Home / ಲೇಖನ / ಇತರೆ / ಜಲಮಯ

ಜಲಮಯ

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ.

ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ.

ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭವ್ಯ ಭಾರತದಲ್ಲಿ ನೀರಿನ ಲಭ್ಯತೆ ೧೮೬೯ ಶತಕೋಟಿ ಕ್ಯೂಬಿಕ್ (ಟಿಸಿ‌ಎಂ) ಮೀಟರ್‌ನಷ್ಟಿದೆ.

ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾದ ನೀರು ೧೧೨೩ ಟಿಸಿ‌ಎಂ ಮಾತ್ರವೆಂಬ ಆತಂಕಕಾರಿ ವಿಷಯವನ್ನು ಬಯಲು ಮಾಡಿದೆ.

ದಿನೇದಿನೇ ನೀರಿನ ಬೇಡಿಕೆಗೆ ಹೋಲಿಸಿದರೆ ಈ ನೀರು ಎಲ್ಲಿಗೂ ಸಾಕಾಗದೆಂದು ಸಚಿವರು ಸದನದಲ್ಲಿ ಹೇಳಿರುವರು.

ಹೌದು! ಈಗೀಗ ಕೆರೆ, ಬಾವಿ, ಆಣೆಕಟ್ಟು, ಹಳ್ಳಕೊಳ್ಳ ಜಲಾಶಯಗಳೆಲ್ಲ ಬತ್ತಿ ಹೋಗಿ ಬೋರುಗಳು ೧,೦೦೦ ಅಡಿ ಆಳಕ್ಕೊದರೂ ನೀರಿನ ಒರತೆಯಿಲ್ಲ! ಇನ್ನು ಹತ್ತು ವರ್ಷ ಕಳೆದರೆ, ಭವ್ಯ ಭಾರತದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ..!

೨೦೨೫ರ ವೇಳೆಗೆ ದೇಶದ ಎಲ್ಲಾ ಜಲಮೂಲಗಳನ್ನು ಒಟ್ಟು ಗೂಡಿಸಿದರೂ ಭವ್ಯ ಭಾರತದ ನೀರಿನ ದಾಹ ತೀರಿಸಲು ಸಾಧ್ಯವಿಲ್ಲ. ಇತ್ತೀಚಿಗೆ ಸರ್ಕಾರವೇ ಈ ಆಘಾತಕಾರಿ ವಿಷಯವನ್ನು ಖಚಿತ ಪಡಿಸಿದೆ. ಸಂಶೋಧನಾ ವರದಿಯೊಂದನ್ನು ಆಧರಿಸಿ ಜಲಕೇಂದ್ರ ಸಂಪನ್ಮೂಲ ಸಹಾಯಕ ಸಚಿವ ಸನ್ವರ್‌ಲಾಲ್‌ ಲೋಕಸಭೆಗೆ ಈ ಕುರಿತು ವಿವರ ನೀಡಿ ದೇಶವನ್ನು ತಲ್ಲಣಗೊಳಿಸಿರುವರು.

ಆದ್ದರಿಂದ ರಾಜ್ಯ ಸರ್ಕಾರಗಳು ಜಲ ಸಂರಕ್ಷಣೆ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿವೆ ಕೇಂದ್ರ ಸರ್ಕಾರ ತಾಂತ್ರಿಕ ಮತ್ತು ಹಣಕಾಸು ನೆರವು ಒದಗಿಸುವ ಮೂಲಕ ಇಂತಹ ಕ್ರಮಗಳಿಗೆ ಮತ್ತಷ್ಟು ಬೆಂಬಲ ನೀಡುವುದೆಂದು ಸಚಿವರು ಈಗಾಗಲೇ ಖಚಿತಪಡಿಸಿರುವರು.

ಆದ್ದರಿಂದ ಪ್ರತಿ ಹಳ್ಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಕೇಂದ್ರಗಳಲ್ಲಿ ಮಳೆ ನೀರು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಲೇ ಬೇಕು. ಇರುವ ನೀರನ್ನು ಹಾಲಿನಂತೆ ಜೇನ ಹನಿಯಂತೆ… ತುಪ್ಪದಂತೆ ಖರ್ಚು ಮಾಡುವುದನ್ನು ಎಲ್ಲರೂ ಇನ್ನಾದರೂ ರೂಢಿಸಿಕೊಂಡರೆ ಒಳಿತು ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...