ನಿನ್ನ ನಿಷ್ಠೆಯ ನಂಬಿ, ವಂಚಿತಪತಿಯ ಹಾಗೆ
ಹೀಗೇ ಉಳಿವೆ ನಾನು, ನೀನು ಬದಲಾದರೂ;
ಒಲಿದ ಮುಖ ಕಾಣುವುದು ಒಲಿದ ಮುಖವಾಗಿಯೇ –
ಮುಖ ನನಗೆ, ಹೃದಯ ಅನ್ಯರಿಗಾಗಿ ಇದ್ದರೂ.
ದ್ವೇಷ ನಿನ್ನೀ ಕಣ್ಣಿನಲಿ ಎಂದೂ ಬಾಳದಿದೆ,
ಒಳಗೆ ಬದಲಾದರೂ ತಿಳಿಯದದು ಕಣ್ಣಿಂದ,
ಎಷ್ಟೋ ನೋಟಗಳಲ್ಲಿ ಹುಸಿಹೃದಯದೆಲ್ಲ ಕಥೆ
ಸುಸ್ಪಷ್ಟ, ಮುಖದ ನಿಸ್ನೇಹ ಬಿಗಿತಗಳಿಂದ.
ಆದರಾ ದೈವವೋ ಸ್ನೇಹವೊಂದೇ ನಿನ್ನ
ದೃಷ್ಟಿಯೊಳು ಹೊಳೆವಂತೆ ಸೃಷ್ಟಿಸಿದೆ ನಿನ್ನನ್ನು,
ಅಂತರಂಗದ ಭಾವ ಏನೇ ಇರಲಿ ನಿನ್ನ
ಮುಖವು ಧ್ವನಿಸುವುದು ಕೇವಲ ಸ್ನೇಹಭಾವವನು.
ಮುಖದ ಸವಿಭಾವವನು ಗುಣವು ನಿಜಗೊಳಿಸದಿರೆ
ನಿನ್ನ ಚೆಲುವೆಲ್ಲ ‘ಈವ್’ ಪಡೆದ ಸೇಬಿನ ಥರವೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 93
So shall i live, supposing thou art true
Related Post
ಸಣ್ಣ ಕತೆ
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…