‘ಕೊಲೆಸ್ಟ್ರಾಲ್’ ಕಡಿಮೆಯಾದರೆ ಆತ್ಮಹತ್ಯೆ ಪ್ರಯತ್ನಿಸಬಹುದು

‘ಕೊಲೆಸ್ಟ್ರಾಲ್’ ಕಡಿಮೆಯಾದರೆ ಆತ್ಮಹತ್ಯೆ ಪ್ರಯತ್ನಿಸಬಹುದು

‘ಕೊಲೆಸ್ಟ್ರಾಲ್’ ಹೆಚ್ಚಾದರೆ ಬೊಜ್ಜು ಬೆಳೆದು ಅಪಾಯಗಳಾಗಬಹುದೆಂದು ವೈದ್ಯಕೀಯವಾಗಿ ದೃಡಪಟ್ಟಿದೆ. ಕೈಕಾಲು ಹಿಡಿತ, ಹೃದಯಾಘಾತ, ಸೊಂಟನೋವು, ಚಟುವಟಿಕೆ ಗಳಿಲ್ಲದಿರುವುದು, ಮುಂತಾದ ಕಾಯಿಲೆಗಳು ಈ ಕೊರೆಸ್ಟ್ರಾಲ್ ಹೆಚ್ಚಾದಾಗ ಕಂಡು ಬರುತ್ತದೆ. ಆದ್ದರಿಂದ ವೈದ್ಯರೆ ಕೊಲೆಸ್ಟ್ರಾಲನ್ನು ಕಡಿಮೆ ಮಾಡಿಕೊಳ್ಳದಿದ್ದರೆ ಜೀವಕ್ಕೆ ಆಪತ್ತು ಎಂದು ಸಲಹೆ ಮಾಡುತ್ತಾರೆ. ಹೀಗಾಗಿ ಸ್ವಿಮೀಂಗು, ಜಿಮ್ಮು, ವ್ಯಾಯಾಮ ಮಾಡುವುದು, ಉಪವಾಸ ಇರುವುದನ್ನು ಮಾಡುತ್ತಾರೆ. ಆದರೆ ಕೊಲೆಸ್ಟ್ರಾಲ್ ರಕ್ತದಲ್ಲಿ ಕಡಿಮೆಯಾದರೆ ಆತ್ಮಹತ್ಯೆಯಂತಹ ಪ್ರಕರಣಗಳು ಜರುಗತ್ತವೆ ಎಂದು ೩ ವರ್ಷಗಳ ಅಧ್ಯಯನದಿಂದ (೧೯೫೫) ಅಮೇರಿಕೆಯ ವಿಜ್ಞಾನಿ ‘ಗಾಲಿಯರ್’ ಎಂಬುವವರು ಹೇಳುತ್ತಾರೆ. ಕೊಲೆಸ್ಟ್ರಾರಾಲ್ ಕುರಿತು ಇವರು ಸಾಕಷ್ಟು ಅಧ್ಯಯನ ಮಾಡಿದ ಫಲಶೃತಿ ಇದು. ಇದಕ್ಕೆ ಕಾರಣಗಳೂ ಕುತೂಲಹಕಾರಿಯಾಗಿವೆ.

ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾದಾಗ ಮಿದುಳಿನ ಸೆರೆಟೋನಿನ್ ಪ್ರಮಾಣದಲ್ಲಿ ಇಳಿತ ಕಂಡುಬರುತ್ತದೆ. ಈ ಪ್ರಮಾಣ ಕಡಿಮೆಯಾದರೆ ಮಿದುಳು ವಕ್ರೀಭವಗೊಂಡು ಆತ್ಮಹತ್ಯೆಯ ಮನೋಭಾವ ಹೆಚ್ಚಾಗುತ್ತದೆಂದು ಹೇಳುತ್ತಾರೆ. ಆಕ್ರಮಣ ಶೀಲ ಭಾವನೆಗಳನ್ನು ತೊಡೆದು ಹಾಕುವ ಸಾಮರ್ಥ್ಯ ಕುಂದಿ ಹೋಗುತ್ತದೆ. ಮಿದುಳಿನಲ್ಲಿ ಸೆರೆಟೋನಿನ್ ಪ್ರಮಾಣ ಕಡಿಮೆಯಾದಾಗ ಚಿತ್ತವಿಕಾರಗಳಾವುದು ಸಹಜ. ಇಂಥವರು ಯಾವುದೇ ಸಣ್ಣಪುಟ್ಟ ಕಾರಣಗಳು ಸಿಕ್ಕರೂ ಆತ್ಮಹತ್ಯೆ ಭಾವನೆ ತಾಳುತ್ತಾರೆ ಅಥವಾ ಅಪಘಾತಕ್ಕೆ ಕಾರಣರಾಗುತ್ತಾರೆ. ರಕ್ತದಲ್ಲಿ ಕೊಲಸ್ಟ್ರಾಲ್ ಪ್ಪಮಾಣವನ್ನು ಇಳಿಸುವ ಉದ್ದೇಶದಿಂದ ಔಷಧಿಗಳನ್ನು ಉಪಯೋಗಿಸುವ ರೋಗಿಗಳಲ್ಲಿ ಆತ್ಮಹತ್ಯೆಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿರುತ್ತದೆ. ಯಾರ ದೇಹದಲ್ಲಿ ಕೊಲೆಸಸ್ಟ್ರಾಲ್ ಪ್ರಮಾಣ ತೀರ ಕಡಿಮೆಯಾಗಿದೆಯೋ ಅವರಲ್ಲೂ ಸಹ ಆತ್ಮಹತ್ಯೆಯ ಪ್ರವೃತ್ತಿ ಹೆಚ್ಚಾಗಬಹುದೆಂದು ವಿಜ್ಞಾನಿಗಳು ತಿಳಿಸುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾವದ ಬೆನ್ನೇರಿ
Next post ಅಲ್ಲಲ್ಲಿ ನಿಂತು

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…