Home / ಲೇಖನ / ಇತರೆ / ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಸಾಮಾನ್ಯವಾಗಿ ಬಾಳೆಹಣ್ಣಿನ ಸಿಪ್ಪೆ, ಸೀತಾಫಲದ ಸಿಪ್ಪೆಗಳನ್ನು ತೆಗೆದು ಒಳಗಿನ ತಿರುಳನ್ನು ಮಾತ್ರ ನಾವು ಉಪಯೋಗಿಸುತ್ತೇವೆ. ಆದರೆ ಈ ಸಿಪ್ಪೆಗಳು ನಿರುಯುಕ್ತವೆಂದು ಬೀಸಾಡುತ್ತೇವೆ. ನಿಜಕ್ಕೂ ಈ ಸಿಪ್ಪೆಗಳಲ್ಲಿಯೇ ಜೀವಸತ್ವ ಅಧಿಕವಾಗಿರುತ್ತದೆಂದು ಆಹಾರ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿದ್ಯುತ್ ತಯಾರಿಸಿದಂತೆ ಲಿಂಬೆಹಣ್ಣಿನ ಸಿಪ್ಪೆಯಲ್ಲಿ ಸ್ವಾದಿಷ್ಟವಾದ ಪುಷ್ಟಿಕರವಾದ ತಂಬುಳಿಯನ್ನು ಮಾಡಬಹುದೆಂದು ಪೌರಶಾಸ್ತ್ರಜ್ಞರು ಪ್ರಯೋಗಮಾಡಿದ್ದಾರೆ. ಒಬ್ಬರಾದರೆ ಒಂದು ಲಿಂಬೆಹಣ್ಣಿನ ಸಿಪ್ಪೆ ೧/೨ ಚಮಚೆ ಜೀರಿಗೆ, ಅಡಿಕೆ ಗಾತ್ರದ ಬೆಲ್ಲ ಅಥವಾ ತುಪ್ಪ, ಒಂದು ಲೋಟ ಸಿಹಿಮಜ್ಜಿಗೆ ೧/೪ ತೆಂಗಿನ ಕಾಯಿ ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣಿ ಸಾಮಗ್ರಿಗಳು.

ತಯಾರಿಸುವ ವಿಧಾನ : ರಸ ತೆಗೆದ ಲಿಂಬೆಹಣ್ಣಿನ ಸಿಪ್ಪೆಯನ್ನು ಸಣ್ಣದಾಗಿ ಹೆಚ್ಚಿಕೊಂಡು ಬಾಣಲೆಯನ್ನು ಒಲೆಯ ಮೇಲಿಟ್ಟು ಲಿಂಬೆಸಿಪ್ಪೆಯನ್ನು ಹಾಕಿ ತುಪ್ಪುವನ್ನು ಹಾಕಬೇಕು. ಅದನ್ನು ಮಗಚುತ್ತ ಇದ್ದು ಕಂದು ಬಣ್ಣ ಬಂದಾಗ ಜೀರಿಗೆಯಲ್ಲಿ ಒಣಮೆಣಸನ್ನು ಹಾಕಿ ಹುರಿದುಕೊಳ್ಳಬೇಕು. ನಂತರ ತೆಂಗಿನ ತುರಿಯೊಂದಿಗೆ ನಯವಾಗಿ ರುಬ್ಬಿ ತೆಗೆದು ರುಚಿಗೆ ತಕ್ಕಷ್ಟು ಉಪ್ಪು ಮತ್ತು ಮಜ್ಜಿಗೆಯನ್ನು ಹಾಕಿ ಒಗ್ಗರಣಿ ಹಾಕಬೇಕು. ಮಜ್ಜಿಗೆಯ ಬದಲು ಹುಣಸೆಹುಳಿ ಹಾಕಿ ಗಟ್ಟಿಯಾಗಿ ತೆಗೆದರೆ ಚಟ್ನಿಯೂ ಆಗುತ್ತದೆ. ತಂಬುಳಿಯೂ ಆಗುತ್ತದೆ.

ಅಜೀರ್ಣವಾದರೆ ಕೊತ್ತಂಬರಿ ರಸ ಸಿದ್ಧಿ : ಜಾಸ್ತಿ ಊಟವಾದಾಗ ಅಥವಾ ಹೊಟ್ಟೆಯೊಳಗೆ ಗ್ಯಾಸ್ ತುಂಬಿಕೊಂಡು ಹೊಟ್ಟೆ ಉಬ್ಬರಿಸಿದಂತಾದಾಗ ಇಂಗ್ಲಿಷ್‌ ಔಷಧಿ ಪಡೆಯುವುದಕ್ಕಿಂತ ಪಾಕಶಾಸ್ತ್ರಜ್ಞರು ಇತೀಚಿಗೆ ಒಂದು ವಿಧಾನವನು ಕಂಡು ಹಿಡಿದಿದಾರೆ. ಸಿದ್ಧ ಮಾಡಿಟ್ಟುಕೊಂಡ ಕೊತ್ತಂಬರಿ ಎಲೆಗಳ ರಸವನ್ನು ಮಜ್ಜಿಗೆಯಲ್ಲಿ ಬೆರಸಿ ಕುಡಿದರೆ ಹೊಟ್ಟೆ ತಣ್ಣಗಾಗಿ ಸಾರಾಗಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...