Home / ಲೇಖನ / ವಿಜ್ಞಾನ / ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

ಭೂಮಿಯ ತಾಪದಿಂದ ತಟ್ಟಿಲಿರುವ ಅನಾಹುತಗಳು

‘ಭೂಮಿ’ ಬಿಸಿಯಾಗುತ್ತಲಿದೆ, ಭೂಮಿಯ ತಾಪಾಮಾನ ಹೆಚ್ಚುತ್ತಲಿದೆ. ಇದಕ್ಕೆ ಕಾರಣಗಳೆಂದರೆ ಬಿಸಿಮಾರುತಗಳು, ಚಂಡಮಾರುತಗಳು, ಬರಗಾಲ, ಭೀಕರ ಪ್ರವಾಹ, ಭೂಕಂಪ, ಕೈಗಾರಿಕೆಗಳು, ಇನ್ನು ಮುಂತಾದ ಕಾರಣಗಳನ್ನು ಹೇಳಬಹುದು. ನಾವಿಂದು ಕಾಣುತ್ತಿರುವ ತಾಪಮಾನಕ್ಕೆ ಅನಿಲಗಳು, ಇಂಗಾಲದ ಡೈ‌ಆಕ್ಸೈಡ್, ಮಿಥೇನ್, ಕ್ಲೋರೋಫ್ಲೋರೊ, ಕಾರ್ಬನ್ಗಳು ನೈಟ್ರಾಸ್ ಆಕ್ಸೈಡ್ ಇವೇ ಮೊದಲಾದವುಗಳ ಹೆಚ್ಚಳವು ಕೂಡ ಭೂಮಿ ಕಾಯ್ದು ಕೆಂಡವಾಗುವಂತೆ ಮಾಡುತ್ತವೆ. ಈ ಅನಿಲಗಳ ಪ್ರಮಾಣ ವಾತಾವರಣದಲ್ಲಿ ೮೦ ರ ದಶಕಕ್ಕಿಂತಲೂ ಹೆಚ್ಚಾದುದು ದೃಢಪಟ್ಟಿದೆ. ಪ್ರತಿವರ್ಷ ಏಳುಶತಕೋಟಿ ಟನ್‌ಗಳಷ್ಟು ಇಂಗಾಲದ ಡೈ ಆಕ್ಸೈಡ್‌ನ್ನು ವಾತಾವರಣಕ್ಕೆ ಸೇರಿಸುತ್ತೇವೆ. ಈ ಅನಿಲಗಳ ಏರಿಕೆಯಿಂದ ಜಗತ್ತಿನ ಸರಾಸರಿ ಉಷ್ಣತೆ ಸು. ೩.೫ ಸೆಲ್ಷಿಯಸ್‌ನಷ್ಟು ಹೆಚ್ಚಾಗುತ್ತದೆ. ಇದು ತುಂಬ ಕಡಿಮೆ ಎನಿಸಿದರೂ ಇದರ ಪರಿಣಾಮ ಭಯಂಕರವಾಗಿದೆ.

