Home / ಲೇಖನ / ಇತರೆ / ಬಾಲ್ಯ ವಿವಾಹಗಳ ಕಥೆ

ಬಾಲ್ಯ ವಿವಾಹಗಳ ಕಥೆ

‘ಭವ್ಯ ಭಾರತದಲ್ಲಿ ಬಾಲ್ಯ ವಿವಾಹಗಳು ಜಾಸ್ತಿ ಜರುಗುತ್ತಿವೆ. ಇದಕ್ಕೆ ಮುಖ್ಯ ಕಾರಣಗಳನ್ನು ಕೇಂದ್ರ ಸಾಂಖ್ಯಿಕ ಇಲಾಖೆ ಇತ್ತೀಚೆಗೆ ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆ (ಡಿ‌ಎಲ್‌ಎಚ್‌ಎಸ್) ಅಧ್ಯಯನ ನಡೆಸಿರುವುದು.

ಮನೆಯಲ್ಲಿ ಅನಕ್ಷರತೆ, ಬಡತನ, ಮೂಢನಂಬಿಕೆ, ಕಾಯ್ದೆ, ಕಾನೂನು, ಗೊತ್ತಿಲ್ಲದೆ ಇರುವುದರಿಂದ, ಅಜ್ಜ ಅಜ್ಜಿಯರ ಒತ್ತಾಯದ ಮೇರೆಗೆ ಹೆಣ್ಣುಮಕ್ಕಳು ಮದುವೆಯಾದರೆ ಸುರಕ್ಷಿತವೆಂದು ಭಾವಿಸಿರುವುದು; ಬೇಗ ಮದುವೆಯಾದರೆ ಬೇಗ ಮಕ್ಕಳಾದರೆ ಭವಿಷ್ಯ ಉತ್ತಮವಿರುವುದೆಂದು, ಮದುವೆ ಖರ್ಚು ಉಳಿಸಲು ಐದಾರು ಜನರನ್ನು ಒಟ್ಟಿಗೆ ಸೇರಿಸಿ ಮದುವೆ ಮಾಡಿ ಕೈತೊಳೆದುಕೊಳ್ಳುವ ಉದ್ದೇಶದಿಂದ ಬಾಲ್ಯ ವಿವಾಹಗಳು ಹಳ್ಳಿಗಳಲ್ಲಿ ಹಿಂದುಳಿದ ಬಡ ಕುಟುಂಬಗಳಲ್ಲಿ ಜಾಸ್ತಿ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ೧೦ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

ಕಲಬುರ್‍ಗಿಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹಗಳು ದಾಖಲಾಗಿವೆ. ಪ್ರಪ್ರಥಮ ಸ್ಥಾನದಲ್ಲಿ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಜಿಲ್ಲೆಗಳಲ್ಲಿ ಗುಟ್ಟಾಗಿ ಬಾಲ್ಯ ವಿವಾಹಗಳು ಜರುಗುತ್ತಿವೆ.

ಕಲಬುರ್‍ಗಿಯಲ್ಲಿ ೨೦೦೭-೨೦೦೮ನೆಯ ಸಾಲಿನಲ್ಲಿ ಶೇಕಡಾ ೪೧% ೨೦೧೨-೧೩ನೆಯ ಸಾಲಿನಲ್ಲಿ ಶೇಕಡಾ ೨೮.೫%

ಉಡುಪಿಯಲ್ಲಿ ೨೦೦೭-೨೦೦೮ನೆಯ ಸಾಲಿನಲ್ಲಿ ಶೇಕಡಾ ೨.೪% ೨೦೧೨-೧೩ನೆಯ ಸಾಲಿನಲ್ಲಿ ಶೇಕಡಾ ೧.೩%ಕ್ಕೆ ಕುಸಿದಿವೆ.

ಬಾಲ್ಯ ವಿವಾಹದ ಪ್ರಮಾಣವು ೨೦೦೭-೨೦೦೮ನೆಯ ಸಾಲಿಗಿಂತ ೨೦೧೨-೨೦೧೩ನೆಯ ಸಾಲಿನಲ್ಲಿ ಒಟ್ಟು ಶೇಕಡಾ ೮.೩% ರಷ್ಟು ಕುಸಿದಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಬಾಲ್ಯವಿವಾಹದ ಪ್ರಮಾಣ ಗಣನೀಯವಾಗಿ ಕುಸಿತ ಕಂಡಿದೆಯೆಂದು (ಡಿ‌ಎಲ್‌ಎಚ್‌ಎಸ್) ಕೇ.ಸಾ.ಇ. ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆಯು ಗಮನಾರ್‍ಹವಾದ ಅಂಶಗಳನ್ನು ಬಯಲಿಗೆಳೆದಿದೆ.

ಆದ್ದರಿಂದ ಮುದ್ದಾದ ಮಕ್ಕಳೆ… ತಂದೆ-ತಾಯಿ, ಅಜ್ಜ-ಅಜ್ಜಿ, ಅಕ್ಕ-ಅಣ್ಣಂದಿರಿಗೆ ಕಾನೂನು ಅರಿವು ಮಾಡಿಸಬೇಕು. ಬಾಲ್ಯವಿವಾಹ ಅಪರಾಧ ತಪ್ಪು, ಅಪಾಯ ಅವಮಾನವೆಂದು ತಿಳಿಸಿ ಹೇಳಿ ಅವರ ಮನ ಗೆಲ್ಲ ಬೇಕು. ಬಾಲ್ಯ ವಿವಾಹಗಳು ಎಲ್ಲೇ ಜರುಗಲಿ ಎಲ್ಲರೂ ಒಟ್ಟಾಗಿ ಸೇರಿ ತಡೆಯಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...