Home / ಕವನ / ಕವಿತೆ / ಕುರಿಯಮಾತು

ಕುರಿಯಮಾತು

ಹೈಮವತಿಯೇ ತಾಯಿ- ಬಗೆ ಬಗೆಯ ರೂಪದಲಿ
ಭೂಮಿಯೊಳು ತಾ ಬಂದು- ನಲಿಯುವಳು ದೇಹದಲಿ
ಅವಳ ಕಿಡಿ ನಮ್ಮೊಳಗೆ
ನಲಿಯುತಿದೆ ಒಳಗೊಳಗೆ.

ಅವಳೆಮಗ ಹೆತ್ತಬ್ಬೆ- ಆದರೊಂದೇ ಚಿಂತೆ
ನರರೆಂಬ ಸೋದರರು- ಪ್ರೇಮ ತೊರೆದವರಂತೆ
ಬಲಿಯೀವರೆಮ್ಮನ್ನು
ಕೇಳುವವರಾರಿನ್ನು.

ಪರದೇಶಿ ಕುರಿಗಳಾವ್, ಎಮ್ಮ ನೆತ್ತರು ಮಾಂಸ
ಸವಿಯಂತೆ, ಬಯಸುವಳು-ಕೂಲಿಸುತ್ತ ಅವಳಂಶ
ಮಾತು ಬಾರದ ಜಂತು
ಪ್ರಾಣ ಕೊಡುತಿಹುದೆಂತು.

ಕರುಣದಿಂ ಕಣ್ಣೀರ- ಸುರಿಸುವಳ ದೂರುವರು
ಸಹೃದಯೆಯ ಕಲುಹೃದಯಳಂ ಮಾಡಿ ತೋರುವರು
ಎಮ್ಮ ಹೆಣ ತಿನ್ನುವರು
ರಕ್ತಮಂ ಕುಡಿಯುವರು.

ಚೋರ ಕರ್ಮಿಗಳಲ್ಲಿ- ಪ್ರಾಣಹಿಂಸಕರಲ್ಲ
ಹಸಿ ಹುಲ್ಲು ಎಲೆ ತರಗು- ಇದು ನರರ ಸ್ವತ್ತಲ್ಲ
ಸೊಪ್ಪುಸದೆ ದೇವಿಯದು
ಹರಿವ ಜಲ ತಾಯಿಯದು.

ಮತಿಯುಂಟು ಹಿತರುಂಟು- ಬಂಧು ಬಾಂಧವರುಂಟು
ಪರಮಾತ್ಮನರಿವುಂಟು-ಕಷ್ಟಸುಖದರಿವುಂಟು
ನಮಗಾರು ದಿಕ್ಕಿಲ್ಲ
ತಂದೆತಾಯಿಗಳಿಲ್ಲ.

ನಿಮ್ಮ ಕುಲ ಬಾಯ್ತುತ್ತು – ಮೂಕಜಂತುಗಳರರೆ
ತಾಯ್ಬೆಳಸಿ ಸಲಹಿರುವ- ಈ ದೇಹ ನಿಮಗೆ ಸೆರೆ
ನಾವಿರಲು ನಿಮಗಾಗಿ
ಕೂಲಲೇಕೆ ಮರೆಯಾಗಿ.

ಎಮ್ಮ ಮೈ ರೋಮಗಳು- ತೊಗಲು ಮಾಂಸವು ರಕ್ತ
ನಿಮಗೆರವು ಮಾಡಿದಳು- ಜನಕ ಇದುವೇ ಭುಕ್ತ
ಎಮ್ಮ ಕೊರಳನು ಕೊಯ್ವ
ಕಟುಕರಾದಿರಿ ಹೊಯ್ವ.

ಕುತ್ತಿಗೆಯ ಕೊಯ್ವಾಗ- ನಿಮಗಾಗಿ ಮರುಗುವೆವು
ಅತ್ತಲಾ ಹೈಮವತಿ- ಕರವಾಳ ಮಸೆಯುವಳು
ನಿಮ್ಮಸುವ ಸೆಳೆಯುವಳು
ಆಮೇಲೆ ಕುಣಿಯುವಳು.

ನರಕುರಿಯು ನೀವಂತ- ಕುರಿಜನ್ಮ ನಿಮಗಂತೆ
ನರರಾವು ಮುಂದಂತೆ- ನಿಮ್ಮನುಳಿಸುವೆವಂತೆ
ಇಂತಬ್ಬೆ ಹೇಳುವಳು
ಕಣ್ಣೀರ ಹರಿಸುವಳು.

ಹಿಡಿಕಾಳು ಬಯಸಿಲ್ಲ- ನಿಮ್ಮಿಂದ ಬದುಕಿಲ್ಲ
ಕೆಡಕುಗಳ ಮಾಡಿಲ್ಲ- ಬಲ್ಲಳಿದನವಳೆಲ್ಲ
ನಿಮಗಾಗಿ ಆ ರೂಪ
ತಾಳಿದಳು ಬಹು ಕೋಪ.

ನಮ್ಮಿಂದ ನಿಮ್ಮಿರವು-ನಿಮ್ಮಿಂದ ನಾವಲ್ಲ
ನಮ್ಮ ಮುಕ್ತಿಗೆ ಮಾತೆ-ಹೊಣೆಯಂತೆ ನೀವಲ್ಲ
ಕೋಪದಲಿ ಸಾಯದಿರಿ
ಪಾಪದೊಳು ಬೀಳದಿರಿ.

ನಮ್ಮ ಕೊಂದರೆ ವ್ಯಾಧಿ-ಮಾರಿ ರೂಪದಿ ಬಂದು
ನಿಮ್ಮ ತನು ಕುರಿಹೆಣವು-ಬಿದ್ದಂತೆ ನೆಲೆ ನಿಂದು
ಬಲಿಗೊಳ್ವುದರಿಯುವಿರಿ
ಸೆಳೆವುದನು ಕಾಣುವಿರಿ.

ತಾಯಿಯಂ ಪೂಜಿಸಿರಿ-ಫಲಪುಷ್ಪಚಯಗಳಿಂ
ಆ ವಿಮಲೆ ಕಾಯುವಳು-ನಲಿದೆಲ್ಲ ಕರಗಳಿಂ
ಕಾಯಬೇಹುದಹಿಂಸೆ
ಪಾಪವದುವೇ ಹಿಂಸ.

ಸಾವೆವೆಂಬಾ ದುಃಖ-ನಮಗಿಲ್ಲ ಲೋಕದಲಿ
ಕೊಲ್ಲದಿರಿ ಕುರಿಗಳಂ-ಸೋದರರೆ ಮೋಸದಲಿ
ನಿಮಗೆಮಗೆ ಹೈಮವತಿ
ತಾಯಹುದು ಗುಣವಂತಿ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...