Home / ಲೇಖನ / ಇತರೆ / ಜಲಮಯ

ಜಲಮಯ

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ.

ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ.

ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭವ್ಯ ಭಾರತದಲ್ಲಿ ನೀರಿನ ಲಭ್ಯತೆ ೧೮೬೯ ಶತಕೋಟಿ ಕ್ಯೂಬಿಕ್ (ಟಿಸಿ‌ಎಂ) ಮೀಟರ್‌ನಷ್ಟಿದೆ.

ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾದ ನೀರು ೧೧೨೩ ಟಿಸಿ‌ಎಂ ಮಾತ್ರವೆಂಬ ಆತಂಕಕಾರಿ ವಿಷಯವನ್ನು ಬಯಲು ಮಾಡಿದೆ.

ದಿನೇದಿನೇ ನೀರಿನ ಬೇಡಿಕೆಗೆ ಹೋಲಿಸಿದರೆ ಈ ನೀರು ಎಲ್ಲಿಗೂ ಸಾಕಾಗದೆಂದು ಸಚಿವರು ಸದನದಲ್ಲಿ ಹೇಳಿರುವರು.

ಹೌದು! ಈಗೀಗ ಕೆರೆ, ಬಾವಿ, ಆಣೆಕಟ್ಟು, ಹಳ್ಳಕೊಳ್ಳ ಜಲಾಶಯಗಳೆಲ್ಲ ಬತ್ತಿ ಹೋಗಿ ಬೋರುಗಳು ೧,೦೦೦ ಅಡಿ ಆಳಕ್ಕೊದರೂ ನೀರಿನ ಒರತೆಯಿಲ್ಲ! ಇನ್ನು ಹತ್ತು ವರ್ಷ ಕಳೆದರೆ, ಭವ್ಯ ಭಾರತದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ..!

೨೦೨೫ರ ವೇಳೆಗೆ ದೇಶದ ಎಲ್ಲಾ ಜಲಮೂಲಗಳನ್ನು ಒಟ್ಟು ಗೂಡಿಸಿದರೂ ಭವ್ಯ ಭಾರತದ ನೀರಿನ ದಾಹ ತೀರಿಸಲು ಸಾಧ್ಯವಿಲ್ಲ. ಇತ್ತೀಚಿಗೆ ಸರ್ಕಾರವೇ ಈ ಆಘಾತಕಾರಿ ವಿಷಯವನ್ನು ಖಚಿತ ಪಡಿಸಿದೆ. ಸಂಶೋಧನಾ ವರದಿಯೊಂದನ್ನು ಆಧರಿಸಿ ಜಲಕೇಂದ್ರ ಸಂಪನ್ಮೂಲ ಸಹಾಯಕ ಸಚಿವ ಸನ್ವರ್‌ಲಾಲ್‌ ಲೋಕಸಭೆಗೆ ಈ ಕುರಿತು ವಿವರ ನೀಡಿ ದೇಶವನ್ನು ತಲ್ಲಣಗೊಳಿಸಿರುವರು.

ಆದ್ದರಿಂದ ರಾಜ್ಯ ಸರ್ಕಾರಗಳು ಜಲ ಸಂರಕ್ಷಣೆ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿವೆ ಕೇಂದ್ರ ಸರ್ಕಾರ ತಾಂತ್ರಿಕ ಮತ್ತು ಹಣಕಾಸು ನೆರವು ಒದಗಿಸುವ ಮೂಲಕ ಇಂತಹ ಕ್ರಮಗಳಿಗೆ ಮತ್ತಷ್ಟು ಬೆಂಬಲ ನೀಡುವುದೆಂದು ಸಚಿವರು ಈಗಾಗಲೇ ಖಚಿತಪಡಿಸಿರುವರು.

ಆದ್ದರಿಂದ ಪ್ರತಿ ಹಳ್ಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಕೇಂದ್ರಗಳಲ್ಲಿ ಮಳೆ ನೀರು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಲೇ ಬೇಕು. ಇರುವ ನೀರನ್ನು ಹಾಲಿನಂತೆ ಜೇನ ಹನಿಯಂತೆ… ತುಪ್ಪದಂತೆ ಖರ್ಚು ಮಾಡುವುದನ್ನು ಎಲ್ಲರೂ ಇನ್ನಾದರೂ ರೂಢಿಸಿಕೊಂಡರೆ ಒಳಿತು ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...