Home / ಲೇಖನ / ವಿಜ್ಞಾನ / ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

‘ಭೂಮಿ’ ಬಿಸಿಯಾಗುತ್ತಲಿದೆ, ಭೂಮಿಯ ತಾಪಾಮಾನ ಹೆಚ್ಚುತ್ತಲಿದೆ. ಇದಕ್ಕೆ ಕಾರಣಗಳೆಂದರೆ ಬಿಸಿಮಾರುತಗಳು, ಚಂಡಮಾರುತಗಳು, ಬರಗಾಲ, ಭೀಕರ ಪ್ರವಾಹ, ಭೂಕಂಪ, ಕೈಗಾರಿಕೆಗಳು, ಇನ್ನು ಮುಂತಾದ ಕಾರಣಗಳನ್ನು ಹೇಳಬಹುದು. ನಾವಿಂದು ಕಾಣುತ್ತಿರುವ ತಾಪಮಾನಕ್ಕೆ ಅನಿಲಗಳು, ಇಂಗಾಲದ ಡೈ‌ಆಕ್ಸೈಡ್, ಮಿಥೇನ್, ಕ್ಲೋರೋಫ್ಲೋರೊ, ಕಾರ್ಬನ್ಗಳು ನೈಟ್ರಾಸ್ ಆಕ್ಸೈಡ್ ಇವೇ ಮೊದಲಾದವುಗಳ ಹೆಚ್ಚಳವು ಕೂಡ ಭೂಮಿ ಕಾಯ್ದು ಕೆಂಡವಾಗುವಂತೆ ಮಾಡುತ್ತವೆ. ಈ ಅನಿಲಗಳ ಪ್ರಮಾಣ ವಾತಾವರಣದಲ್ಲಿ ೮೦ ರ ದಶಕಕ್ಕಿಂತಲೂ ಹೆಚ್ಚಾದುದು ದೃಢಪಟ್ಟಿದೆ. ಪ್ರತಿವರ್ಷ ಏಳುಶತಕೋಟಿ ಟನ್‌ಗಳಷ್ಟು ಇಂಗಾಲದ ಡೈ ಆಕ್ಸೈಡ್‌ನ್ನು ವಾತಾವರಣಕ್ಕೆ ಸೇರಿಸುತ್ತೇವೆ. ಈ ಅನಿಲಗಳ ಏರಿಕೆಯಿಂದ ಜಗತ್ತಿನ ಸರಾಸರಿ ಉಷ್ಣತೆ ಸು. ೩.೫ ಸೆಲ್ಷಿಯಸ್‌ನಷ್ಟು ಹೆಚ್ಚಾಗುತ್ತದೆ. ಇದು ತುಂಬ ಕಡಿಮೆ ಎನಿಸಿದರೂ ಇದರ ಪರಿಣಾಮ ಭಯಂಕರವಾಗಿದೆ.

ಈ ಉಷ್ಣತೆ ಹಿಮಪರ್ವತಗಳನ್ನೆಲ್ಲ ಕರಗಿಸಬಹುದು. ಸಮುದ್ರದ ನೀರು ಕಾದ ತನ್ನ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ತಗ್ಗುಪ್ರದೇಶಗಳಲ್ಲಿ ನೀರು ತುಂಬ ಹಾನಿಮಾಡಬಹುದು. ತಾಪಮಾನದ ವ್ಯತ್ಯಾಸದಿಂದ ಸಸ್ಯ ಹಾಗೂ ಪ್ರಾಣಿಗಳು ನಶಿಸಿ ಅಪಾಯದ ಅಂಚಿನಲ್ಲಿ ಬೀಳಬಹುದು, ಸಸ್ಯಗಳಿಗೆ ಭಾರಿ ಪೆಟ್ಟು, ಮಲೇರಿಯಾ ಹರಡುವ ಸೊಳ್ಳೆಗಳು ಅತಿಯಾಗುವು ದಲ್ಲದೇ ನೀರು ನುಗ್ಗಿ ಫಲವತ್ತಾದ ಕೃಷಿ ಭೂಮಿಗಳು ನಿಸ್ಪ್ರಯೋಜಕವಾಗಬಹುದು, ಹೀಗಾಗಿ ಕೃಷಿ ಉತ್ಪಾದನೆ ಕುಗ್ಗಿ ಆಹಾರದ ಅಭಾವ ತಲೆದೋರಬಹುದು ಎಂದು ಈಗಾಗಲೇ ಪತ್ರಿಕೆಗಳು