ಜಲಮಯ

ಜಲಮಯ

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ.

ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ.

ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭವ್ಯ ಭಾರತದಲ್ಲಿ ನೀರಿನ ಲಭ್ಯತೆ ೧೮೬೯ ಶತಕೋಟಿ ಕ್ಯೂಬಿಕ್ (ಟಿಸಿ‌ಎಂ) ಮೀಟರ್‌ನಷ್ಟಿದೆ.

ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾದ ನೀರು ೧೧೨೩ ಟಿಸಿ‌ಎಂ ಮಾತ್ರವೆಂಬ ಆತಂಕಕಾರಿ ವಿಷಯವನ್ನು ಬಯಲು ಮಾಡಿದೆ.

ದಿನೇದಿನೇ ನೀರಿನ ಬೇಡಿಕೆಗೆ ಹೋಲಿಸಿದರೆ ಈ ನೀರು ಎಲ್ಲಿಗೂ ಸಾಕಾಗದೆಂದು ಸಚಿವರು ಸದನದಲ್ಲಿ ಹೇಳಿರುವರು.

ಹೌದು! ಈಗೀಗ ಕೆರೆ, ಬಾವಿ, ಆಣೆಕಟ್ಟು, ಹಳ್ಳಕೊಳ್ಳ ಜಲಾಶಯಗಳೆಲ್ಲ ಬತ್ತಿ ಹೋಗಿ ಬೋರುಗಳು ೧,೦೦೦ ಅಡಿ ಆಳಕ್ಕೊದರೂ ನೀರಿನ ಒರತೆಯಿಲ್ಲ! ಇನ್ನು ಹತ್ತು ವರ್ಷ ಕಳೆದರೆ, ಭವ್ಯ ಭಾರತದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ..!

೨೦೨೫ರ ವೇಳೆಗೆ ದೇಶದ ಎಲ್ಲಾ ಜಲಮೂಲಗಳನ್ನು ಒಟ್ಟು ಗೂಡಿಸಿದರೂ ಭವ್ಯ ಭಾರತದ ನೀರಿನ ದಾಹ ತೀರಿಸಲು ಸಾಧ್ಯವಿಲ್ಲ. ಇತ್ತೀಚಿಗೆ ಸರ್ಕಾರವೇ ಈ ಆಘಾತಕಾರಿ ವಿಷಯವನ್ನು ಖಚಿತ ಪಡಿಸಿದೆ. ಸಂಶೋಧನಾ ವರದಿಯೊಂದನ್ನು ಆಧರಿಸಿ ಜಲಕೇಂದ್ರ ಸಂಪನ್ಮೂಲ ಸಹಾಯಕ ಸಚಿವ ಸನ್ವರ್‌ಲಾಲ್‌ ಲೋಕಸಭೆಗೆ ಈ ಕುರಿತು ವಿವರ ನೀಡಿ ದೇಶವನ್ನು ತಲ್ಲಣಗೊಳಿಸಿರುವರು.

ಆದ್ದರಿಂದ ರಾಜ್ಯ ಸರ್ಕಾರಗಳು ಜಲ ಸಂರಕ್ಷಣೆ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿವೆ ಕೇಂದ್ರ ಸರ್ಕಾರ ತಾಂತ್ರಿಕ ಮತ್ತು ಹಣಕಾಸು ನೆರವು ಒದಗಿಸುವ ಮೂಲಕ ಇಂತಹ ಕ್ರಮಗಳಿಗೆ ಮತ್ತಷ್ಟು ಬೆಂಬಲ ನೀಡುವುದೆಂದು ಸಚಿವರು ಈಗಾಗಲೇ ಖಚಿತಪಡಿಸಿರುವರು.

ಆದ್ದರಿಂದ ಪ್ರತಿ ಹಳ್ಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಕೇಂದ್ರಗಳಲ್ಲಿ ಮಳೆ ನೀರು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಲೇ ಬೇಕು. ಇರುವ ನೀರನ್ನು ಹಾಲಿನಂತೆ ಜೇನ ಹನಿಯಂತೆ… ತುಪ್ಪದಂತೆ ಖರ್ಚು ಮಾಡುವುದನ್ನು ಎಲ್ಲರೂ ಇನ್ನಾದರೂ ರೂಢಿಸಿಕೊಂಡರೆ ಒಳಿತು ಅಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಡಿಯುವ ನೀರು
Next post ಅತಿಯಾಗಿ ಬಿಗಿಯದಿರೋ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…