ನಿನ್ನ ನಿಷ್ಠೆಯ ನಂಬಿ, ವಂಚಿತಪತಿಯ ಹಾಗೆ
ಹೀಗೇ ಉಳಿವೆ ನಾನು, ನೀನು ಬದಲಾದರೂ;
ಒಲಿದ ಮುಖ ಕಾಣುವುದು ಒಲಿದ ಮುಖವಾಗಿಯೇ –
ಮುಖ ನನಗೆ, ಹೃದಯ ಅನ್ಯರಿಗಾಗಿ ಇದ್ದರೂ.
ದ್ವೇಷ ನಿನ್ನೀ ಕಣ್ಣಿನಲಿ ಎಂದೂ ಬಾಳದಿದೆ,
ಒಳಗೆ ಬದಲಾದರೂ ತಿಳಿಯದದು ಕಣ್ಣಿಂದ,
ಎಷ್ಟೋ ನೋಟಗಳಲ್ಲಿ ಹುಸಿಹೃದಯದೆಲ್ಲ ಕಥೆ
ಸುಸ್ಪಷ್ಟ, ಮುಖದ ನಿಸ್ನೇಹ ಬಿಗಿತಗಳಿಂದ.
ಆದರಾ ದೈವವೋ ಸ್ನೇಹವೊಂದೇ ನಿನ್ನ
ದೃಷ್ಟಿಯೊಳು ಹೊಳೆವಂತೆ ಸೃಷ್ಟಿಸಿದೆ ನಿನ್ನನ್ನು,
ಅಂತರಂಗದ ಭಾವ ಏನೇ ಇರಲಿ ನಿನ್ನ
ಮುಖವು ಧ್ವನಿಸುವುದು ಕೇವಲ ಸ್ನೇಹಭಾವವನು.
ಮುಖದ ಸವಿಭಾವವನು ಗುಣವು ನಿಜಗೊಳಿಸದಿರೆ
ನಿನ್ನ ಚೆಲುವೆಲ್ಲ ‘ಈವ್’ ಪಡೆದ ಸೇಬಿನ ಥರವೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 93
So shall i live, supposing thou art true
Related Post
ಸಣ್ಣ ಕತೆ
-
ಅಪರೂಪದ ಬಾಂಧವ್ಯ
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ತಾಯಿ-ಬಂಜೆ
"ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…
-
ಎಪ್ರಿಲ್ ಒಂದು
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…