Home / ಕವನ / ಕವಿತೆ / ಆಗಸದ ಕಾಣಿಕೆ

ಆಗಸದ ಕಾಣಿಕೆ

ಆಗಸದ ಕಡಲೊಡೆದು ಉಕ್ಕಿ ಹರಿಯುತಲಿಹುದು
ಲೋಕದೀ ಬೊಕ್ಕಸವ ತುಂಬುತಿಹುದು.
ಬೆಟ್ಟ ಗಿರಿ ತೂರೆ ತೋಡು ಕೆರೆ ಕುಂಟೆ ನದಿ ನದವು
ಬರುವ ಗಂಗೆಯ ಕರೆದು ಮನ್ನಿಸುವುವು.
ಆಗಸಕು ಭೂಮಿಗೂ ಬಾಂಧವ್ಯವನ್ನು ಬೆಳೆಸಿ
ಮಣ್ಣೊಳಿಹ ಸತ್ವಗಳ ತೆಗೆದು ಸೂಸಿ;
ಧನ್ಯರಾವ್ ಅಹಯೆಂದು ಕೆರೆನದಿಗಳುಕ್ಕೇರಿ
ಪಚ್ಚೆ ಪೈರುಗಳನ್ನು ತಗೆದು ತೋರಿ.

ಎಂಥೆಂಥ ರಸಮಿಹುದು ಈ ಭೂಮಿಯೊಳಗೆಂದು
ಎಳೆನೀರು ಸವಿಜೇನು ಕೊಳ್ಳಿ ಬಂದು
ಮಾಗಾಯಿ ನಾರಂಗ ರಸವಾಳೆ ದಾಳಿಂಬ
ನಗುನಗುತ ಬಳೆದಿಹವು ಮರದ ತುಂಬ
ಸ್ವರ್ಗಲೋಕದ ಸುರರೆ ಸವಿಯಿರಿದ ನೀವೆನುತ
ನೀಡಿಹಳು ನೆಲವೆಣ್ಣು ಲೋಕವಿದಿತ.
ಅಮರಲೋಕದ ವರ್ಷ ಮಣ್ಣಿನೊಳು ತಾನಿಳಿದು
ಒಳಗಿನೊಳಗಿನ ಸವಿಯ ಸೆಳೆಯುತಿಹುದು.

ಹನಿಹನಿಯು ಹರಳಾಗಿ ಸುರಿವನಿಯು ರಸವಾಗಿ
ನೆಲದೊಳಗೆ ಹೊನ್ನಾಗಿ ಹೊಳೆಯುತಿಹುದು
ಭಾರತಿಯು ನೀಡಿರುವ ವಜ್ರವಿಂದ್ರಂಗಾಯ್ತು
ವೃತ್ರನಂ ಕೊಲ್ಲುವೊಡೆ ಚಾಪಮಾಯ್ತು
ಎಮ್ಮ ಸಾಗರದೆರವು ಶಕ್ರನಾ ಮುಗಿಲೊಡ್ಡು
ಮತ್ತಲ್ಲಿ ಬೇರಿಹುದೆ ಸೌಖ್ಯದೊಡ್ಡು

ಇಲ್ಲಿಗಿಳಿವರು ಸರುವ ದೇವತೆಗಳಾದರದಿ
ಇಲ್ಲಿನೀ ಸವಿಯುಣಲು ಬಯಸಿ ಭರದಿ.

ನೆಲದ ವೀರರು ಹೋಗಿ ಸುರರ ಕಾಪಿಡಲಾಯ್ತು
ಇಂದಿನಾ ಇಂದ್ರಂಗೆ ರಾಜ್ಯಮಾಯ್ತು.
ಅಮರಲೋಕದ ಸುರರು ನರಲೋಕಕೆರವಿಗರು
ಅವರ ಹಂಗೆಮಗಿಲ್ಲ ನೋಡಿ ಸುರರು.
ಈ ರಸವು ಈ ನೀರು ಈ ಸುಖದ ಸವಿಯೂಟ
ನಮ್ಮ ಬಾಳಿಗೆ ಭೂಮಿಯಿತ್ತ ಮಾಟ.
ತುಂಬಲೀ ಧರೆಯೆಂದು ಗಗನ ವಿಶ್ವಾಸದಲಿ
ಇತ್ತ ಕಾಣಿಕ ಮಳೆಯು ನಿತ್ಯದಲ್ಲಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...