Home / ಕವನ / ಕವಿತೆ / ಸಾಹಿತ್ಯ ಮತ್ತು ಧರ್ಮ

ಸಾಹಿತ್ಯ ಮತ್ತು ಧರ್ಮ

ದ್ವಾ ಸುಸರ್‍ಣಾ ಯುಯುಜಾ…..
ಉಪನಿಷತ್ತಿನ ಶ್ಲೋಕದ ಅವಿನಾಭಾವದ
ಹಕ್ಕಿಗಳೇ ಈ ಸಾಹಿತ್ಯ ಮತ್ತು ಧರ್ಮ
ಅದನ್ನು ಬಿಟ್ಟು ಇದಿಲ್ಲ ಇದನ್ನು ಬಿಟ್ಟು ಅದಿಲ್ಲ
ಬೀಜ ವೃಕ್ಷ ನ್ಯಾಯದಂತೆ ಗುದ್ದಾಡಲಿಲ್ಲ ಇವು
ಒಂದನ್ನೊಂದು ಒರಗಿ ನಿಂತವು ಗುದಮುರಿಗೆ
ಮುಗಿಯದ ಸೆಣಸಾಟ ಆಹ್ಲಾದ ಕೂಟ
ಒಂದಕ್ಕೊಂದು ನೀರೆರೆದು ಒಮ್ಮೊಮ್ಮೆ
ಬೇರು ಕೊಯ್ದು ಬೆಳೆದಿವೆ ಬೆಳೆಯುತ್ತಿವೆ.
ಈಗಲೂ ಚೀಸಿ ರೆಕ್ಕೆ ಹಾರುತ್ತದೆ ಸಾಹಿತ್ಯ
ದಿಕ್ಕುದಿಕ್ಕಿಗೂ ಚಲಿಸಿ ಬದಲಾಗಿ ನಿಯಮ ರಾಹಿತ್ಯ
ಕುಳಿತಿದೆ ಮಂಕಾಗಿ ಮೂಲೆ ಹಿಡಿದು ಧರ್ಮ
ತಿಕ್ಕಿ ತೊಳೆಯಬೇಕು ಅದು ನಮ್ಮ ಕರ್ಮ
ಅದಿಲ್ಲದ್ದರೆ ಇದು ಸಾಯುತ್ತದೆ. ಇದು ಅದನ್ನು ಕಾಯುತ್ತದೆ.
ಇರಲಿ ಹೀಗೇ ಒಂದಕ್ಕೊಂದು
ಉರುಳಾಗದೇ ತಿರುವಿ ಹಾಕುವ
ಒರಳಾಗದೇ ನಿಯತಿ ಕೃತ
ನಿಯಮ ರಹಿತ ಧರ್ಮಾವಲಂಬಿತ.
*****
‘ಕಾಲಾತೀತ’ ಅಭಿನಂದನಾ ಗ್ರಂಥ (ಆದಿ ಚುಂಚನಗಿರಿ ಶ್ರೀಗಳ)ಕ್ಕಾಗಿ ಬರೆದ ಕವಿತೆ.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...