Home / ಕವನ / ಕವಿತೆ / ಪಕ್ಷಿಸಂದೇಶ

ಪಕ್ಷಿಸಂದೇಶ

ಸೂರ್ಯ ಬರುವುದ ಕಂಡು ಚಿಂತೆಯ ತೊರೆದು ಪಕ್ಷಿಗಣಂಗಳು
ಮರದ ಕೊಂಬೆಯ ಮೇಲೆ ಬರುತಲಿ ಜಗವನೆಬ್ಬಿಸ ಬಯಸುತ
ಮಲಗಿ ನಿದ್ರಿಪ ಜನರ ಕಿವಿಯಲಿ ಮಧುರಗಾನವ ಹಾಡುತ
ಸವಿಯ ದನಿಯಿಂದುಲಿದು ತೊಟ್ಟಿಲ ಮಗುವ ಕಿಲಿಪಿಲಿ ನಗಿಸುತ.

ಒಂದು ದನಿಯೇ ಒಂದು ರಸವೇ ರಾಗಭಾವದ ಮೇಳವೇ
ಯಾರಿಗೋ ಆನಂದವೀಯುತ ಸ್ವಾರ್ಥ ಬುದ್ದಿಯ ಮರೆತಿವೆ.
ಗೂಡತೊರೆಯುತ ಜಗವ ಕರೆಯುತ ಬದುಕಿನಿರವನು ಹೇಳವೇ
ಅದನು ಹೊಗಳುವ ಜನರನರಿಯದು ತಮ್ಮ ಹೆಮ್ಮೆಯ ನೆನೆವುವೇ.

ಕಾಡ ಮರದಲಿ ಮನೆಯ ಮಾಡುತ ಬೆಳೆಸಿ ಮಕ್ಕಳ ಮೋಹದಿ
ನೋಡದೀ ಜಗದಾಗು-ಹೋಗನು ಮನಕೆ ತಾರದೆ ಸೋಕದೆ
ತನ್ನ ವಂಶಕೆ ಬಂದ ಶಾಂತಿಯ ತಾಳ್ದು ಹಿಂಸೆಯ ಬಗೆಯದೆ
ಆಗ ದೊರೆತುದೆ ದೇವನಿತ್ತುದೆ ಮಹತು ಎನ್ನುತ ಕೊಳ್ವುದು.

ನಿಮ್ಮ ಕರೆಯಂ ಕಾಯದೀ ಖಗ ಬಂದು ಅಂಗಳಕೆರಗುತ
ನಿಮ್ಮ ಕರುಣಾಹೃದಯವರಿಯುತ ನಿಂದು ಹೊಸ್ತಿಲಕೆರೆಯುತ
ಬಂದು ಸಂತಸದಿಂದ ಬಾಲವನಲುಗಿಸುತ್ತಲಿ ಹಾಡುತ
ಶುಭವ ನೀಡುತ ಹೋಗಿಬರುವೆನು ಎಂದು ನುಡಿವುದು ಹಾರುತ.

ಕಣ್ಣ ತೆರೆಸುತ ಎದೆಯನರಳಿಸಿ ಅಂತರಂಗವ ಕೆರಳಿಸಿ
ಹಾರಿಹೋಯಿತು ದನಿಯು ಮರುದನಿಗೂಡಲು ಆತ್ಮವು ಚಿಮ್ಮಿತು
ಆವ ಬಣ್ಣವು ಬೆಡಗು ಬಿನ್ನಣ ಚಲುವು ನಿಲ್ಲುವ ಭಂಗಿಯು
ಆರಿಗಿಹುದೀ ಭಾವ ವೈರಾಗ್ಯಗಳು ಸುಮ್ಮನೆ ದೊರೆವುದೆ?

ಒಂದು ದನಿಯಲಿ ಹಲವು ದುಃಖದ ಮಬ್ಬು ಮರೆಸುವ ಶಕ್ತಿಯೆ
ಚಪಲ ನೋಟದಿ ಜಗದ ಬಗೆಗಳನಳಿಸಿ ತೋರುವ ಮಾಟವೆ!
ಒಳಗಿನೊಳಗಿನ ಚೇತನವನೆಳ್ಚರಿಸಿ ಸಲಹದೆ ಒಮ್ಮೆಲೆ
ಪಕ್ತಿಯಿಂಚರದಿಂದ ದೇವರು ತೊಟ್ಟರೇ ಮೌನವ್ರತ.

ಲೋಕದೆಲ್ಲೆಡೆಯಲ್ಲಿ ತನ್ನ ಗಂಭೀರಮೂರ್ತಿಯ ಹರಿಸುತ
ನಲಿವ ಪೆರ್ಮೆಯದೊಂದು ಆರನು ಲೆಕ್ಕಿಸದ ಬಿಸವಂದವು
ಸಾವು ನೋವಿನ ಬಾಧೆಗಳುಕದೆ ತನ್ನಯದಿ ಹರಿದಾಡುತ
ಇಂತು ಜೀವನಮೋಕ್ಷವೆಂಬುದ ಸಾರಿ ಲೋಕದಿ ನಡೆವುದು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...