Home / ಕವನ / ಕವಿತೆ / ಮುಗಿಯಿತೆ ನಾಟಕವು

ಮುಗಿಯಿತೆ ನಾಟಕವು

ಮುಗಿಯಿತೆ ನಾಟಕವು
ಪರದೆ ಕೆಳಕ್ಕಿಳಿಯಿತೆ
ಪ್ರೇಕ್ಷಕರೆದ್ದು ಹೋಗಿಯಾಯಿತೆ
ನೇಪಥ್ಯ ಬರಿದಾಯಿತೆ

ವೇಷ ಕಳಚಬೇಕು ನಟರು
ಮುಖವ ತೊಳೆಯಬೇಕು ಅವರು
ತೊಳೆದರೂನು ಬಣ್ಣವು
ಮೋರೆಯಲ್ಲಿ ಇನ್ನುವು

ಇನ್ನೂ ಏನೊ ಉಳಿದಂತೆ
ಕತೆಯಿನ್ನೂ ಮುಗಿಯದಂತೆ
ಮಾತು ಅರ್‍ಧವು
ಮಾತಿನರ್‍ಥ ಅರ್ಧವು

ಯಾವುದು ತಾನೆ ನಾಟಕ
ಯಾವುದು ತಾನೆ ಜೀವನ
ಯಾವುದರಲಿ ಯಾವುದೆಂದು
ತಿಳಿಯದಂತು ಗೊಂದಲ

ಕೊನೆಯಾದರೂ ಕೊನೆಯಿಲ್ಲ
ಅಂಕ ದೃಶ್ಯ ಮರೆತಿತಲ್ಲ
ಮನಸು ಆಗಲೇ
ರಂಗ ಮಧ್ಯದಲ್ಲೇ

ಬಣ್ಣ ಬದಲಾಯಿಸಿ
ವೇಷ ಬದಲಾಯಿಸಿ
ಸತ್ತವನೆದ್ದು ಬರಬಹುದೆ
ಮಿಂಚುವನೆ ಇಲ್ಲ ಕುಸಿಯುವನೆ

ಅಂಕ ಬದಲಾಗುವುದು
ನಾಟಕ ಬದಲಾಗುವುದು
ನೋಡುವ ಜನರು ಬದಲಾಗುವರು
ಬದಲಾಗದಿರುವರೇನು ಆಡುವವರೂ ಆಡಿಸುವವರೂ

ಇದ್ದರದಕೆ ದೃಶ್ಯವೆಂದು
ಇಲ್ಲದಿದ್ದರೆ ಅದೃಶ್ಯವೆಂದು
ನಟರ ನಟ ನಟರಾಜನೆ
ದಿಗ್ದರ್‍ಶಕ ನೀ ಸದಾಶಿವ ಸದಾ ಕಣ್ಮರೆ
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...