ವರದಿಮಾಡಿವೆ. ವಿಜ್ಞಾನಿಗಳ ಪ್ರಕಾರ ವಾತಾವರಣಕ್ಕೆ ಹೊರದೂಡುವ ಇಂಗಾಲ ಡೈ ಆಕ್ಸ್ಟೈಡ್ ಪ್ರಮಾಣವನ್ನು ನಾವು ಇನ್ನು ಏಳಂಟು ವರ್ಷಗಳಲ್ಲಿ ಶೇ. ೫ ರಷ್ಟು ಕಡಿಮೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ವಿನಾಶಕಾರಿ ಸಮಯ ಬರಬಹುದೆಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಅಮೇರಿಕಾ ಹಾಗೂ ಮುಂದುವರಿದ ರಾಷ್ಟ್ರಗಳು ಕೈಗಾರಿಕೆ ಮತ್ತು ವಾಹನಗಳಿಂದ ಅನವಶ್ಯಕ ಹಾಗೂ ಪರಿಸರ ಹಾನಿಕಾರಕ ಇಂಧನವನ್ನು ಯತೇಚ್ಚವಾಗಿ ಹೊರದೂಡುತ್ತಿರುವುದು ಸರ್ವೆಯಿಂದ ತಿಳಿದು ಬಂದಿದೆ. ಭಾರತದ ಪ್ರಮುಖ ನಗರಗಳಾದ ಬಾಂಬೆ, ದೆಹಲಿ, ಕಲ್ಕಾತ್ತ, ಬೆಂಗಳೂರು, ಹೈದರಾಬಾದ್ ನಗರಗಳು ಸಹ ಇಂಥಹ ಪರಿಸರ ಹಾನಿಕಾರಕ ತಾಪಮಾನದ ಅನಿಲಗಳನ್ನು ಚೆಲ್ಲುತ್ತವೆ. ಭಾರತದ ಇಂಗಾಲ ಡೈ ಆಕ್ಸ್ಟೈಡ್‌ದ ಪ್ರಮಾಣ ತಲಾ ೬ ಟನ್‌ಗಳಷ್ಟಿದ್ದರೆ ಅಮೇರಿಕಾದ ವಾತಾವರಣದಲ್ಲಿ ಇಂಗಾಲದ ಡೈ ಆಕ್‌ಸೈಡ್ ಪ್ರಮಾಣ ತಲಾ ಪ್ರಮಾಣ ೨೬೦ ಟನ್‌ಗಳೆಂದರೆ ಆಶ್ಚರ್ಯವಾಗುತ್ತದೆ. ಈ ಜಾಗತಿಕ ದೇಶಗಳು ಮುಂದಿನ ದಿನಗಳಲ್ಲಿ ಈ ತಾಪಮಾನವನ್ನು ತಡೆಯದಿದ್ದರೆ ಜೀವನ ಅಸ್ತವ್ಯಸ್ತವಾಗಿ ವಾಯುಮಾಲಿನ್ಯ ಗರಿಷ್ಟ ಮಟ್ಟ ಮುಟ್ಟುತ್ತದೆ. ರಷಿಯಾ ಮತ್ತು ಪೂರ್‍ವ ಯುರೋಪಿನ ರಾಷ್ಟ್ರಗಳು ಕೆಲಮಟ್ಟಿಗೆ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕೆಗಳು ಸ್ವಾಭಾವಿಕವಾಗಿ ಕಡಿಮೆಯಾಗಿ ಇಂಧನವನ್ನು ಹೊರದೂಡುವುದು ಅಷ್ಟಾಗಿ ಆಗುತ್ತಿಲ್ಲ ಅದರೆ ಪ್ರಗತಿ ಹೊಂದಿದ ಬಲಿಷ್ಟ ರಾಷ್ಟ್ರವಾದ ಅಮೇರಿಕ ಮಾಲಿನ್ಯವನ್ನು ಹೆಚ್ಚಿಸುತ್ತದೆ ಎಂಬ ಕೂಗು ವಿಜ್ಞಾನಿಗಳಿಗೆ ಆತಂಕವನ್ನುಂಟು ಮಾಡಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...