ಪಕ್ಷಿಸಂದೇಶ

ಸೂರ್ಯ ಬರುವುದ ಕಂಡು ಚಿಂತೆಯ ತೊರೆದು ಪಕ್ಷಿಗಣಂಗಳು
ಮರದ ಕೊಂಬೆಯ ಮೇಲೆ ಬರುತಲಿ ಜಗವನೆಬ್ಬಿಸ ಬಯಸುತ
ಮಲಗಿ ನಿದ್ರಿಪ ಜನರ ಕಿವಿಯಲಿ ಮಧುರಗಾನವ ಹಾಡುತ
ಸವಿಯ ದನಿಯಿಂದುಲಿದು ತೊಟ್ಟಿಲ ಮಗುವ ಕಿಲಿಪಿಲಿ ನಗಿಸುತ.

ಒಂದು ದನಿಯೇ ಒಂದು ರಸವೇ ರಾಗಭಾವದ ಮೇಳವೇ
ಯಾರಿಗೋ ಆನಂದವೀಯುತ ಸ್ವಾರ್ಥ ಬುದ್ದಿಯ ಮರೆತಿವೆ.
ಗೂಡತೊರೆಯುತ ಜಗವ ಕರೆಯುತ ಬದುಕಿನಿರವನು ಹೇಳವೇ
ಅದನು ಹೊಗಳುವ ಜನರನರಿಯದು ತಮ್ಮ ಹೆಮ್ಮೆಯ ನೆನೆವುವೇ.

ಕಾಡ ಮರದಲಿ ಮನೆಯ ಮಾಡುತ ಬೆಳೆಸಿ ಮಕ್ಕಳ ಮೋಹದಿ
ನೋಡದೀ ಜಗದಾಗು-ಹೋಗನು ಮನಕೆ ತಾರದೆ ಸೋಕದೆ
ತನ್ನ ವಂಶಕೆ ಬಂದ ಶಾಂತಿಯ ತಾಳ್ದು ಹಿಂಸೆಯ ಬಗೆಯದೆ
ಆಗ ದೊರೆತುದೆ ದೇವನಿತ್ತುದೆ ಮಹತು ಎನ್ನುತ ಕೊಳ್ವುದು.

ನಿಮ್ಮ ಕರೆಯಂ ಕಾಯದೀ ಖಗ ಬಂದು ಅಂಗಳಕೆರಗುತ
ನಿಮ್ಮ ಕರುಣಾಹೃದಯವರಿಯುತ ನಿಂದು ಹೊಸ್ತಿಲಕೆರೆಯುತ
ಬಂದು ಸಂತಸದಿಂದ ಬಾಲವನಲುಗಿಸುತ್ತಲಿ ಹಾಡುತ
ಶುಭವ ನೀಡುತ ಹೋಗಿಬರುವೆನು ಎಂದು ನುಡಿವುದು ಹಾರುತ.

ಕಣ್ಣ ತೆರೆಸುತ ಎದೆಯನರಳಿಸಿ ಅಂತರಂಗವ ಕೆರಳಿಸಿ
ಹಾರಿಹೋಯಿತು ದನಿಯು ಮರುದನಿಗೂಡಲು ಆತ್ಮವು ಚಿಮ್ಮಿತು
ಆವ ಬಣ್ಣವು ಬೆಡಗು ಬಿನ್ನಣ ಚಲುವು ನಿಲ್ಲುವ ಭಂಗಿಯು
ಆರಿಗಿಹುದೀ ಭಾವ ವೈರಾಗ್ಯಗಳು ಸುಮ್ಮನೆ ದೊರೆವುದೆ?

ಒಂದು ದನಿಯಲಿ ಹಲವು ದುಃಖದ ಮಬ್ಬು ಮರೆಸುವ ಶಕ್ತಿಯೆ
ಚಪಲ ನೋಟದಿ ಜಗದ ಬಗೆಗಳನಳಿಸಿ ತೋರುವ ಮಾಟವೆ!
ಒಳಗಿನೊಳಗಿನ ಚೇತನವನೆಳ್ಚರಿಸಿ ಸಲಹದೆ ಒಮ್ಮೆಲೆ
ಪಕ್ತಿಯಿಂಚರದಿಂದ ದೇವರು ತೊಟ್ಟರೇ ಮೌನವ್ರತ.

ಲೋಕದೆಲ್ಲೆಡೆಯಲ್ಲಿ ತನ್ನ ಗಂಭೀರಮೂರ್ತಿಯ ಹರಿಸುತ
ನಲಿವ ಪೆರ್ಮೆಯದೊಂದು ಆರನು ಲೆಕ್ಕಿಸದ ಬಿಸವಂದವು
ಸಾವು ನೋವಿನ ಬಾಧೆಗಳುಕದೆ ತನ್ನಯದಿ ಹರಿದಾಡುತ
ಇಂತು ಜೀವನಮೋಕ್ಷವೆಂಬುದ ಸಾರಿ ಲೋಕದಿ ನಡೆವುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಗಳ ಲೋಕದಲಿ
Next post ಗಾಂಧಿ ವೇಷ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…