ಶಾಂತ ರಸವನ್ನು ರಸವೇ ಅಲ್ಲ
ಅಂದರಂತೆ ಕೆಲ ಮೀಮಾಂಸಕರು
ರಸಗಳಲ್ಲಿ ಶಾಂತರಸವೇ ಶ್ರೇಷ್ಠ ಅಂದರು
ಅಭಿನವಗುಪ್ತ ಆನಂದ ವರ್ಧನರು
ಶಾಂತ ರಸ ಅನ್ನಿ
ಶಾಂತಿಯ ಅರಸ ಅನ್ನಿ
ಏನೆಂದರೂ ಅದೇ ಮಂದಸ್ಮಿತ
ಹಸನ್ಮುಖ ಹುಡುಕು ನೋಟ
ಚುರುಕು ನಡಿಗೆ
ಹೈದರಾಬಾದಿನ ಬಾಡಿದ ಮಾವಿನ
ಮರಕ್ಕೆ ಬೆಂಗಳೂರಿನ ಮಲ್ಲಗೆ ಬಳ್ಳಿ
ಯನ್ನು ಹದವಾಗಿ ಹಚ್ಚಿಸಿ
ಮೊಗ್ಗನ್ನು ಹೂವಾಗಿ ಅರಳಿಸಿ
ತಾವೇ ಹೂವಾಗಿ ಹೋದರು
ಘಮ ಘಮವಾಗಿ ಉಳಿದರು.
*****
Related Post
ಸಣ್ಣ ಕತೆ
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಎದಗೆ ಬಿದ್ದ ಕತೆ
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…