ದೇಹ ಆತ್ಮಗಳ ಗೂಢತೆ

ಆಸೆಗಳಿಗೆ ದಾಸನಾಗದಿರು ಮನುಜ
ಕಷ್ಟಗಳಿಗೆ ನಿತ್ಯವೂ ಕೈಚಾಚು
ನರದೇಹವು ನಿನ್ನದು ಶಾಶ್ವತವಲ್ಲವು
ಮೋಹ ಸಂದೇಹಗಳ ಮರೆಮಾಚು

ಆತ್ಮವು ದೇಹದ ಆಲಯದಲ್ಲಿದ್ದರೂ
ದೇಹದಾಚೆಗೂ ಅದು ಪಸರಿಸಿದೆ
ಕಾಲಕ್ಕೆ ತಕ್ಕಂತೆ ದೇಹ ಬದಲಿಸಿದರೂ
ಆತ್ಮ ಕಾಲಾತೀತವಾಗಿ ಬೆಳಗಿದೆ

ಇಂದ್ರಿಯ ಸುಖ ಭೋಗಗಳೇ ನಿಷ್ಠೆ
ಇದು ದೇಹದ ನಿತ್ಯ ಪರಿಪಾಠ
ಎಷ್ಟೋ ಜನುಮಗಳ ವರೆಗೂ ಹೀಗೆ
ಆತ್ಮಕ್ಕೆ ದಾರಿತಪ್ಪಿಸಲು ಆಗಿದೆ ಕಾಟ

ಆತ್ಮೋದ್ಧಾರಕ್ಕೆ ಶರೀರವಾಗಲಿ ಇಂಬು
ಮುಕ್ತಿ ಮಾರ್‍ಗಕ್ಕೆ ಆಗಲಿ ಸೋಪಾನ
ದೇಹ ಆತ್ಮದೊಂದಿಗೆ ಪಾದವಿರಿಸಲಿ
ಮಾಣಿಕ್ಯ ವಿಠಲನೆ ಶಾಶ್ವತ ತಾಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೪೪
Next post ಯೋಧ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys