ಮೋಡ

ಜಗದ ಜೀವವನುಂಡು ಹಲವು ಬಗಗಳ ಕಂಡು
ನಗುತ ನೆಗೆದಾಡುತ್ತ ಹಗಲಿರುಳು ಹಾರಾಡಿ
ತೆಗೆದು ತೀರದ ವಾರಿ ಹೊಗೆಯಾಗಿ ಹೂವಾಗಿ
ಮುಗಿಸೆ ನಭಯಾತ್ರೆಗಳ ಹಗುರಾಗಿ ನಡೆದಿರುವೆ.

ಬಿಸಿಲಿಂಗೆ ಮೈಯೊಡ್ಡಿ ಬಿಳಿ ವಸನಮಂ ಹೊದೆದು
ಹಸಿತ ವದನದಿ ತೋರಿ ಕುಣಿಕುಣಿದು ನಲಿದಾಡಿ
ನಸುಮುನಿಸ ಬೀರುತ್ತ ಉದ್ದವೋ ಗಿಡ್ಡವೋ
ಉಸಿರೆಳೆದು ಭಯರೂಪು ತಾಳುತ್ತ ನಡೆಯುತಿಹೆ.

ನೆಲಕಿಂತ ಆಗಸವೆ ನಲಿಯಲ್ಕೆ ಚೆಲುವೆಂದು
ಅಲೆದಲೆದು ತಿರೆ ನೋಡಿ ನಗುತಿರುವೆ ಹಾಸ್ಯದಿಂ
ಮೇಲಿಂದ ಧರೆಯೊಲವ ನೋಡುವುದೆ ಸೂಗಮೆಂದು
ಹಾಲಿನಂತೆಸೆಯುತಿಹೆ ನಭಮಾಡದಲಿ ನಿಂದು.

ಬಿತ್ತರದ ಗಗನದಲಿ ತಡೆಯುವವರಾರಿಲ್ಲ
ಚಿತ್ತಾರಮಂ ಬರೆದು ಮುಖಗೊಂಡು ಸಿಂಗರದಿ
ಚಿತ್ರತರ ಜಲಧಿಗನ್ನಡಿಯಲ್ಲಿ ಮೊಗ ನೋಡಿ
ಮುತ್ತುದುರಿಸುತ್ತಿರುವೆ ಜಲದೇವಿಯಾಗೆಸೆವೆ.

ಬಾನ ಬೇಸಿಗಯುಂಡು ನಕ್ಷತ್ರದೊಡಲಲ್ಲಿ
ನೀನು ಮೆರೆಯುತ್ತಿರಲು ಮಚ್ಚರಿಸಿ ನೀರೆಲ್ಲ
ಕಾಣಿಸದೆ ಮೈಮರೆಸಿ ಗಗನವೇರುತ್ತಿರಲು
ಮೌನವೇ ತುಂಬಿತ್ತು ಬಲು ಬಿಸಿಲ ಘಾಸಿಯಲಿ.

ಇಲ್ಲ ನೆರೆ-ಇಲ್ಲ ಕರೆ ನಿನ್ನ ಸುಳಿವಿನ್ನಿಲ್ಲ
ಬಲ್ಲಿದರು ಬಡವರುಂ ಮೂಕಜಂತುಗಳೆಲ್ಲ
ಅಲ್ಲಲ್ಲಿ ತೊಳಲುತ್ತಲರಸಿದರು ಬೇಸತ್ತು
ಮಲ್ಲಿಗೆಯ ನಗುವೆಲ್ಲ ಮಂಕಾಯ್ತು ನೀನಿರದೆ.

ನಿನಗೆ ತಿಳುಹುವರಾರು ನಿನ್ನ ಕರೆವವರಾರು?
ನಿನಗೆ ಕಷ್ಟವನೊರದು ಬಾಯೆನುವರಾರೆಂದು
ಕಣುಗಳುಂ ಬತ್ತುತಿರೆ ರಾಯಭಾರಿಯು ವಾಯು
ಜನದುರಿಗೆ ದಯೆಗೊಂಡು ನಿನ್ನೆಡೆಗೆ ಹಾರಿದನು.

ಅಂದಾ ಭಗೀರಥನು ಭಾಗೀರಥಿಯ ತಂದ
ಇಂದೆಮಗೆ ಗಗನದಿಂ ವಾಯುತಹ ನಿನ್ನನ್ನು
ಚೆಂದದಿಂದಿಳಿದಿಳಿದು ಬಾ ತಾಯಿ ಮೈದಳೆದು
ಬಂದೆಮ್ಮ ಒಳಹೂರಗೆ ಜೀವದುಂಬಿಸು ದೇವಿ.

ಮಳೆಯ ರೂಪವ ತಳೆದು ಹನಿಯ ಕೈಗಳ ಪೊಂದಿ
ಇಳೆಗಿಳಿದು ಬಾ ನಮ್ಮ ಚೆಲುವ ಬನ ತೋಟಗಳ
ನಲಿಸಿ ನಗಿಸುತಲೊಮ್ಮೆ ತವರೂರ ಸಂಚರಿಸು
ಜಲದೊಡಲಿನಿಂ ಬಂದ ವಾಹಿನಿಯರಂ ನೋಡು.

ಬರುವ ರಭಸಕೆ ಕಪ್ಪು ಮುಪ್ಪಾಗಿ ಮುರಿಯುತಿದೆ.
ಹೊರಟಳೆಂದಾ ಗಗನ ಕತ್ತಲೆಯ ಕಾರುತಿದೆ
ಮರೆಯಾದ ನೇಸರಂ, ನೀನಲ್ಲಿ ನಡೆದಿರಲು
ಕರಗಿದೆದೆಯಿಂ ಬಂದೆ ಬಾ ತಾಯಿ ಬಾಗುವವು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...