೆಯ ಕರೆದು ಮನ್ನಿಸುವುವು.
ಆಗಸಕು ಭೂಮಿಗೂ ಬಾಂಧವ್ಯವನ್ನು ಬೆಳೆಸಿ
ಮಣ್ಣೊಳಿಹ ಸತ್ವಗಳ ತೆಗೆದು ಸೂಸಿ;
ಧನ್ಯರಾವ್ ಅಹಯೆಂದು ಕೆರೆನದಿಗಳುಕ್ಕೇರಿ
ಪಚ್ಚೆ ಪೈರುಗಳನ್ನು ತಗೆದು ತೋರಿ.

ಎಂಥೆಂಥ ರಸಮಿಹುದು ಈ ಭೂಮಿಯೊಳಗೆಂದು
ಎಳೆನೀರು ಸವಿಜೇನು ಕೊಳ್ಳಿ ಬಂದು
ಮಾಗಾಯಿ ನಾರಂಗ ರಸವಾಳೆ ದಾಳಿಂಬ
ನಗುನಗುತ ಬಳೆದಿಹವು ಮರದ ತುಂಬ
ಸ್ವರ್ಗಲೋಕದ ಸುರರೆ ಸವಿಯಿರಿದ ನೀವೆನುತ
ನೀಡಿಹಳು ನೆಲವೆಣ್ಣು ಲೋಕವಿದಿತ.
ಅಮರಲೋಕದ ವರ್ಷ ಮಣ್ಣಿನೊಳು ತಾನಿಳಿದು
ಒಳಗಿನೊಳಗಿನ ಸವಿಯ ಸೆಳೆಯುತಿಹುದು.

ಹನಿಹನಿಯು ಹರಳಾಗಿ ಸುರಿವನಿಯು ರಸವಾಗಿ
ನೆಲದೊಳಗೆ ಹೊನ್ನಾಗಿ ಹೊಳೆಯುತಿಹುದು
ಭಾರತಿಯು ನೀಡಿರುವ ವಜ್ರವಿಂದ್ರಂಗಾಯ್ತು
ವೃತ್ರನಂ ಕೊಲ್ಲುವೊಡೆ ಚಾಪಮಾಯ್ತು
ಎಮ್ಮ ಸಾಗರದೆರವು ಶಕ್ರನಾ ಮುಗಿಲೊಡ್ಡು
ಮತ್ತಲ್ಲಿ ಬೇರಿಹುದೆ ಸೌಖ್ಯದೊಡ್ಡು

ಇಲ್ಲಿಗಿಳಿವರು ಸರುವ ದೇವತೆಗಳಾದರದಿ
ಇಲ್ಲಿನೀ ಸವಿಯುಣಲು ಬಯಸಿ ಭರದಿ.

ನೆಲದ ವೀರರು ಹೋಗಿ ಸುರರ ಕಾಪಿಡಲಾಯ್ತು
ಇಂದಿನಾ ಇಂದ್ರಂಗೆ ರಾಜ್ಯಮಾಯ್ತು.
ಅಮರಲೋಕದ ಸುರರು ನರಲೋಕಕೆರವಿಗರು
ಅವರ ಹಂಗೆಮಗಿಲ್ಲ ನೋಡಿ ಸುರರು.
ಈ ರಸವು ಈ ನೀರು ಈ ಸುಖದ ಸವಿಯೂಟ
ನಮ್ಮ ಬಾಳಿಗೆ ಭೂಮಿಯಿತ್ತ ಮಾಟ.
ತುಂಬಲೀ ಧರೆಯೆಂದು ಗಗನ ವಿಶ್ವಾಸದಲಿ
ಇತ್ತ ಕಾಣಿಕ ಮಳೆಯು ನಿತ್ಯದಲ್ಲಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...