Home / ಲೇಖನ / ಇತರೆ / ಬಾಲ್ಯ ವಿವಾಹಗಳ ಕಥೆ

ಬಾಲ್ಯ ವಿವಾಹಗಳ ಕಥೆ

‘ಭವ್ಯ ಭಾರತದಲ್ಲಿ ಬಾಲ್ಯ ವಿವಾಹಗಳು ಜಾಸ್ತಿ ಜರುಗುತ್ತಿವೆ. ಇದಕ್ಕೆ ಮುಖ್ಯ ಕಾರಣಗಳನ್ನು ಕೇಂದ್ರ ಸಾಂಖ್ಯಿಕ ಇಲಾಖೆ ಇತ್ತೀಚೆಗೆ ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆ (ಡಿ‌ಎಲ್‌ಎಚ್‌ಎಸ್) ಅಧ್ಯಯನ ನಡೆಸಿರುವುದು.

ಮನೆಯಲ್ಲಿ ಅನಕ್ಷರತೆ, ಬಡತನ, ಮೂಢನಂಬಿಕೆ, ಕಾಯ್ದೆ, ಕಾನೂನು, ಗೊತ್ತಿಲ್ಲದೆ ಇರುವುದರಿಂದ, ಅಜ್ಜ ಅಜ್ಜಿಯರ ಒತ್ತಾಯದ ಮೇರೆಗೆ ಹೆಣ್ಣುಮಕ್ಕಳು ಮದುವೆಯಾದರೆ ಸುರಕ್ಷಿತವೆಂದು ಭಾವಿಸಿರುವುದು; ಬೇಗ ಮದುವೆಯಾದರೆ ಬೇಗ ಮಕ್ಕಳಾದರೆ ಭವಿಷ್ಯ ಉತ್ತಮವಿರುವುದೆಂದು, ಮದುವೆ ಖರ್ಚು ಉಳಿಸಲು ಐದಾರು ಜನರನ್ನು ಒಟ್ಟಿಗೆ ಸೇರಿಸಿ ಮದುವೆ ಮಾಡಿ ಕೈತೊಳೆದುಕೊಳ್ಳುವ ಉದ್ದೇಶದಿಂದ ಬಾಲ್ಯ ವಿವಾಹಗಳು ಹಳ್ಳಿಗಳಲ್ಲಿ ಹಿಂದುಳಿದ ಬಡ ಕುಟುಂಬಗಳಲ್ಲಿ ಜಾಸ್ತಿ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ೧೦ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಲಬುರ್‍ಗಿಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹಗಳು ದಾಖಲಾಗಿವೆ. ಪ್ರಪ್ರಥಮ ಸ್ಥಾನದಲ್ಲಿ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಜಿಲ್ಲೆಗಳಲ್ಲಿ ಗುಟ್ಟಾಗಿ ಬಾಲ್ಯ ವಿವಾಹಗಳು ಜರುಗುತ್ತಿವೆ.

ಕಲಬುರ್‍ಗಿಯಲ್ಲಿ ೨೦೦೭-೨೦೦೮ನೆಯ ಸಾಲಿನಲ್ಲಿ ಶೇಕಡಾ ೪೧% ೨೦೧೨-೧೩ನೆಯ ಸಾಲಿನಲ್ಲಿ ಶೇಕಡಾ ೨೮.೫%

ಉಡುಪಿಯಲ್ಲಿ ೨೦೦೭-೨೦೦೮ನೆಯ ಸಾಲಿನಲ್ಲಿ ಶೇಕಡಾ ೨.೪% ೨೦೧೨-೧೩ನೆಯ ಸಾಲಿನಲ್ಲಿ ಶೇಕಡಾ ೧.೩%ಕ್ಕೆ ಕುಸಿದಿವೆ.

ಬಾಲ್ಯ ವಿವಾಹದ ಪ್ರಮಾಣವು ೨೦೦೭-೨೦೦೮ನೆಯ ಸಾಲಿಗಿಂತ ೨೦೧೨-೨೦೧೩ನೆಯ ಸಾಲಿನಲ್ಲಿ ಒಟ್ಟು ಶೇಕಡಾ ೮.೩% ರಷ್ಟು ಕುಸಿದಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಬಾಲ್ಯವಿವಾಹದ ಪ್ರಮಾಣ ಗಣನೀಯವಾಗಿ ಕುಸಿತ ಕಂಡಿದೆಯೆಂದು (ಡಿ‌ಎಲ್‌ಎಚ್‌ಎಸ್) ಕೇ.ಸಾ.ಇ. ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆಯು ಗಮನಾರ್‍ಹವಾದ ಅಂಶಗಳನ್ನು ಬಯಲಿಗೆಳೆದಿದೆ.

ಆದ್ದರಿಂದ ಮುದ್ದಾದ ಮಕ್ಕಳೆ… ತಂದೆ-ತಾಯಿ, ಅಜ್ಜ-ಅಜ್ಜಿ, ಅಕ್ಕ-ಅಣ್ಣಂದಿರಿಗೆ ಕಾನೂನು ಅರಿವು ಮಾಡಿಸಬೇಕು. ಬಾಲ್ಯವಿವಾಹ ಅಪರಾಧ ತಪ್ಪು, ಅಪಾಯ ಅವಮಾನವೆಂದು ತಿಳಿಸಿ ಹೇಳಿ ಅವರ ಮನ ಗೆಲ್ಲ ಬೇಕು. ಬಾಲ್ಯ ವಿವಾಹಗಳು ಎಲ್ಲೇ ಜರುಗಲಿ ಎಲ್ಲರೂ ಒಟ್ಟಾಗಿ ಸೇರಿ ತಡೆಯಬೇಕು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