ಪಕ್ಷಿಸಂದೇಶ

ಸೂರ್ಯ ಬರುವುದ ಕಂಡು ಚಿಂತೆಯ ತೊರೆದು ಪಕ್ಷಿಗಣಂಗಳು
ಮರದ ಕೊಂಬೆಯ ಮೇಲೆ ಬರುತಲಿ ಜಗವನೆಬ್ಬಿಸ ಬಯಸುತ
ಮಲಗಿ ನಿದ್ರಿಪ ಜನರ ಕಿವಿಯಲಿ ಮಧುರಗಾನವ ಹಾಡುತ
ಸವಿಯ ದನಿಯಿಂದುಲಿದು ತೊಟ್ಟಿಲ ಮಗುವ ಕಿಲಿಪಿಲಿ ನಗಿಸುತ.

ಒಂದು ದನಿಯೇ ಒಂದು ರಸವೇ ರಾಗಭಾವದ ಮೇಳವೇ
ಯಾರಿಗೋ ಆನಂದವೀಯುತ ಸ್ವಾರ್ಥ ಬುದ್ದಿಯ ಮರೆತಿವೆ.
ಗೂಡತೊರೆಯುತ ಜಗವ ಕರೆಯುತ ಬದುಕಿನಿರವನು ಹೇಳವೇ
ಅದನು ಹೊಗಳುವ ಜನರನರಿಯದು ತಮ್ಮ ಹೆಮ್ಮೆಯ ನೆನೆವುವೇ.

ಕಾಡ ಮರದಲಿ ಮನೆಯ ಮಾಡುತ ಬೆಳೆಸಿ ಮಕ್ಕಳ ಮೋಹದಿ
ನೋಡದೀ ಜಗದಾಗು-ಹೋಗನು ಮನಕೆ ತಾರದೆ ಸೋಕದೆ
ತನ್ನ ವಂಶಕೆ ಬಂದ ಶಾಂತಿಯ ತಾಳ್ದು ಹಿಂಸೆಯ ಬಗೆಯದೆ
ಆಗ ದೊರೆತುದೆ ದೇವನಿತ್ತುದೆ ಮಹತು ಎನ್ನುತ ಕೊಳ್ವುದು.

ನಿಮ್ಮ ಕರೆಯಂ ಕಾಯದೀ ಖಗ ಬಂದು ಅಂಗಳಕೆರಗುತ
ನಿಮ್ಮ ಕರುಣಾಹೃದಯವರಿಯುತ ನಿಂದು ಹೊಸ್ತಿಲಕೆರೆಯುತ
ಬಂದು ಸಂತಸದಿಂದ ಬಾಲವನಲುಗಿಸುತ್ತಲಿ ಹಾಡುತ
ಶುಭವ ನೀಡುತ ಹೋಗಿಬರುವೆನು ಎಂದು ನುಡಿವುದು ಹಾರುತ.

ಕಣ್ಣ ತೆರೆಸುತ ಎದೆಯನರಳಿಸಿ ಅಂತರಂಗವ ಕೆರಳಿಸಿ
ಹಾರಿಹೋಯಿತು ದನಿಯು ಮರುದನಿಗೂಡಲು ಆತ್ಮವು ಚಿಮ್ಮಿತು
ಆವ ಬಣ್ಣವು ಬೆಡಗು ಬಿನ್ನಣ ಚಲುವು ನಿಲ್ಲುವ ಭಂಗಿಯು
ಆರಿಗಿಹುದೀ ಭಾವ ವೈರಾಗ್ಯಗಳು ಸುಮ್ಮನೆ ದೊರೆವುದೆ?

ಒಂದು ದನಿಯಲಿ ಹಲವು ದುಃಖದ ಮಬ್ಬು ಮರೆಸುವ ಶಕ್ತಿಯೆ
ಚಪಲ ನೋಟದಿ ಜಗದ ಬಗೆಗಳನಳಿಸಿ ತೋರುವ ಮಾಟವೆ!
ಒಳಗಿನೊಳಗಿನ ಚೇತನವನೆಳ್ಚರಿಸಿ ಸಲಹದೆ ಒಮ್ಮೆಲೆ
ಪಕ್ತಿಯಿಂಚರದಿಂದ ದೇವರು ತೊಟ್ಟರೇ ಮೌನವ್ರತ.

ಲೋಕದೆಲ್ಲೆಡೆಯಲ್ಲಿ ತನ್ನ ಗಂಭೀರಮೂರ್ತಿಯ ಹರಿಸುತ
ನಲಿವ ಪೆರ್ಮೆಯದೊಂದು ಆರನು ಲೆಕ್ಕಿಸದ ಬಿಸವಂದವು
ಸಾವು ನೋವಿನ ಬಾಧೆಗಳುಕದೆ ತನ್ನಯದಿ ಹರಿದಾಡುತ
ಇಂತು ಜೀವನಮೋಕ್ಷವೆಂಬುದ ಸಾರಿ ಲೋಕದಿ ನಡೆವುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಗಳ ಲೋಕದಲಿ
Next post ಗಾಂಧಿ ವೇಷ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys