Home / ಕವನ / ಕವಿತೆ / ಭೂದೇವಿಯ ನೋಟ

ಭೂದೇವಿಯ ನೋಟ

ಜಗದ ಮೌನವನೊಡೆದು ಗಗನ ಗರ್ಭವ ಸೀಳಿ
ಜಲದ ಶಾಂತಿಯ ಕಡೆದು ಯುಗಯುಗದ ಬಗೆ ಕನಲಿ
ಉರಿವ ಬೆಂಕಿಯ ಜ್ವಾಲೆ ಹರಿವ ಗಾಳಿಯನಾಳಿ
ಮಾನವರ ಜೀವನವ ಬಲಿಗೊಳ್ಳುತಿದಿರಾಳಿ
ಸತ್ಯ ಧರ್ಮದ ಹೆಸರ ಬಗೆಯೆತ್ತಿ ಕರೆಯುತಿದೆ
ಲೋಕವೇ ಬರೆದಿಟ್ಟ ಶಾಸನವ ಮುರಿಯುತಿದೆ
ಕ್ರಾಂತಿ ಮಾರಿಯ ಬರವು ಲೋಕಕಾಯ್ತು.

ಮೂಡ ಪಡು ಬಡಗ ತೆಂಕಣದ ಮೂಲೆಗಳಿಂದ
ಬದುಕುಗಳ ಬಗೆಯೊಗೆದು ಕಾಲದೀ ಕರೆಯಿಂದ
ಹೆತ್ತೊಡಲ ಮಮತೆಯನು ಹೊತ್ತೊಡಲ ಶಾಂತಿಯನು
ತಿಳಿಯಲಾರದ ಹೃದಯ ನೂಕುತಿದೆ ಮೋಹವನು
ಈ ಮಣ್ಣು ವಿಷ ಹುಣ್ಣು. ನುಡಿವೆಣ್ಣು ಸುಡುಗಣ್ಣು
ಧರ್ಮದೀ ಹೆಸರಿನಲಿ ಕರ್ಮಗಳನುರಿಸುತಿದೆ
ಆಸೆಗಳ ಬಗಯಿಂದ ಪ್ರಳಯವಾಯ್ತು.

ಲೋಕದಾಯುಷ್ಯದಲಿ ಯುಗಯುಗಗಳುರುಳಿದುವು
ಯುಗದ ಯಂತ್ರವ ನಡೆಸಿ ನೋಡುವನು ರವಿ ದಿನವು
ರಜನಿಯನ್ನಾಳುತಲಿ ಕಳದ ಶಶಿ ನಿಶಿ ಹಲವು
ಜಲರಾಶಿಯೇರಿನಲಿ ಪ್ರಳಯಗಳು ದಾಟಿದುವು
ಆಸೆಗಳ ನೆಲೆಯಿಲ್ಲ, ದೋಷಗಳ ಬಗಯಿಲ್ಲ
ಒಂದು ಗುಣ ಒಂದು ನೆಲೆ ಒಂದು ಕೃತಿ ಒಂದು ಸ್ಮೃತಿ
ಶಾಂತಿಧರ್ಮದ ಬೀಡು ಪಾಲಿಗಾಯ್ತು.

ಜಗದಗಲ ನಭದಗಲ ಜಲಗಗನ ರಣವಾಗಿ
ಭೀಕರದ ದೃಶ್ಯದಲಿ ಕ್ರಾಂತಿ ರಾಕ್ಷಸಿಯಾಗಿ
ಶಾಂತಿ ದಾಂತಿಗೆ ಮಣಿವ ಮಕುಟಗಳ ಹಗೆಯಾಗಿ
ಜಗದ ಬದುಕನು ಮುರಿವ ಕಾಣದಿಹ ತೊಡರಾಗಿ
ನುಡಿಯೊಂದು ನಡೆಯೊಂದು ಮನವೊಂದು ಗುಣವೊಂದು
ಕರುಣರಸಕಿಂಬಿಲ್ಲ ಅರುಣರಸಧಾರೆಯಲಿ
ಬಿಸಿ ನೆತ್ತರೀಂಟುತಿದೆ ಕಾಲವಿಂದು.

ಬಂಡೆಬಂಡೆಗಳುರುಳಿ ಹುಡಿಯಾಗಿ ಹಸರಳಿಸಿ
ಬದುಕಿನಾಗರವಾದ ಲೋಹಗಳು ರೂಪಳಿಸಿ
ಸುಖದ ಬೀಡೆನಿಸಿರ್ದ ಓಷಧಿಯು ಗುಣ ಮರೆಸಿ
ಗಾಳಿ ನೀರುಗಳಲ್ಲಿ ಹಸಿದಿಹವು ಮೈಮರೆಸಿ
ಮುಟ್ಟಿದರೆ ನೋಡಿದರೆ ಕೇಳಿದರೆ ಹೇಳಿದರೆ
ದೇಹವನೆ ಸುಟ್ಟಾವು ಜೀವವನೆ ಕೊಂಡಾವು
ಜಗದ ಜೀವದ ಜೀವ ಮೃತ್ಯುವಾಯ್ತು.

