Home / ಕವನ / ಕವಿತೆ / ಆಗಸದ ಕಾಣಿಕೆ

ಆಗಸದ ಕಾಣಿಕೆ

ಆಗಸದ ಕಡಲೊಡೆದು ಉಕ್ಕಿ ಹರಿಯುತಲಿಹುದು
ಲೋಕದೀ ಬೊಕ್ಕಸವ ತುಂಬುತಿಹುದು.
ಬೆಟ್ಟ ಗಿರಿ ತೂರೆ ತೋಡು ಕೆರೆ ಕುಂಟೆ ನದಿ ನದವು
ಬರುವ ಗಂಗೆಯ ಕರೆದು ಮನ್ನಿಸುವುವು.
ಆಗಸಕು ಭೂಮಿಗೂ ಬಾಂಧವ್ಯವನ್ನು ಬೆಳೆಸಿ
ಮಣ್ಣೊಳಿಹ ಸತ್ವಗಳ ತೆಗೆದು ಸೂಸಿ;
ಧನ್ಯರಾವ್ ಅಹಯೆಂದು ಕೆರೆನದಿಗಳುಕ್ಕೇರಿ
ಪಚ್ಚೆ ಪೈರುಗಳನ್ನು ತಗೆದು ತೋರಿ.

ಎಂಥೆಂಥ ರಸಮಿಹುದು ಈ ಭೂಮಿಯೊಳಗೆಂದು
ಎಳೆನೀರು ಸವಿಜೇನು ಕೊಳ್ಳಿ ಬಂದು
ಮಾಗಾಯಿ ನಾರಂಗ ರಸವಾಳೆ ದಾಳಿಂಬ
ನಗುನಗುತ ಬಳೆದಿಹವು ಮರದ ತುಂಬ
ಸ್ವರ್ಗಲೋಕದ ಸುರರೆ ಸವಿಯಿರಿದ ನೀವೆನುತ
ನೀಡಿಹಳು ನೆಲವೆಣ್ಣು ಲೋಕವಿದಿತ.
ಅಮರಲೋಕದ ವರ್ಷ ಮಣ್ಣಿನೊಳು ತಾನಿಳಿದು
ಒಳಗಿನೊಳಗಿನ ಸವಿಯ ಸೆಳೆಯುತಿಹುದು.

ಹನಿಹನಿಯು ಹರಳಾಗಿ ಸುರಿವನಿಯು ರಸವಾಗಿ
ನೆಲದೊಳಗೆ ಹೊನ್ನಾಗಿ ಹೊಳೆಯುತಿಹುದು
ಭಾರತಿಯು ನೀಡಿರುವ ವಜ್ರವಿಂದ್ರಂಗಾಯ್ತು
ವೃತ್ರನಂ ಕೊಲ್ಲುವೊಡೆ ಚಾಪಮಾಯ್ತು
ಎಮ್ಮ ಸಾಗರದೆರವು ಶಕ್ರನಾ ಮುಗಿಲೊಡ್ಡು
ಮತ್ತಲ್ಲಿ ಬೇರಿಹುದೆ ಸೌಖ್ಯದೊಡ್ಡು

ಇಲ್ಲಿಗಿಳಿವರು ಸರುವ ದೇವತೆಗಳಾದರದಿ
ಇಲ್ಲಿನೀ ಸವಿಯುಣಲು ಬಯಸಿ ಭರದಿ.

ನೆಲದ ವೀರರು ಹೋಗಿ ಸುರರ ಕಾಪಿಡಲಾಯ್ತು
ಇಂದಿನಾ ಇಂದ್ರಂಗೆ ರಾಜ್ಯಮಾಯ್ತು.
ಅಮರಲೋಕದ ಸುರರು ನರಲೋಕಕೆರವಿಗರು
ಅವರ ಹಂಗೆಮಗಿಲ್ಲ ನೋಡಿ ಸುರರು.
ಈ ರಸವು ಈ ನೀರು ಈ ಸುಖದ ಸವಿಯೂಟ
ನಮ್ಮ ಬಾಳಿಗೆ ಭೂಮಿಯಿತ್ತ ಮಾಟ.
ತುಂಬಲೀ ಧರೆಯೆಂದು ಗಗನ ವಿಶ್ವಾಸದಲಿ
ಇತ್ತ ಕಾಣಿಕ ಮಳೆಯು ನಿತ್ಯದಲ್ಲಿ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...