Home / ಕವನ / ಕವಿತೆ / ಪಕ್ಷಿಸಂದೇಶ

ಪಕ್ಷಿಸಂದೇಶ

ಸೂರ್ಯ ಬರುವುದ ಕಂಡು ಚಿಂತೆಯ ತೊರೆದು ಪಕ್ಷಿಗಣಂಗಳು
ಮರದ ಕೊಂಬೆಯ ಮೇಲೆ ಬರುತಲಿ ಜಗವನೆಬ್ಬಿಸ ಬಯಸುತ
ಮಲಗಿ ನಿದ್ರಿಪ ಜನರ ಕಿವಿಯಲಿ ಮಧುರಗಾನವ ಹಾಡುತ
ಸವಿಯ ದನಿಯಿಂದುಲಿದು ತೊಟ್ಟಿಲ ಮಗುವ ಕಿಲಿಪಿಲಿ ನಗಿಸುತ.

ಒಂದು ದನಿಯೇ ಒಂದು ರಸವೇ ರಾಗಭಾವದ ಮೇಳವೇ
ಯಾರಿಗೋ ಆನಂದವೀಯುತ ಸ್ವಾರ್ಥ ಬುದ್ದಿಯ ಮರೆತಿವೆ.
ಗೂಡತೊರೆಯುತ ಜಗವ ಕರೆಯುತ ಬದುಕಿನಿರವನು ಹೇಳವೇ
ಅದನು ಹೊಗಳುವ ಜನರನರಿಯದು ತಮ್ಮ ಹೆಮ್ಮೆಯ ನೆನೆವುವೇ.

ಕಾಡ ಮರದಲಿ ಮನೆಯ ಮಾಡುತ ಬೆಳೆಸಿ ಮಕ್ಕಳ ಮೋಹದಿ
ನೋಡದೀ ಜಗದಾಗು-ಹೋಗನು ಮನಕೆ ತಾರದೆ ಸೋಕದೆ
ತನ್ನ ವಂಶಕೆ ಬಂದ ಶಾಂತಿಯ ತಾಳ್ದು ಹಿಂಸೆಯ ಬಗೆಯದೆ
ಆಗ ದೊರೆತುದೆ ದೇವನಿತ್ತುದೆ ಮಹತು ಎನ್ನುತ ಕೊಳ್ವುದು.

ನಿಮ್ಮ ಕರೆಯಂ ಕಾಯದೀ ಖಗ ಬಂದು ಅಂಗಳಕೆರಗುತ
ನಿಮ್ಮ ಕರುಣಾಹೃದಯವರಿಯುತ ನಿಂದು ಹೊಸ್ತಿಲಕೆರೆಯುತ
ಬಂದು ಸಂತಸದಿಂದ ಬಾಲವನಲುಗಿಸುತ್ತಲಿ ಹಾಡುತ
ಶುಭವ ನೀಡುತ ಹೋಗಿಬರುವೆನು ಎಂದು ನುಡಿವುದು ಹಾರುತ.

ಕಣ್ಣ ತೆರೆಸುತ ಎದೆಯನರಳಿಸಿ ಅಂತರಂಗವ ಕೆರಳಿಸಿ
ಹಾರಿಹೋಯಿತು ದನಿಯು ಮರುದನಿಗೂಡಲು ಆತ್ಮವು ಚಿಮ್ಮಿತು
ಆವ ಬಣ್ಣವು ಬೆಡಗು ಬಿನ್ನಣ ಚಲುವು ನಿಲ್ಲುವ ಭಂಗಿಯು
ಆರಿಗಿಹುದೀ ಭಾವ ವೈರಾಗ್ಯಗಳು ಸುಮ್ಮನೆ ದೊರೆವುದೆ?

ಒಂದು ದನಿಯಲಿ ಹಲವು ದುಃಖದ ಮಬ್ಬು ಮರೆಸುವ ಶಕ್ತಿಯೆ
ಚಪಲ ನೋಟದಿ ಜಗದ ಬಗೆಗಳನಳಿಸಿ ತೋರುವ ಮಾಟವೆ!
ಒಳಗಿನೊಳಗಿನ ಚೇತನವನೆಳ್ಚರಿಸಿ ಸಲಹದೆ ಒಮ್ಮೆಲೆ
ಪಕ್ತಿಯಿಂಚರದಿಂದ ದೇವರು ತೊಟ್ಟರೇ ಮೌನವ್ರತ.

ಲೋಕದೆಲ್ಲೆಡೆಯಲ್ಲಿ ತನ್ನ ಗಂಭೀರಮೂರ್ತಿಯ ಹರಿಸುತ
ನಲಿವ ಪೆರ್ಮೆಯದೊಂದು ಆರನು ಲೆಕ್ಕಿಸದ ಬಿಸವಂದವು
ಸಾವು ನೋವಿನ ಬಾಧೆಗಳುಕದೆ ತನ್ನಯದಿ ಹರಿದಾಡುತ
ಇಂತು ಜೀವನಮೋಕ್ಷವೆಂಬುದ ಸಾರಿ ಲೋಕದಿ ನಡೆವುದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...