Home / ಲೇಖನ / ವಿಜ್ಞಾನ / ಕೊರಳಲ್ಲಿ ಹಾಕಿಕೊಳ್ಳಬಹುದಾದ ಮಿನಿಕಂಪ್ಯೂಟರ್‌!!

ಕೊರಳಲ್ಲಿ ಹಾಕಿಕೊಳ್ಳಬಹುದಾದ ಮಿನಿಕಂಪ್ಯೂಟರ್‌!!

ಸಾಮಾನ್ಯವಾಗಿ ಮೊಬೈಲ್ ಫೋನ್‌ಗಳನ್ನು, ಗುರುತಿನ ಚೀಟಿಗಳನ್ನು ಕೊರಳಲ್ಲಿ ಹಾಕಿಕೊಂಡು ತಿರುಗಾಡುವವರನ್ನು ನೋಡಿದ್ದೇವೆ. ಈ ರೀತಿ ಕಂಪ್ಯೂಟರ್‌ಗಳನ್ನೇ ಕೊರಳಲ್ಲಿ ನೇತು ಹಾಕಿಕೊಂಡು ತಿರುಗಾಡುವುದನ್ನು ಕಂಡಿಲ್ಲ. ಹಾಗೇನಾದರೂ ಇದ್ದರೆ ಸೂಕ್ಷ್ಮ ಯಂತ್ರಗಳನ್ನು ತಯಾರಿಸುವ ಜಪಾನ್ ದೇಶಕ್ಕೆ ಮೀಸಲು ಎನ್ನಬಹುದು. ನಿಜ ಜಪಾನ್ ದೇಶದ National Electronic Corporation ಸಂಸ್ಥೆಯು ದೇಹದ ಮೇಲೆ ಧರಿಸಬಹುದಾದ ವಯಕ್ತಿಕ ಕಂಪ್ಯೂಟರ್ಗಳನ್ನು (P.C.) ವಿನ್ಯಾಸಗೊಳಿಸಿದೆ. ಈ P.C. ಗಳು ಉದ್ಯಮಿಗಳಿಗೆ ಅವಶ್ಯಕವಾಗಿಬೇಕಾಗುತ್ತವೆ ಎಂದು ಬಳಸುವವರು ಹೇಳುತ್ತಾರೆ. ಇದನ್ನು ಕತ್ತಿನಲ್ಲಿಯೂ, ಸೊಂಟದಲ್ಲಿಯೂ ಸಿಕ್ಕಿಸಿಕೊಳ್ಳಬಹುದು. ವೈದ್ಯಕೀಯ ರಂಗದಲ್ಲಿ ಇದು ಹೆಚ್ಚು ಪ್ರಯೋಜನವಾಗುತ್ತದೆ. ಚಿಕಿತ್ಸೆಯಗುಣಮಟ್ಟವನ್ನು ಹೆಚ್ಚಿಸುತ್ತದೆಂದು ಅಲ್ಲಿಯ ವೈದ್ಯರು ಹೇಳುತ್ತಾರೆ. ವೈದ್ಯರು ರೋಗಿಗಳಿಂದ ಸಾವಿರಾರು ಕಿ.ಮೀ. ಗಳ ದೂರವಿದ್ದರೂ ರೋಗಿಯ ಶರೀರದ ಮೇಲೆ ಅಳವಡಿಸಿದ ಕಂಪ್ಯೂಟರ್ ಮೂಲಕ ರೋಗಿಯ ದೇಹಸ್ಥಿತಿಯ ಬಗೆಗೆ ಮಾಹಿತಿಗಳನ್ನು ಸಂಗ್ರಹಿಸಿ ಕಂಪ್ಯೂಟರ್ ಮೂಲಕವೇ ಪರಿಹಾರ ನೀಡಬಲ್ಲದು.

ಈ ಕಂಪ್ಯೂಟರ್‌ ಮಿನಿಕೀರ್ಬೊರ್ಡ್‌, ಡಾಯ್ಸ್‌ಬೋರ್ಡ್, ಟೆಲಿಫೋನ್, ಫ್ಯಾಕ್ಸ್ ಸಿ.ಡಿ. ರೋಮ್ಸ್ ಕ್ಯಾಮರಾ ಇಂಥಹ ವೈವಿಧ್ಯಮಯ ವಸ್ತುಗಳನ್ನು ಹೊಂದಿದೆ, ಎಂದರೆ ಆಶ್ಚರ್ಯವಾಗಬಹುದು. ಇವೆಲ್ಲವೂ ಸೇರಿ ಕೊರಳಲ್ಲಿ ಒಂದು ಕೆ.ಜಿ. ಭಾರವಾಗಬಹುದೆಂದು ಹೇಳುತ್ತಾರೆ. ಇವು ಬಲಿಷ್ಟವಾದ ಪ್ಲಾಸ್ಟಿಕ್‌ನಿಂದ ತಯಾರಾಗಿರುತ್ತವೆ. ಮಾತ್ರವಲ್ಲ ಶರೀರ ಸೆನ್ಸರ್‌ಗಳು, ರೋಗಿಯ ಚಿತ್ರಗಳನ್ನು ರವಾನಿಸಲು ವಿಡಿಯೋ ಕ್ಯಾಮರಾ ವೈದ್ಯಕೀಯ ವಿಶ್ವಕೋಶ ಇವುಗಳನ್ನು ಸಹ ಇದರಲ್ಲಿ ಅಳವಡಿಸಲಾಗಿದೆ. ಇದೊಂದು ಕ್ರಾಂತಿಕಾರಿ ಶೋಧನೆಯಲ್ಲವೆ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...