ನಿನ್ನ ನಿಷ್ಠೆಯ ನಂಬಿ, ವಂಚಿತಪತಿಯ ಹಾಗೆ

ನಿನ್ನ ನಿಷ್ಠೆಯ ನಂಬಿ, ವಂಚಿತಪತಿಯ ಹಾಗೆ
ಹೀಗೇ ಉಳಿವೆ ನಾನು, ನೀನು ಬದಲಾದರೂ;
ಒಲಿದ ಮುಖ ಕಾಣುವುದು ಒಲಿದ ಮುಖವಾಗಿಯೇ –
ಮುಖ ನನಗೆ, ಹೃದಯ ಅನ್ಯರಿಗಾಗಿ ಇದ್ದರೂ.
ದ್ವೇಷ ನಿನ್ನೀ ಕಣ್ಣಿನಲಿ ಎಂದೂ ಬಾಳದಿದೆ,
ಒಳಗೆ ಬದಲಾದರೂ ತಿಳಿಯದದು ಕಣ್ಣಿಂದ,
ಎಷ್ಟೋ ನೋಟಗಳಲ್ಲಿ ಹುಸಿಹೃದಯದೆಲ್ಲ ಕಥೆ
ಸುಸ್ಪಷ್ಟ, ಮುಖದ ನಿಸ್ನೇಹ ಬಿಗಿತಗಳಿಂದ.
ಆದರಾ ದೈವವೋ ಸ್ನೇಹವೊಂದೇ ನಿನ್ನ
ದೃಷ್ಟಿಯೊಳು ಹೊಳೆವಂತೆ ಸೃಷ್ಟಿಸಿದೆ ನಿನ್ನನ್ನು,
ಅಂತರಂಗದ ಭಾವ ಏನೇ ಇರಲಿ ನಿನ್ನ
ಮುಖವು ಧ್ವನಿಸುವುದು ಕೇವಲ ಸ್ನೇಹಭಾವವನು.
ಮುಖದ ಸವಿಭಾವವನು ಗುಣವು ನಿಜಗೊಳಿಸದಿರೆ
ನಿನ್ನ ಚೆಲುವೆಲ್ಲ ‘ಈವ್’ ಪಡೆದ ಸೇಬಿನ ಥರವೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 93
So shall i live, supposing thou art true

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೧೯
Next post ಬಂಜೆ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…