Home / ಲೇಖನ / ವಿಜ್ಞಾನ / ಅಕ್ಕಿಕಾಳಿನಷ್ಟು ಕಾರು ತಯಾರಿಸಿದ ಜಪಾನ್

ಅಕ್ಕಿಕಾಳಿನಷ್ಟು ಕಾರು ತಯಾರಿಸಿದ ಜಪಾನ್

ಜಪಾನ್ ದೇಶವು ಚಿಕ್ಕದಾದರೂ ವೈಜ್ಞಾನಿಕವಾಗಿ ಬಹಳ ಶ್ರೇಷ್ಠ ಮಟ್ಟದಲ್ಲಿದೆ. ಪ್ರತಿದಿನವೂ ಅಲ್ಲಿ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಕಾರು ತಯಾರಿಕೆಯಲ್ಲಿ ಬಹಳ ಕಾಲದಿಂದಲೂ ಮೊದಲ ಸ್ಥಾನಗಳಲ್ಲಿ ಇದೆ. ಪುಟಾಣಿ ಗಾತ್ರದ ಯಂತ್ರಗಳ ಸೃಷ್ಟಿಯಲ್ಲಿಯೂ ಈ ದೇಶ ಎತ್ತಿದ ಕೈ. ಈಗ ಎಲ್ಲದಕ್ಕೂ ಮುಂದೆ ಹೋಗಿ ಅಕ್ಕಿಕಾಳಿನ ಗಾತ್ರದಲ್ಲಿ ಒಂದು ಚಲನ ಶೀಲ ಕಾರೊಂದನ್ನು ತಯಾರಿಸಿ ಬಿಟ್ಟಿದೆ. ಇದು ಮನರಂಜನೆ, ಅಥವಾ ಆಟಿಗೆ ವಸ್ತು ಅಲ್ಲವೇ ಅಲ್ಲ. ಕಾರಿನೊಳಗೆ ಇರಬೇಕಾದ ಎಲ್ಲ ಬಿಡಿಭಾಗಗಳು ಯಂತ್ರಗಳು, ಸೀಟುಗಳು, ಎಲ್ಲವೂ ಇವೆ. ಇದರಲ್ಲಿಯ ಬಿಡಿಭಾಗಗಳನ್ನು ದುರ್ಭೀನು ಹಾಕಿಯೇ ನೋಡಬೇಕು.

ಇಂಥಹ ಕಾರುಗಳನ್ನು ಜಪಾನಿನ “ನಿಪೊಂಡೆನ್ಸೊ” ಕಂಪನಿಯು ತಯಾರಿಸುತ್ತಿದ್ದು ಈ ಕಾರುಗಳ ವೇಗ ಒಂದು ಸೆಕೆಂಡಿಗೆ ೫ ಸೆಂಟಿಮೀಟರ್‌ಗಳಷ್ಟು ಚಲಿಸುತ್ತದೆ. ಈ ಕಾರಿನಲ್ಲಿ ೨೪ ಭಾಗಗಳಿದ್ದು ೫ ಭಾಗಗಳಿಂದ ರಚಿತವಾದ ಮೋಟಾರುಗಳನ್ನು ಒಳಗೊಂಡಿದೆ. ೧೦ ವರ್ಷಗಳ ಸಂಶೋಧನೆ ಈ ಕಾರಿನ ತಯಾರಿಕೆಯಲ್ಲಿ ಹಿಡಿದಿದೆ. ಈ ಸಂಶೋಧನೆಗೆ ತಗುಲಿದ ವೆಚ್ಚ ೨೫ ಕೋಟಿ ಡಾಲರ್‌ಗಳು, ಒಂದು ಘನಸೆಂಟಿ ಮೀಟರ್‌ಗ್ರಾತಕ್ಕಿಂತಲೂ ಚಿಕ್ಕಾದಾದರೂ ಈ ಕಾರು ಸಮರ್ಥವಾಗಿ ನಿರ್ವಹಿಸಬಲ್ಲ ಯಂತ್ರಗಳ ಅಭಿವೃದ್ಧಿಯೇ ಮುಖ್ಯಗುರಿ, ಎಂದು ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...