Home / ಲೇಖನ / ವಿಜ್ಞಾನ / ಎಲ್ಲಕ್ಕೂ ತಂದೆಯೇ ಕಾರಣ

ಎಲ್ಲಕ್ಕೂ ತಂದೆಯೇ ಕಾರಣ

ಗಂಡು ಮಕ್ಕಳ ವ್ಯಾಮೋಹ ಅತೀತವಾಗುತ್ತಿದೆ. ಗಂಡೆಂದರೆ ವಂಶವನ್ನು ಬೆಳೆಸುತ್ತಾನೆ. ಸಂಸಾರವನ್ನು ಸಾಕಿ ಸಲಹುತ್ತಾನೆ ಎಂಬಿತ್ಯಾದಿ ಕಾರಣಗಳನ್ನಿಡಲಾಗುತ್ತದೆ. ಹೆಣ್ಣಾದರೆ ಮದುವೆ, ಮುಂಜಿ, ವಡವೆ ವಸ್ತ್ರ, ವರದಕ್ಷಿಣೆ, ಕೊಡಬೇಕಾಗುತ್ತದೆ. ಅದಕ್ಕಾಗಿ ಹೆಣ್ಣು ಸಂತಾನವು ಒಂದೇ ಇರಲೆಂಬ ಹಂಬಲ ನಮ್ಮ ಮೂರ್ಖ ಜನಕ್ಕಿದೆ. ಹೆಣ್ಣು ಹೆಚ್ಚಾದರೆ ಒಂದು ಗಂಡು ಮಗುವನ್ನು ಹೆತ್ತುಕೋಡದ ಗಯ್ಯಾಳಿ, ಎಂದು ಹೆಣ್ಣಿಗೆ ಶಪಿಸಲಾಗುತ್ತದೆ. ನಿಜವಾಗಿ ನೋಡಿದರೆ ಇಂದು ಗೌರವ ಪ್ರತಿಷ್ಟೇ ವಂಶದ ವಾಹಿನಿಗೆ ಹೆಣ್ಣೇ ಬಹುತೇಕ ಕಡೆ ಸಾಬೀತಾಗುತ್ತಿದ್ದಾಳೆ ಮತ್ತು ತಂದೆ ತಾಯಿಯರನ್ನು ಸಲಹುತ್ತಾಳೆ, ಸಂತೈಸುತ್ತಾಳೆ. ಗಂಡುಮಕ್ಕಳಲ್ಲಿ ಬಹುತೇಕ ಜನ ಪೋಲಿ ಪುಂಡರಾಗಿ ಹಿಂಸೆಯಲ್ಲಿ ತೊಡಗಿ ಮರ್ಯಾದೆಯನ್ನು ಹರಾಜು ಹಾಕುವುದು ನಮ್ಮ ಜನಕ್ಕೆ ಕಾಣುವುದೇ ಇಲ್ಲ. ಇದೇನೇ ಇರಲಿ, ಇಲ್ಲಿ ಇದು ಮುಖ್ಯ ಪ್ರಶ್ನೆ ಅಲ್ಲವೇ ಅಲ್ಲ. ಈಗ ವೈಜ್ಞಾನಿಕವಾಗಿ ಚಿಂತಿಸೋಣ. ಯಾವುದೇ ಮಗುವಿನಲಿಂಗ ನಿರ್ಧಾರವಾಗುವುದು ತಂದೆಯಿಂದ ಮಾತ್ರವೆಂದು ವಿಜ್ಞಾನಿಗಳು ಹೇಳುತ್ತಾರೆ. ತಂದೆಯಾದವನು X ಕ್ರೋಮೊಜೋಮ್, ನೀಡಿದರೆ ತಾಯಿಯ x ಜತೆಗೂಡಿ XX ಆಗಿ ಹೆಣ್ಣಾಗುತ್ತದೆ. y ಕ್ರೋಮೋಜೋಮ್ ನೀಡಿದರೆ ತಾಯಿಯ x ಕ್ರೋಮೋಜೋಮ್ ಜೊತೆ ಸೇರಿ xy ಗಂಡಾಗುತ್ತದೆ. ಆದ್ದರಿಂದ ಗಂಡಿಗೆ ತಂದೆ ನೀಡುವ ಕ್ರೋಮೋಜೋಮ್ ಹೆಣ್ಣು ಅಥವಾ ಗಂಡನ್ನು ರೂಪಿಸುತ್ತದೆ. ವಾಸ್ತವ ಸ್ಥಿತಿ ಹೀಗಿರುವಾಗ ಹೆಂಡತಿಯಾದವಳು ಹೆಣ್ಣು ಹೆತ್ತರೆ ಗಂಡುಮಗುವಿಗಾಗಿ ಹಂಬಲಿಸಿ ಮತ್ತೆ ಮತ್ತೇ ಗರ್ಭಿಣಿಯಾಗುತ್ತಾಳೆ. ಇದೇ ರೀತಿ ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಅಂತರವಿಲ್ಲದೇ ಗರ್ಭೀಣಿಯಾದವಳು ದೈಹಿಕವಾಗಿ ಶಕ್ತಿಯನ್ನು ಕುಂದಿಸಿಕೊಳ್ಳುತ್ತಾಳೆ.

ತಿನ್ನುವ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕ ಆಹಾರವನ್ನು ಮನೆಯ ಯಜಮಾನನಿಗೆ ಅಂದರೆ ಗಂಡನಿಗೆ ಸಲ್ಲುವುದರಿಂದ ತಾಯಿ ತಿನ್ನುವ ಆಹಾರ ಪೌಷ್ಟಿಕವಾಗಿರುವುದಿಲ್ಲ. ಹೀಗೆ ದಿನಗಳೆದಂತೆ ಕೆಲವೊಮ್ಮೆ ಹೆರುವ ಮಗು ಅಪೌಷ್ಠಿಕತೆಯಿಂದ ಇದು ಸರಿಯಾದ ರೀತಿಯಲಿ ಬೆಳವಣಿಗೆಯಾಗದೇ ಹುಟ್ಟುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಯಾವುದೇ ಹೆಣ್ಣು ಅಥವಾ ಗಂಡು ಮಗುವಾಗಬೇಕಾದರೆ ಗಂಡಿನ x-ಅಥವಾ y ಕ್ರೋಮೊಜೋಮ್‌ಗಳೇ ಕಾರಣವಾಗಿರುತ್ತವೆ ಎಂಬ ಸತ್ಯವನ್ನು ಹೆಣ್ಣಿಗೆ ತೆಗಳುವವರು ಅರಿತುಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...