ಆರು ಗತಿಯೆನಗೆ

ಪ್ರಕೃತಿಯಲಿ ಸೌಂದರ್ಯ ಕಾಣದೆಯೆ ಕುರುಡಾಗಿ
ವಿಕೃತಿಯನೆ ನೋಡಿದೆನು ಅದು ಸತ್ಯವೆಂದು
ಸುಕೃತಿಗಳನೊಪ್ಪದೆಯೆ ಎನ್ನದೇ ಸರಿಯೆಂದು
ಆಕೃತಿಯ ದುಷ್ಕೃತಿಗೆ ಬಲಿಗೊಟ್ಟೆನಯ್ಯ.

ನಾನು ದೊಡ್ಡವನೆಂದು ಹೆಮ್ಮೆಯಲಿ ಮೆರೆಯುತ್ತ
ಮಾನಾಪಮಾನಮಂ ಲೆಕ್ಕಿಸದೆ ನಡೆದು
ಎನ್ನ ಹಿರಿತನಕಾಗಿ ಗರ್ವದಲಿ ದರ್ಪದಲಿ
ಜನರ ಹಿಂಸಿಸಿ ಮೆರೆದೆ ಸಂತೋಷದಿಂದ.

ಪರಹಿತಕೆ ಮನಗೊಡದೆ ಎನ್ನ ನುಡಿ ಎನ್ನ ನಡೆ
ಸರುವವೆಂದರಿಯುತಲಿ ತೆಗಳಿದೆನು ಜನರ
ಪರಹಿಂಸೆ ಮರೆ ಮೋಸ ಸುಳ್ಳು ಮದ ಲೋಭದಿಂ
ಪರ ಮರೆತು ಸ್ವಾರ್ಥದಿಂ ಮೆರೆದಾಯ್ತು ಇನ್ನು.

ಒಂದು ನುಡಿ ಒಂದು ನಡೆ ಒಂದು ಮನ ಒಂದು ಕ್ರಿಯೆ
ನಿಂದೆನ್ನ ಹೃದಯವನು ನಿರ್ಮಲಂಗೆಯ್ದು
ತಂದೆ ನಿನ್ನಡಿಗಳಲಿ ಮನವೂರಿ ನೆನೆವಂತೆ
ಬಂದೆನ್ನ ಕಾಪಿಡೈ ಕೈ ಬಿಡದೆ ನಿತ್ಯ.

ನಿನ್ನ ಹೊರತಿನ್ನಾರು ಗತಿಯೆನಗೆ ಜಗದಲ್ಲಿ
ಎನ್ನಂತರಂಗದಲಿ ನೆಲಸಯ್ಯ ಶ್ರೀಶ
ಹೊನ್ನು ಮಣ್ಣುಗಳಿಂದ ಭ್ರಾಂತನಾಗುತ ತೊಳಲಿ
ಅನ್ಯರಿ೦ಗಾಳಾಗಿ ಬಾಳ್ಗೆಡಿಸಿಕೊಂಡೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಳ್ಳು ಗುಲಾಬಿಯ ಮಧ್ಯೆ
Next post ಇವರಾರೆಂದು ಹೇಳಮ್ಮ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…