ಈ ಉಷ್ಣತೆ ಹಿಮಪರ್ವತಗಳನ್ನೆಲ್ಲ ಕರಗಿಸಬಹುದು. ಸಮುದ್ರದ ನೀರು ಕಾದ ತನ್ನ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ತಗ್ಗುಪ್ರದೇಶಗಳಲ್ಲಿ ನೀರು ತುಂಬ ಹಾನಿಮಾಡಬಹುದು. ತಾಪಮಾನದ ವ್ಯತ್ಯಾಸದಿಂದ ಸಸ್ಯ ಹಾಗೂ ಪ್ರಾಣಿಗಳು ನಶಿಸಿ ಅಪಾಯದ ಅಂಚಿನಲ್ಲಿ ಬೀಳಬಹುದು, ಸಸ್ಯಗಳಿಗೆ ಭಾರಿ ಪೆಟ್ಟು, ಮಲೇರಿಯಾ ಹರಡುವ ಸೊಳ್ಳೆಗಳು ಅತಿಯಾಗುವು ದಲ್ಲದೇ ನೀರು ನುಗ್ಗಿ ಫಲವತ್ತಾದ ಕೃಷಿ ಭೂಮಿಗಳು ನಿಸ್ಪ್ರಯೋಜಕವಾಗಬಹುದು, ಹೀಗಾಗಿ ಕೃಷಿ ಉತ್ಪಾದನೆ ಕುಗ್ಗಿ ಆಹಾರದ ಅಭಾವ ತಲೆದೋರಬಹುದು ಎಂದು ಈಗಾಗಲೇ ಪತ್ರಿಕೆಗಳು ವರದಿಮಾಡಿವೆ. ವಿಜ್ಞಾನಿಗಳ ಪ್ರಕಾರ ವಾತಾವರಣಕ್ಕೆ ಹೊರದೂಡುವ ಇಂಗಾಲ ಡೈ ಆಕ್ಸ್ಟೈಡ್ ಪ್ರಮಾಣವನ್ನು ನಾವು ಇನ್ನು ಏಳಂಟು ವರ್ಷಗಳಲ್ಲಿ ಶೇ. ೫ ರಷ್ಟು ಕಡಿಮೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ವಿನಾಶಕಾರಿ ಸಮಯ ಬರಬಹುದೆಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಅಮೇರಿಕಾ ಹಾಗೂ ಮುಂದುವರಿದ ರಾಷ್ಟ್ರಗಳು ಕೈಗಾರಿಕೆ ಮತ್ತು ವಾಹನಗಳಿಂದ ಅನವಶ್ಯಕ ಹಾಗೂ ಪರಿಸರ ಹಾನಿಕಾರಕ ಇಂಧನವನ್ನು ಯತೇಚ್ಚವಾಗಿ ಹೊರದೂಡುತ್ತಿರುವುದು ಸರ್ವೆಯಿಂದ ತಿಳಿದು ಬಂದಿದೆ. ಭಾರತದ ಪ್ರಮುಖ ನಗರಗಳಾದ ಬಾಂಬೆ, ದೆಹಲಿ, ಕಲ್ಕಾತ್ತ, ಬೆಂಗಳೂರು, ಹೈದರಾಬಾದ್ ನಗರಗಳು ಸಹ ಇಂಥಹ ಪರಿಸರ ಹಾನಿಕಾರಕ ತಾಪಮಾನದ ಅನಿಲಗಳನ್ನು ಚೆಲ್ಲುತ್ತವೆ. ಭಾರತದ ಇಂಗಾಲ ಡೈ ಆಕ್ಸ್ಟೈಡ್‌ದ ಪ್ರಮಾಣ ತಲಾ ೬ ಟನ್‌ಗಳಷ್ಟಿದ್ದರೆ ಅಮೇರಿಕಾದ ವಾತಾವರಣದಲ್ಲಿ ಇಂಗಾಲದ ಡೈ ಆಕ್‌ಸೈಡ್ ಪ್ರಮಾಣ ತಲಾ ಪ್ರಮಾಣ ೨೬೦ ಟನ್‌ಗಳೆಂದರೆ ಆಶ್ಚರ್ಯವಾಗುತ್ತದೆ. ಈ ಜಾಗತಿಕ ದೇಶಗಳು ಮುಂದಿನ ದಿನಗಳಲ್ಲಿ ಈ ತಾಪಮಾನವನ್ನು ತಡೆಯದಿದ್ದರೆ ಜೀವನ ಅಸ್ತವ್ಯಸ್ತವಾಗಿ ವಾಯುಮಾಲಿನ್ಯ ಗರಿಷ್ಟ ಮಟ್ಟ ಮುಟ್ಟುತ್ತದೆ. ರಷಿಯಾ ಮತ್ತು ಪೂರ್‍ವ ಯುರೋಪಿನ ರಾಷ್ಟ್ರಗಳು ಕೆಲಮಟ್ಟಿಗೆ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕೆಗಳು ಸ್ವಾಭಾವಿಕವಾಗಿ ಕಡಿಮೆಯಾಗಿ ಇಂಧನವನ್ನು ಹೊರದೂಡುವುದು ಅಷ್ಟಾಗಿ ಆಗುತ್ತಿಲ್ಲ ಅದರೆ ಪ್ರಗತಿ ಹೊಂದಿದ ಬಲಿಷ್ಟ ರಾಷ್ಟ್ರವಾದ ಅಮೇರಿಕ ಮಾಲಿನ್ಯವನ್ನು ಹೆಚ್ಚಿಸುತ್ತದೆ ಎಂಬ ಕೂಗು ವಿಜ್ಞಾನಿಗಳಿಗೆ ಆತಂಕವನ್ನುಂಟು ಮಾಡಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...