ಶಾಂತಿ ಸತ್ಯವು ಸೆರೆಗೆ ದ್ವೇಷಕರ್ಮವು ಹೊರಗೆ
ಸಾಧು ಶೌಚವು ಮರೆಗೆ ಪಾಪಸೂತಕ ಕೊಲೆಗೆ
ಸುಖದ ಸಂತಸವಡಗೆ ಹಿಂಸೆ ಭಯಗಳು ನೆರೆಗೆ
ಪುಣ್ಯಭೂಮಿಯ ಮಣ್ಣು ಮನೆಯಾಯ್ತು ಹಣಗಳಿಗೆ
ಇಲ್ಲಿ ಮೊರೆಯಲ್ಲಿ ಸೆರೆ, ಇಲ್ಲಿ ಭಯಮಲ್ಲಿ ಕೊಲೆ
ಉಸಿರುಸಿರು ಹೂಗಯಾಗಿ ಸಿಡಿಮದ್ದು ಕರೆದಾವು
ತವರಿಗೇ ಕಿಚಿಕ್ಕಿ ಸುಡುವುದಾಯ್ತು.

ಭೂಮಿಯಾಚೆಯ ಕರೆಗೆ ತನುವೊಡ್ಡಿ ನಡೆದಿಹರು
ಆಚೆ ಈಚೆಯ ಕೃತಿಗೆ ಸಿಲುಕಿ ಮರೆಯಾಗಿಹರು
ಹಸಿವಿಗಾಹುತಿಯಾಗಿ ಕೆಲರು ಶಿಲೆಯಾಗಿಹರು
ನೀರಡಸಿ ಉಸಿರಾರಿ ಹಲರು ಹೆಣವಾಗಿಹರು
ಬದುಕೇಕೆ ಜಗೆಯೇಕೆ ಹೊಲಸು ಜೀವನವೇಕೆ
ಕಾಲರುದ್ರನ ಕರೆಗೆ ತಲೆವಾಗಿ ನಡೆದಿಹರು
ಪ್ರೇಮಪಾಶವ ಹರಿದು ಹೃದಯದಿಂದ.

ಆಲದೆಲೆ ನೌಕೆಯಲಿ ಕ್ಷೀರಸಾಗರದಲ್ಲಿ
ಕ್ರೀಡಿಸುವ ವಿಷ್ಣುವಿನ ಸುಳಿವೆಲ್ಲಿ ಇರವೆಲ್ಲಿ?
ಪಾರ್ವತಿಯ ಕೈಸೇರಿ ಕೈಲಾಸಗಿರಿಯಲ್ಲಿ
ನೃತ್ಯಲಾಸ್ಯದಿ ನಲಿವ ಶಂಕರನ ನಡೆಯೆಲ್ಲಿ?
ಕಾಣೆವೋ ಮರೆತೆವೋ ತಿಳಿಯೆವೋ ನೋಡೆವೋ
ದೇವರಿಹ ನೆನವೊಂದು ಭಯವೊಂದು ಕಾಣದೀ
ವಿಲಯಭೈರವಮೂರ್ತಿ ಚೇಷ್ಟೆಯಿಂದ.

ಅವತಾರಪುರುಷರಿಂದಾಗದಾ ನವಯುಗದ
ನಿರ್ಮಾಣ ಮಾಡುವೆವು ನಿಲಿಸುವೆವು ಹೊಸ ಜಗದ
ಕೋಟೆಯಲಿ ಶಾಂತಿಯನ್‌ ಕರೆತಂದು ಸವಿಸುಖದ
ಪೆಂಪುಬಿಂಪುಗಳುಣಿಸಿ ತಣಿಸುವೀ ಹಿರಿಮನದ
ಕಾಣದಿಹ ಕನಸುಗಳು ಕೇಳದಿಹ ವಾಣಿಗಳು
ತೋರುತಿಹವೆಮಗಿಂದು ನುಡಿಯದಿಹ ಸತ್ಯಗಳು
ಕಾಲರುದ್ರನ ನೃತ್ಯದೆಸಕದಿಂದ.

ಇದೊ ಸಿದ್ದರಾಗಿಹೆವು ಕಾಲಪುರುಷನ ಕರೆಗೆ
ಇದು ನೋಡಿ ಅದು ಕೇಳಿ ನೀಗಿ ನೆಮ್ಮದಿಯ ಬಗೆ
ಈ ಬಾಳು ಈ ಗೋಳು ಸಾಕೆನಿಸೆ ಭೂತಾಯ್ಗೆ
ಸಾವು ನೋವುಗಳೆಲ್ಲ ಹೋಗಲಿಂದೇ ಕೊನೆಗೆ
ಹೂಸ ಯುಗದ ಸೋದರರು ಮಂಗಳವ ಹಾಡುವರು
ಕಲ್ಯಾಣಮಂಟಪವ ಕಟ್ಟುವರು ಮೆರೆಯುವರು
ಭೂತಾಯ ಸಿಂಗರಿಸಿ ತಿಲಕವಿರಿಸಿ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್