Home / ಲೇಖನ / ಇತರೆ / ಜಲಮಯ

ಜಲಮಯ

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ.

ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ.

ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭವ್ಯ ಭಾರತದಲ್ಲಿ ನೀರಿನ ಲಭ್ಯತೆ ೧೮೬೯ ಶತಕೋಟಿ ಕ್ಯೂಬಿಕ್ (ಟಿಸಿ‌ಎಂ) ಮೀಟರ್‌ನಷ್ಟಿದೆ.

ಆದರೆ ಇದರಲ್ಲಿ ಬಳಕೆಗೆ ಯೋಗ್ಯವಾದ ನೀರು ೧೧೨೩ ಟಿಸಿ‌ಎಂ ಮಾತ್ರವೆಂಬ ಆತಂಕಕಾರಿ ವಿಷಯವನ್ನು ಬಯಲು ಮಾಡಿದೆ.

ದಿನೇದಿನೇ ನೀರಿನ ಬೇಡಿಕೆಗೆ ಹೋಲಿಸಿದರೆ ಈ ನೀರು ಎಲ್ಲಿಗೂ ಸಾಕಾಗದೆಂದು ಸಚಿವರು ಸದನದಲ್ಲಿ ಹೇಳಿರುವರು.

ಹೌದು! ಈಗೀಗ ಕೆರೆ, ಬಾವಿ, ಆಣೆಕಟ್ಟು, ಹಳ್ಳಕೊಳ್ಳ ಜಲಾಶಯಗಳೆಲ್ಲ ಬತ್ತಿ ಹೋಗಿ ಬೋರುಗಳು ೧,೦೦೦ ಅಡಿ ಆಳಕ್ಕೊದರೂ ನೀರಿನ ಒರತೆಯಿಲ್ಲ! ಇನ್ನು ಹತ್ತು ವರ್ಷ ಕಳೆದರೆ, ಭವ್ಯ ಭಾರತದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ..!

೨೦೨೫ರ ವೇಳೆಗೆ ದೇಶದ ಎಲ್ಲಾ ಜಲಮೂಲಗಳನ್ನು ಒಟ್ಟು ಗೂಡಿಸಿದರೂ ಭವ್ಯ ಭಾರತದ ನೀರಿನ ದಾಹ ತೀರಿಸಲು ಸಾಧ್ಯವಿಲ್ಲ. ಇತ್ತೀಚಿಗೆ ಸರ್ಕಾರವೇ ಈ ಆಘಾತಕಾರಿ ವಿಷಯವನ್ನು ಖಚಿತ ಪಡಿಸಿದೆ. ಸಂಶೋಧನಾ ವರದಿಯೊಂದನ್ನು ಆಧರಿಸಿ ಜಲಕೇಂದ್ರ ಸಂಪನ್ಮೂಲ ಸಹಾಯಕ ಸಚಿವ ಸನ್ವರ್‌ಲಾಲ್‌ ಲೋಕಸಭೆಗೆ ಈ ಕುರಿತು ವಿವರ ನೀಡಿ ದೇಶವನ್ನು ತಲ್ಲಣಗೊಳಿಸಿರುವರು.

ಆದ್ದರಿಂದ ರಾಜ್ಯ ಸರ್ಕಾರಗಳು ಜಲ ಸಂರಕ್ಷಣೆ, ಜಲ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿವೆ ಕೇಂದ್ರ ಸರ್ಕಾರ ತಾಂತ್ರಿಕ ಮತ್ತು ಹಣಕಾಸು ನೆರವು ಒದಗಿಸುವ ಮೂಲಕ ಇಂತಹ ಕ್ರಮಗಳಿಗೆ ಮತ್ತಷ್ಟು ಬೆಂಬಲ ನೀಡುವುದೆಂದು ಸಚಿವರು ಈಗಾಗಲೇ ಖಚಿತಪಡಿಸಿರುವರು.

ಆದ್ದರಿಂದ ಪ್ರತಿ ಹಳ್ಳಿ, ತಾಲ್ಲೂಕು, ಜಿಲ್ಲಾ, ರಾಜ್ಯ ಕೇಂದ್ರಗಳಲ್ಲಿ ಮಳೆ ನೀರು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳಲೇ ಬೇಕು. ಇರುವ ನೀರನ್ನು ಹಾಲಿನಂತೆ ಜೇನ ಹನಿಯಂತೆ… ತುಪ್ಪದಂತೆ ಖರ್ಚು ಮಾಡುವುದನ್ನು ಎಲ್ಲರೂ ಇನ್ನಾದರೂ ರೂಢಿಸಿಕೊಂಡರೆ ಒಳಿತು ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...