ತಂಪಾದವೊ ಎಲ್ಲ ತಂಪಾದವೋ
ಮುದುರಿದ್ದ ಮೈ ಮನಸು
ಕೆದರಿದ್ದ ಕೆಟ್ಟ ಕನಸು
ಒಂದೂನೂ ಬಿಡದಾಂಗ ತಂಪಾದವೋ
ಲಂಕೇಶರನ್ನು ಅನುಕರಿಸಿದ್ದು ಸಾಕು, ಮುಂದೆ
ಅರಿವಿರಲಿಲ್ಲ ಕಾವು ಇನ್ನೂ ಇದೆ ಎಂದು
ಬಯಕೆ ಅರಿಯೇ ಇಲ್ಲ ಎಂದು
ತಿಳಿದೇ ಇರಲಿಲ್ಲ ನೀನಿಷ್ಟು ಚೆನ್ನ ಎಂದು
ಅದಮ್ಯ ಅದು ಎಂದು, ಬೇಕಾಗಿತ್ತೆಂದು.
ಎಲ್ಲ ತಿಳಿಯಿತು ಇಂದು, ಒಳಗೆ
ಬೇಯುತ್ತಿದ್ದ ಬಿಸಿಗಳು ತಂಪಾದವು
ಒಂದು ಗಳಿಗೆ ಬೆರಗಾದೆ, ಚಿಗಿದೆ,
ಸಂತಸ, ಅಂತೂ ಇರುವೆ ನೀ ನನಗೆ.
*****
Related Post
ಸಣ್ಣ ಕತೆ
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…