Home / ಲೇಖನ / ವಿಜ್ಞಾನ / ‘ಕೊಲೆಸ್ಟ್ರಾಲ್’ ಕಡಿಮೆಯಾದರೆ ಆತ್ಮಹತ್ಯೆ ಪ್ರಯತ್ನಿಸಬಹುದು

‘ಕೊಲೆಸ್ಟ್ರಾಲ್’ ಕಡಿಮೆಯಾದರೆ ಆತ್ಮಹತ್ಯೆ ಪ್ರಯತ್ನಿಸಬಹುದು

‘ಕೊಲೆಸ್ಟ್ರಾಲ್’ ಹೆಚ್ಚಾದರೆ ಬೊಜ್ಜು ಬೆಳೆದು ಅಪಾಯಗಳಾಗಬಹುದೆಂದು ವೈದ್ಯಕೀಯವಾಗಿ ದೃಡಪಟ್ಟಿದೆ. ಕೈಕಾಲು ಹಿಡಿತ, ಹೃದಯಾಘಾತ, ಸೊಂಟನೋವು, ಚಟುವಟಿಕೆ ಗಳಿಲ್ಲದಿರುವುದು, ಮುಂತಾದ ಕಾಯಿಲೆಗಳು ಈ ಕೊರೆಸ್ಟ್ರಾಲ್ ಹೆಚ್ಚಾದಾಗ ಕಂಡು ಬರುತ್ತದೆ. ಆದ್ದರಿಂದ ವೈದ್ಯರೆ ಕೊಲೆಸ್ಟ್ರಾಲನ್ನು ಕಡಿಮೆ ಮಾಡಿಕೊಳ್ಳದಿದ್ದರೆ ಜೀವಕ್ಕೆ ಆಪತ್ತು ಎಂದು ಸಲಹೆ ಮಾಡುತ್ತಾರೆ. ಹೀಗಾಗಿ ಸ್ವಿಮೀಂಗು, ಜಿಮ್ಮು, ವ್ಯಾಯಾಮ ಮಾಡುವುದು, ಉಪವಾಸ ಇರುವುದನ್ನು ಮಾಡುತ್ತಾರೆ. ಆದರೆ ಕೊಲೆಸ್ಟ್ರಾಲ್ ರಕ್ತದಲ್ಲಿ ಕಡಿಮೆಯಾದರೆ ಆತ್ಮಹತ್ಯೆಯಂತಹ ಪ್ರಕರಣಗಳು ಜರುಗತ್ತವೆ ಎಂದು ೩ ವರ್ಷಗಳ ಅಧ್ಯಯನದಿಂದ (೧೯೫೫) ಅಮೇರಿಕೆಯ ವಿಜ್ಞಾನಿ ‘ಗಾಲಿಯರ್’ ಎಂಬುವವರು ಹೇಳುತ್ತಾರೆ. ಕೊಲೆಸ್ಟ್ರಾರಾಲ್ ಕುರಿತು ಇವರು ಸಾಕಷ್ಟು ಅಧ್ಯಯನ ಮಾಡಿದ ಫಲಶೃತಿ ಇದು. ಇದಕ್ಕೆ ಕಾರಣಗಳೂ ಕುತೂಲಹಕಾರಿಯಾಗಿವೆ.

ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾದಾಗ ಮಿದುಳಿನ ಸೆರೆಟೋನಿನ್ ಪ್ರಮಾಣದಲ್ಲಿ ಇಳಿತ ಕಂಡುಬರುತ್ತದೆ. ಈ ಪ್ರಮಾಣ ಕಡಿಮೆಯಾದರೆ ಮಿದುಳು ವಕ್ರೀಭವಗೊಂಡು ಆತ್ಮಹತ್ಯೆಯ ಮನೋಭಾವ ಹೆಚ್ಚಾಗುತ್ತದೆಂದು ಹೇಳುತ್ತಾರೆ. ಆಕ್ರಮಣ ಶೀಲ ಭಾವನೆಗಳನ್ನು ತೊಡೆದು ಹಾಕುವ ಸಾಮರ್ಥ್ಯ ಕುಂದಿ ಹೋಗುತ್ತದೆ. ಮಿದುಳಿನಲ್ಲಿ ಸೆರೆಟೋನಿನ್ ಪ್ರಮಾಣ ಕಡಿಮೆಯಾದಾಗ ಚಿತ್ತವಿಕಾರಗಳಾವುದು ಸಹಜ. ಇಂಥವರು ಯಾವುದೇ ಸಣ್ಣಪುಟ್ಟ ಕಾರಣಗಳು ಸಿಕ್ಕರೂ ಆತ್ಮಹತ್ಯೆ ಭಾವನೆ ತಾಳುತ್ತಾರೆ ಅಥವಾ ಅಪಘಾತಕ್ಕೆ ಕಾರಣರಾಗುತ್ತಾರೆ. ರಕ್ತದಲ್ಲಿ ಕೊಲಸ್ಟ್ರಾಲ್ ಪ್ಪಮಾಣವನ್ನು ಇಳಿಸುವ ಉದ್ದೇಶದಿಂದ ಔಷಧಿಗಳನ್ನು ಉಪಯೋಗಿಸುವ ರೋಗಿಗಳಲ್ಲಿ ಆತ್ಮಹತ್ಯೆಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿರುತ್ತದೆ. ಯಾರ ದೇಹದಲ್ಲಿ ಕೊಲೆಸಸ್ಟ್ರಾಲ್ ಪ್ರಮಾಣ ತೀರ ಕಡಿಮೆಯಾಗಿದೆಯೋ ಅವರಲ್ಲೂ ಸಹ ಆತ್ಮಹತ್ಯೆಯ ಪ್ರವೃತ್ತಿ ಹೆಚ್ಚಾಗಬಹುದೆಂದು ವಿಜ್ಞಾನಿಗಳು ತಿಳಿಸುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...