Home / ಲೇಖನ / ವಿಜ್ಞಾನ / ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?

ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?

ಉತ್ತರ ಕರ್ನಾಟಕದ ಪ್ರತಿ ಊರಿನಲ್ಲಿಯೂ ಗುಡಿ, ಕಟ್ಟೆ, ರಸ್ತೆ ಎಲ್ಲೆಂದರಲ್ಲಿ ಬೇವಿನ ಮರವನ್ನು ಬೆಳೆಸುತ್ತಾರೆ. ಇದು ಅಲ್ಲಿಯ ಸೆಕೆಯುಳ್ಳ ಕಾಲದ ಜನಕ್ಕೆ ತಂಪೆರೆಯುವ ಮರವೂ ಹೌದು. ಜನಪದ ಕವಿಕೂಡ “ಬ್ಯಾಸಗಿ ದಿವಸಕ ಬೇವಿನ ಮರತಂಪ, ಭೀಮಾರತಿ ಎಂಬ ಹೊಳೆತಂಪ” ಎಂದು ಪದವನ್ನೇ ಕಟ್ಟಿದ್ದಾನೆ. ಈ ಗಿಡದಿಂದಾಗುವ ಅಮೂಲ್ಯ ಉಪಯೋಗಗಳನ್ನು ಕೂಡ ಉತರ ಕರ್ನಾಟಕದ ಜನಕ್ಕೆ ಗೊತ್ತಿದೆ. ಬಾಣಂತಿಯರಿಗೆ ಇದನು ಬಳಸುತ್ತಾರೆ. ಇದರ ವಾಸನೆ ಬಡಿದರೆ ಕ್ರಿಮಿಕೀಟಗಳು ಹತ್ತಿರಬರುವುದಿಲ್ಲ, ಜತೆಗೆ ಈ ಮರವನ್ನು ಕಡಿದಾಗ ಮನೆಗೆ ತೊಲೆ ಸೌದೆಗಳಿಗೆ ಬಳೆಸಬಹುಡು. ಇದರಬೀಜಗಳು ಹಣ್ಣಾಗಿ ಉದುರಿದಾಗ ಸಂಗ್ರಹಿಸಿ ಇದರಿಂದ ಬೇವಿನ ಎಣ್ಣೆಯನ್ನು ತಯಾರಿಸಿ ಔಷಧಿ ಮಾಡುತ್ತಾರೆ. ಈ ಕಾರಣವಾಗಿ ಬೇವಿನಮರವನ್ನು ಸಹಜವಾಗಿ ಮನೆಮುಂದೆ ಬೆಳೆಸಲಾಗುತ್ತದೆ. ಇದರಿಂದ ಬೀಸಿಬರುವ ತಂಗಾಳಿ ಇನ್‌ಫ್ಲೂಯಾಂಜಾ ದಂತಹ ಸಾಂಕ್ರಾಮಿಕ ಜಾಡ್ಯವನ್ನು ಹೋಗಲಾಡಿಸುತ್ತದೆ. ಶೀತ ನೆಗಡಿಗೆ ಇದರ ವಾಸನೆ ಹೇಳಿ ಮಾಡಿಸಿದ ಔಷಧಿ. ಇದರ ಎಲೆಗಳ ಹೊಗೆಯನ್ನು ಮೂಗಿಗೆ ಹಿಡಿದರೆ ಸೀತದಂತಹ ಕಾಯಿಲೆಗಳು ದೂರವಾಗುತ್ತವೆ. ಇದರ ಕಡ್ಡಿಯನ್ನು ಬ್ರೆಶ್‌ನಂತೆ ಮಾಡಿ ಪ್ರತಿದಿನ ಹಲ್ಲುಗಳನ್ನು ಉಜ್ಜುತ್ತಾ ಬಂದರೆ ವಸಡುಗಟ್ಟಿಯಾಗುವುದಲ್ಲದೇ ದಂತಕ್ಷಯ ಮುಂತಾದ ಬಾಯಿ ಹುಣ್ಣುಗಳು ವಾಸಿಯಾಗುತ್ತವೆ. ಹಲ್ಲುಗಳೂ ಸಹ ಹೊಳೆಯುತ್ತವೆ.

ಬೇವಿನ ಎಲೆ, ಕಾಯಿ, ಕಡ್ಡಿ ಎಲ್ಲವೂ ಔಷಧಿ ಗುಣವನ್ನು ಹೊಂದಿರುತ್ತದೆ. ಬೇವಿನ ಎಲೆಗಳನ್ನು ಆಹಾರಧಾನ್ಯಗಳಲ್ಲಿ ಇಲ್ಲವೆ ಪುಸ್ತಕಗಳಲ್ಲಿರಿಸಿದರೆ ಅವು ಹುಳಗಳನ್ನು ದೂರ ಇರಿಸುತ್ತವೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...