ಆಗಸದ ಕಾಣಿಕೆ

ಆಗಸದ ಕಡಲೊಡೆದು ಉಕ್ಕಿ ಹರಿಯುತಲಿಹುದು
ಲೋಕದೀ ಬೊಕ್ಕಸವ ತುಂಬುತಿಹುದು.
ಬೆಟ್ಟ ಗಿರಿ ತೂರೆ ತೋಡು ಕೆರೆ ಕುಂಟೆ ನದಿ ನದವು
ಬರುವ ಗಂಗೆಯ ಕರೆದು ಮನ್ನಿಸುವುವು.
ಆಗಸಕು ಭೂಮಿಗೂ ಬಾಂಧವ್ಯವನ್ನು ಬೆಳೆಸಿ
ಮಣ್ಣೊಳಿಹ ಸತ್ವಗಳ ತೆಗೆದು ಸೂಸಿ;
ಧನ್ಯರಾವ್ ಅಹಯೆಂದು ಕೆರೆನದಿಗಳುಕ್ಕೇರಿ
ಪಚ್ಚೆ ಪೈರುಗಳನ್ನು ತಗೆದು ತೋರಿ.

ಎಂಥೆಂಥ ರಸಮಿಹುದು ಈ ಭೂಮಿಯೊಳಗೆಂದು
ಎಳೆನೀರು ಸವಿಜೇನು ಕೊಳ್ಳಿ ಬಂದು
ಮಾಗಾಯಿ ನಾರಂಗ ರಸವಾಳೆ ದಾಳಿಂಬ
ನಗುನಗುತ ಬಳೆದಿಹವು ಮರದ ತುಂಬ
ಸ್ವರ್ಗಲೋಕದ ಸುರರೆ ಸವಿಯಿರಿದ ನೀವೆನುತ
ನೀಡಿಹಳು ನೆಲವೆಣ್ಣು ಲೋಕವಿದಿತ.
ಅಮರಲೋಕದ ವರ್ಷ ಮಣ್ಣಿನೊಳು ತಾನಿಳಿದು
ಒಳಗಿನೊಳಗಿನ ಸವಿಯ ಸೆಳೆಯುತಿಹುದು.

ಹನಿಹನಿಯು ಹರಳಾಗಿ ಸುರಿವನಿಯು ರಸವಾಗಿ
ನೆಲದೊಳಗೆ ಹೊನ್ನಾಗಿ ಹೊಳೆಯುತಿಹುದು
ಭಾರತಿಯು ನೀಡಿರುವ ವಜ್ರವಿಂದ್ರಂಗಾಯ್ತು
ವೃತ್ರನಂ ಕೊಲ್ಲುವೊಡೆ ಚಾಪಮಾಯ್ತು
ಎಮ್ಮ ಸಾಗರದೆರವು ಶಕ್ರನಾ ಮುಗಿಲೊಡ್ಡು
ಮತ್ತಲ್ಲಿ ಬೇರಿಹುದೆ ಸೌಖ್ಯದೊಡ್ಡು

ಇಲ್ಲಿಗಿಳಿವರು ಸರುವ ದೇವತೆಗಳಾದರದಿ
ಇಲ್ಲಿನೀ ಸವಿಯುಣಲು ಬಯಸಿ ಭರದಿ.

ನೆಲದ ವೀರರು ಹೋಗಿ ಸುರರ ಕಾಪಿಡಲಾಯ್ತು
ಇಂದಿನಾ ಇಂದ್ರಂಗೆ ರಾಜ್ಯಮಾಯ್ತು.
ಅಮರಲೋಕದ ಸುರರು ನರಲೋಕಕೆರವಿಗರು
ಅವರ ಹಂಗೆಮಗಿಲ್ಲ ನೋಡಿ ಸುರರು.
ಈ ರಸವು ಈ ನೀರು ಈ ಸುಖದ ಸವಿಯೂಟ
ನಮ್ಮ ಬಾಳಿಗೆ ಭೂಮಿಯಿತ್ತ ಮಾಟ.
ತುಂಬಲೀ ಧರೆಯೆಂದು ಗಗನ ವಿಶ್ವಾಸದಲಿ
ಇತ್ತ ಕಾಣಿಕ ಮಳೆಯು ನಿತ್ಯದಲ್ಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಳೆಗಾಗಿ
Next post ಮುದ್ದಿನ ಗಿಳಿ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…