Home / ಲೇಖನ / ವ್ಯಕ್ತಿ / ಡಾ. ಇಂದೇರ್ ಬಿರ್‌ಗಿಲ್

ಡಾ. ಇಂದೇರ್ ಬಿರ್‌ಗಿಲ್

ದಿನ ಬೆಳಗಾಗದರೊಳಗಾಗಿ ಡಾ|| ಇಂದೇರ್ ಬಿರ್‌ಗಿಲ್ ವಿಶ್ವವಿಖ್ಯಾತಿ ಗಳಿಸಿರುವರು.

ತೀರಾ ಉಲ್ಬಣಗೊಂಡ ಕಿಡ್ನಿ ಕ್ಯಾನ್ಸರ್‌ ರೋಗಿಗಳಿಗೆ ರೋಬಾಟ್ ಸರ್ಜರಿಗಳನ್ನು ಬಲು ಯಶಸ್ವಿಯಾಗಿ ನೆರವೇರಿಸುವ ಮೂಲಕ ಹೆಸರುವಾಸಿಯಾಗಿರುವರು.

ಡಾ|| ಇಂದೇರ್ ಬಿರ್‌ಗಿಲ್- ಮೂಲತಃ ಭವ್ಯ ಭಾರತೀಯರು. ಆದರೀಗ ಅಮೆರಿಕನ್ ಸರ್‍ಜನ್. ಇಲ್ಲಿನ ತಂಡದ ನೇತೃತ್ವ ವಹಿಸಿರುವರು. ಈವತ್ತು ಇವರೆಲ್ಲ ಮಹತ್ವದ ಸಾಧನೆ ಮಾಡಿರುವರು.

ಲಾಸ್ ಏಂಜೆಲಿಸ್‌ನ ಯು‌ಎಸ್‌ಸಿ ಇನ್‌ಸ್ಟಿಟ್ಯೂಟ್ ಆಫ್ ಯುರೋಲಜಿಯ (ಯು‌ಎಸ್‌ಸಿ ಮೂತ್ರಶಾಸ್ತ್ರ ಸಂಸ್ಥೆ) ವೈದ್ಯರ ತಂಡವು ಅತ್ಯಂತ ದೀರ್ಘವಾದ ಈ ಸರ್ಜರಿಯನ್ನು ಏಳು ಸಣ್ಣ ಸಣ್ಣ ಛೇದನಗಳು ಮತ್ತು ನಾಲ್ಕು ರೊಬೋಟ್ ಉಪಕರಣಗಳನ್ನು ಮಾತ್ರ ಬಳಸಿ ಮಾಡಿರುವುದು.

ಹೃದಯವನ್ನು ಮರು ಸಂಪರ್ಕಿಸುವ ಪ್ರಮುಖ ರಕ್ತನಾಳದಲ್ಲಿ ಕ್ಯಾನ್ಸರ್ ಪರಿಣಾಮವಾಗಿ ಮೂರನೆಯ ಹಂತದ ಹೆಪ್ಪುಗಟ್ಟುವಿಕೆ ಸಂಭವಿಸಿದ್ದರಿಂದ ಈ ಸರ್ಜರಿ ಅನಿವಾರ್‍ಯವಾಗಿತ್ತು. ಸಾಮಾನ್ಯವಾಗಿ ಇನ್‌ಫೆರಿಯರ್‌ವೀನಾ ಕಾವಾ (ಐವಿಸಿ) ಥ್ರೊಂಬೆಕ್ಟೊಮಿ ಎಂಬುದಾಗಿ ಕರೆಯಲಾಗುವ ಈ ಕ್ಲಿಷ್ಟ ಸರ್‍ಜರಿಯನ್ನು ದೊಡ್ಡ ಗಾಯ ಮಾಡಿ ಮಾಡಬೇಕಾಗುತ್ತದೆಂದು- ಇಂದೇರ್ ಬಿರ್‌ಗಿಲ್ ಸರ್ಜನ್ ಎಲ್ಲರ ಪರವಾಗಿ ಖಚಿತಪಡಿಸಿರುವರು.

ಮೂತ್ರನಾಳದ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಲಾಗುವ ಈ ಕ್ಲಿಷ್ಟ ಸರ್ಜರಿಯು ಮೂತ್ರನಾಳ ಸಂಬಂಧಿ ಒಪನ್ ಸರ್ಜರಿಗಳಲ್ಲೇ ಅತ್ಯಂತ ಸವಾಲಿನದಾಗಿದೆ. ಇಂಥಾದೊಂದು ಸರ್ಜರಿಯನ್ನು ಕೇವಲ ೭ ಸಣ್ಣ ಗಾಯ, ೪ ರೊಬೋಟ್ ಉಪಕರಣ ಬಳಸಿ ಮಾಡಿರುವುದು ಬಹು ದೊಡ್ಡ ಸಾಧನೆ ಎನ್ನಲಾಗಿದೆ.

ಇದೇ ತಂಡವು ಈ ತನಕ ಮೂತ್ರನಾಳದ ಕ್ಯಾನ್ಸರ್ ಹಾಗೂ ೩ನೆಯ ಹಂತದ ಥ್ರೋಯಿ ತಲುಪಿದ ೯ ರೋಗಿಗಳಿಗೆ ಈ “ರೊಬೋಟ್ ಐವಿಸಿ ಥ್ರೋಬೊಕ್ಟೊವಿ” ನಡೆಸಿದೆಯೆಂದು ಹೇಳಿರುವರು. ಇವರೆಲ್ಲ ಏಳು ತಿಂಗಳುಗಳ ಬಳಿಕ ಗಮನಿಸಿದಾಗ ಇವೆಲ್ಲರೂ ತಮ್ಮ ತಮ್ಮ ಸಮಸ್ಯೆಯಿಂದ ಪಾರಾಗಿದ್ದು, ರೋಗ ಲಕ್ಷಣವೇ ಕಾಣಿಸದಿರುವುದು ಚಿಕಿತ್ಸೆ ಯಶಸ್ವಿಯಾಗಿರುವುದಕ್ಕೆ ಹಿರಿಸಾಕ್ಷಿಯಾಗಿರುವರೆಂದು ವೈದ್ಯರಾದ ಡಾ| ಇಂದೇರ್ ಬಿರ್‌ಗಿಲ್ ಹೇಳಿರುವರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...