Home / ಲೇಖನ / ವ್ಯಕ್ತಿ / ಡಾ. ಇಂದೇರ್ ಬಿರ್‌ಗಿಲ್

ಡಾ. ಇಂದೇರ್ ಬಿರ್‌ಗಿಲ್

ದಿನ ಬೆಳಗಾಗದರೊಳಗಾಗಿ ಡಾ|| ಇಂದೇರ್ ಬಿರ್‌ಗಿಲ್ ವಿಶ್ವವಿಖ್ಯಾತಿ ಗಳಿಸಿರುವರು.

ತೀರಾ ಉಲ್ಬಣಗೊಂಡ ಕಿಡ್ನಿ ಕ್ಯಾನ್ಸರ್‌ ರೋಗಿಗಳಿಗೆ ರೋಬಾಟ್ ಸರ್ಜರಿಗಳನ್ನು ಬಲು ಯಶಸ್ವಿಯಾಗಿ ನೆರವೇರಿಸುವ ಮೂಲಕ ಹೆಸರುವಾಸಿಯಾಗಿರುವರು.

ಡಾ|| ಇಂದೇರ್ ಬಿರ್‌ಗಿಲ್- ಮೂಲತಃ ಭವ್ಯ ಭಾರತೀಯರು. ಆದರೀಗ ಅಮೆರಿಕನ್ ಸರ್‍ಜನ್. ಇಲ್ಲಿನ ತಂಡದ ನೇತೃತ್ವ ವಹಿಸಿರುವರು. ಈವತ್ತು ಇವರೆಲ್ಲ ಮಹತ್ವದ ಸಾಧನೆ ಮಾಡಿರುವರು.

ಲಾಸ್ ಏಂಜೆಲಿಸ್‌ನ ಯು‌ಎಸ್‌ಸಿ ಇನ್‌ಸ್ಟಿಟ್ಯೂಟ್ ಆಫ್ ಯುರೋಲಜಿಯ (ಯು‌ಎಸ್‌ಸಿ ಮೂತ್ರಶಾಸ್ತ್ರ ಸಂಸ್ಥೆ) ವೈದ್ಯರ ತಂಡವು ಅತ್ಯಂತ ದೀರ್ಘವಾದ ಈ ಸರ್ಜರಿಯನ್ನು ಏಳು ಸಣ್ಣ ಸಣ್ಣ ಛೇದನಗಳು ಮತ್ತು ನಾಲ್ಕು ರೊಬೋಟ್ ಉಪಕರಣಗಳನ್ನು ಮಾತ್ರ ಬಳಸಿ ಮಾಡಿರುವುದು.

ಹೃದಯವನ್ನು ಮರು ಸಂಪರ್ಕಿಸುವ ಪ್ರಮುಖ ರಕ್ತನಾಳದಲ್ಲಿ ಕ್ಯಾನ್ಸರ್ ಪರಿಣಾಮವಾಗಿ ಮೂರನೆಯ ಹಂತದ ಹೆಪ್ಪುಗಟ್ಟುವಿಕೆ ಸಂಭವಿಸಿದ್ದರಿಂದ ಈ ಸರ್ಜರಿ ಅನಿವಾರ್‍ಯವಾಗಿತ್ತು. ಸಾಮಾನ್ಯವಾಗಿ ಇನ್‌ಫೆರಿಯರ್‌ವೀನಾ ಕಾವಾ (ಐವಿಸಿ) ಥ್ರೊಂಬೆಕ್ಟೊಮಿ ಎಂಬುದಾಗಿ ಕರೆಯಲಾಗುವ ಈ ಕ್ಲಿಷ್ಟ ಸರ್‍ಜರಿಯನ್ನು ದೊಡ್ಡ ಗಾಯ ಮಾಡಿ ಮಾಡಬೇಕಾಗುತ್ತದೆಂದು- ಇಂದೇರ್ ಬಿರ್‌ಗಿಲ್ ಸರ್ಜನ್ ಎಲ್ಲರ ಪರವಾಗಿ ಖಚಿತಪಡಿಸಿರುವರು.

ಮೂತ್ರನಾಳದ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಲಾಗುವ ಈ ಕ್ಲಿಷ್ಟ ಸರ್ಜರಿಯು ಮೂತ್ರನಾಳ ಸಂಬಂಧಿ ಒಪನ್ ಸರ್ಜರಿಗಳಲ್ಲೇ ಅತ್ಯಂತ ಸವಾಲಿನದಾಗಿದೆ. ಇಂಥಾದೊಂದು ಸರ್ಜರಿಯನ್ನು ಕೇವಲ ೭ ಸಣ್ಣ ಗಾಯ, ೪ ರೊಬೋಟ್ ಉಪಕರಣ ಬಳಸಿ ಮಾಡಿರುವುದು ಬಹು ದೊಡ್ಡ ಸಾಧನೆ ಎನ್ನಲಾಗಿದೆ.

ಇದೇ ತಂಡವು ಈ ತನಕ ಮೂತ್ರನಾಳದ ಕ್ಯಾನ್ಸರ್ ಹಾಗೂ ೩ನೆಯ ಹಂತದ ಥ್ರೋಯಿ ತಲುಪಿದ ೯ ರೋಗಿಗಳಿಗೆ ಈ “ರೊಬೋಟ್ ಐವಿಸಿ ಥ್ರೋಬೊಕ್ಟೊವಿ” ನಡೆಸಿದೆಯೆಂದು ಹೇಳಿರುವರು. ಇವರೆಲ್ಲ ಏಳು ತಿಂಗಳುಗಳ ಬಳಿಕ ಗಮನಿಸಿದಾಗ ಇವೆಲ್ಲರೂ ತಮ್ಮ ತಮ್ಮ ಸಮಸ್ಯೆಯಿಂದ ಪಾರಾಗಿದ್ದು, ರೋಗ ಲಕ್ಷಣವೇ ಕಾಣಿಸದಿರುವುದು ಚಿಕಿತ್ಸೆ ಯಶಸ್ವಿಯಾಗಿರುವುದಕ್ಕೆ ಹಿರಿಸಾಕ್ಷಿಯಾಗಿರುವರೆಂದು ವೈದ್ಯರಾದ ಡಾ| ಇಂದೇರ್ ಬಿರ್‌ಗಿಲ್ ಹೇಳಿರುವರು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...