Home / ಲೇಖನ / ಇತರೆ / ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಲಿಂಬೆ ಹಣ್ಣಿನ ಸಿಪ್ಪಿಯಲ್ಲಿ ಪೌಷ್ಠಿಕವಾದ ತಂಬುಳಿ ತಯಾರಿಕೆ

ಸಾಮಾನ್ಯವಾಗಿ ಬಾಳೆಹಣ್ಣಿನ ಸಿಪ್ಪೆ, ಸೀತಾಫಲದ ಸಿಪ್ಪೆಗಳನ್ನು ತೆಗೆದು ಒಳಗಿನ ತಿರುಳನ್ನು ಮಾತ್ರ ನಾವು ಉಪಯೋಗಿಸುತ್ತೇವೆ. ಆದರೆ ಈ ಸಿಪ್ಪೆಗಳು ನಿರುಯುಕ್ತವೆಂದು ಬೀಸಾಡುತ್ತೇವೆ. ನಿಜಕ್ಕೂ ಈ ಸಿಪ್ಪೆಗಳಲ್ಲಿಯೇ ಜೀವಸತ್ವ ಅಧಿಕವಾಗಿರುತ್ತದೆಂದು ಆಹಾರ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿದ್ಯುತ್ ತಯಾರಿಸಿದಂತೆ ಲಿಂಬೆಹಣ್ಣಿನ ಸಿಪ್ಪೆಯಲ್ಲಿ ಸ್ವಾದಿಷ್ಟವಾದ ಪುಷ್ಟಿಕರವಾದ ತಂಬುಳಿಯನ್ನು ಮಾಡಬಹುದೆಂದು ಪೌರಶಾಸ್ತ್ರಜ್ಞರು ಪ್ರಯೋಗಮಾಡಿದ್ದಾರೆ. ಒಬ್ಬರಾದರೆ ಒಂದು ಲಿಂಬೆಹಣ್ಣಿನ ಸಿಪ್ಪೆ ೧/೨ ಚಮಚೆ ಜೀರಿಗೆ, ಅಡಿಕೆ ಗಾತ್ರದ ಬೆಲ್ಲ ಅಥವಾ ತುಪ್ಪ, ಒಂದು ಲೋಟ ಸಿಹಿಮಜ್ಜಿಗೆ ೧/೪ ತೆಂಗಿನ ಕಾಯಿ ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣಿ ಸಾಮಗ್ರಿಗಳು.

ತಯಾರಿಸುವ ವಿಧಾನ : ರಸ ತೆಗೆದ ಲಿಂಬೆಹಣ್ಣಿನ ಸಿಪ್ಪೆಯನ್ನು ಸಣ್ಣದಾಗಿ ಹೆಚ್ಚಿಕೊಂಡು ಬಾಣಲೆಯನ್ನು ಒಲೆಯ ಮೇಲಿಟ್ಟು ಲಿಂಬೆಸಿಪ್ಪೆಯನ್ನು ಹಾಕಿ ತುಪ್ಪುವನ್ನು ಹಾಕಬೇಕು. ಅದನ್ನು ಮಗಚುತ್ತ ಇದ್ದು ಕಂದು ಬಣ್ಣ ಬಂದಾಗ ಜೀರಿಗೆಯಲ್ಲಿ ಒಣಮೆಣಸನ್ನು ಹಾಕಿ ಹುರಿದುಕೊಳ್ಳಬೇಕು. ನಂತರ ತೆಂಗಿನ ತುರಿಯೊಂದಿಗೆ ನಯವಾಗಿ ರುಬ್ಬಿ ತೆಗೆದು ರುಚಿಗೆ ತಕ್ಕಷ್ಟು ಉಪ್ಪು ಮತ್ತು ಮಜ್ಜಿಗೆಯನ್ನು ಹಾಕಿ ಒಗ್ಗರಣಿ ಹಾಕಬೇಕು. ಮಜ್ಜಿಗೆಯ ಬದಲು ಹುಣಸೆಹುಳಿ ಹಾಕಿ ಗಟ್ಟಿಯಾಗಿ ತೆಗೆದರೆ ಚಟ್ನಿಯೂ ಆಗುತ್ತದೆ. ತಂಬುಳಿಯೂ ಆಗುತ್ತದೆ.

ಅಜೀರ್ಣವಾದರೆ ಕೊತ್ತಂಬರಿ ರಸ ಸಿದ್ಧಿ : ಜಾಸ್ತಿ ಊಟವಾದಾಗ ಅಥವಾ ಹೊಟ್ಟೆಯೊಳಗೆ ಗ್ಯಾಸ್ ತುಂಬಿಕೊಂಡು ಹೊಟ್ಟೆ ಉಬ್ಬರಿಸಿದಂತಾದಾಗ ಇಂಗ್ಲಿಷ್‌ ಔಷಧಿ ಪಡೆಯುವುದಕ್ಕಿಂತ ಪಾಕಶಾಸ್ತ್ರಜ್ಞರು ಇತೀಚಿಗೆ ಒಂದು ವಿಧಾನವನು ಕಂಡು ಹಿಡಿದಿದಾರೆ. ಸಿದ್ಧ ಮಾಡಿಟ್ಟುಕೊಂಡ ಕೊತ್ತಂಬರಿ ಎಲೆಗಳ ರಸವನ್ನು ಮಜ್ಜಿಗೆಯಲ್ಲಿ ಬೆರಸಿ ಕುಡಿದರೆ ಹೊಟ್ಟೆ ತಣ್ಣಗಾಗಿ ಸಾರಾಗಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...